Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಸಾವಿನ ಆಘಾತದಲ್ಲಿದ್ದ ತಾಯಿ ವಿಜಯನಗರದಲ್ಲಿ ನಡೆದ ಅಪಘಾತದಲ್ಲಿ ಕೊನೆಯುಸಿರು

ತನ್ನ ಸ್ನೇಹಿತರ ಜೊತೆ ಜಗಳವಾಡಿಕೊಂಡಿದ್ದ ಮಗ ಸಾವಿನ ದಾರಿ ಹುಡುಕುತ್ತಾನೆ. ಆಗ ಆತ ಮನೆಯಲ್ಲಿ ನೇಣು ಬಿಗಿದುಕೊಳ್ಳುತ್ತಾನೆ. ವಿಚಾರ ತಿಳಿದ ತಕ್ಷಣ ಮಗನನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಮಗನ ಸಾವಿನ ಆಘಾತದಲ್ಲಿದ್ದ ತಾಯಿ ವಿಜಯನಗರದಲ್ಲಿ ನಡೆದ ಅಪಘಾತದಲ್ಲಿ ಕೊನೆಯುಸಿರು
ರಸ್ತೆ ಅಪಘಾತ
Follow us
TV9 Web
| Updated By: sandhya thejappa

Updated on:Aug 18, 2021 | 12:50 PM

ಬೆಂಗಳೂರು: ಮಗನ ಸಾವಿನ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ ರಸ್ತೆ ಅಪಘಾತದಲ್ಲಿ (Accident) ಕೊನೆಯುಸಿರೆಳೆದಿರುವ ದಾರುಣ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಸ್ನೇಹಿತರ ಜತೆ ಜಗಳವಾಡಿಕೊಂಡ ಮಗ ಆತ್ಮಹತ್ಯೆಗೆ ಯತ್ನಿಸಿದ್ದ. ಮನೆಯಲ್ಲಿ ನೇಣು ಬಿಗಿದುಕೊಂಡು ಅಸ್ವಸ್ಥಗೊಂಡಿದ್ದ ಮಗನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗ ಮೃತಪಟ್ಟಿದ್ದಾನೆ. ಈ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ, ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾಗಿ ಸಾವನ್ನಪ್ಪಿದ್ದಾರೆ.

ತನ್ನ ಸ್ನೇಹಿತರ ಜೊತೆ ಜಗಳವಾಡಿಕೊಂಡಿದ್ದ ಮಗ ಸಾವಿನ ದಾರಿ ಹುಡುಕುತ್ತಾನೆ. ಆಗ ಆತ ಮನೆಯಲ್ಲಿ ನೇಣು ಬಿಗಿದುಕೊಳ್ಳುತ್ತಾನೆ. ವಿಚಾರ ತಿಳಿದ ತಕ್ಷಣ ಮಗನನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಮಗನ ಸಾವಿನ ಸುದ್ದಿ ಕೇಳಿ ತಾಯಿ ಲೀಲಾವತಿ ಆಸ್ಪತ್ರೆಯಿಂದ ಹೊರಬರುತ್ತಾಳೆ. ಈ ವೇಳೆ ರಸ್ತೆಯಲ್ಲಿ ಅಪಘಾತವಾಗಿ ಮೃತಪಟ್ಟಿದ್ದಾಳೆ. ಆತ್ಮಹತ್ಯೆ ಪ್ರಕರಣ ಸದ್ಯ ವಿಜಯನಗರ ಠಾಣೆಯಲ್ಲಿ ದಾಖಲಾಗಿದ್ದು, ಲೀಲಾವತಿ ಸಾವು ಪ್ರಕರಣ ವಿಜಯನಗರ ಸಂಚಾರಿ ಠಾಣೆಯಲ್ಲಿ ದಾಖಲಾಗಿದೆ.

ಡಿಸ್ಟರ್ಬ್ ಮಾಡ್ಬೇಡ ಅಮ್ಮ ಎಂದ ಮಗ ನೇಣಿಗೆ ಶರಣು ಆನ್​ಲೈನ್​ ಕ್ಲಾಸ್ ನಡೆಯುತ್ತಿದೆ ತೊಂದರೆ ಮಾಡಬೇಡ ಅಮ್ಮ ಎಂದು ರೂಮಿಗೆ ಹೋದ ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಸಂಭವಿಸಿದೆ. ಈ ಘಟನೆ ಎರಡು ದಿನದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾಡಿ ಪಟ್ಟಣದ ಬಿರ್ಲಾ ಕ್ವಾಟರ್ಸ್ ನಿವಾಸಿ ಗುರುಚರಣ್ ಉಡುಪಾ(17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಗುರುಚರಣ್ ಉಡುಪಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಸೆಕೆಂಡ್ ಪಿಯುಸಿ ಓದುತ್ತಿದ್ದ. ಕಳೆದ ಮಂಗಳವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಆನ್​ಲೈನ್​ ಕ್ಲಾಸ್ ಎಂದು ಮನೆಯ ಕೋಣೆಗೆ ಹೋಗಿದ್ದ ವಿದ್ಯಾರ್ಥಿ ರೂಮ್ ಲಾಕ್ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ

ಕಲಬುರಗಿ: ಪರಿಸರ ಪ್ರಿಯ ಗಣಪನ ಮೂರ್ತಿ ರಚನೆ; ರಾಸಾಯನಿಕ ಬಣ್ಣ ಬಳಕೆಗೆ ಬ್ರೇಕ್

ಸೂಪರ್ ​ಮಾರ್ಕೆಟ್​ನಲ್ಲಿ ಶಾಪಿಂಗ್​ಗಾಗಿ ಹೋದವರಿಗೆ ಕಂಡಿದ್ದು ಹೆಬ್ಬಾವು! ಗ್ರಾಹಕರು ಕಂಗಾಲು

(A mother who was in shock at death of her son has died in an accident at vijayanagara)

Published On - 12:50 pm, Wed, 18 August 21

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!