ಗಾಡಿ ತೊಳೆದು ಬರುವುದರೊಳಗೆ ಪತ್ನಿ, ಮಗಳು ಮಾಯ: ಬ್ರಕೀದ್​ ದಿನವೇ ಅಫ್ತರ್ ಹುಸೇನ್​ಗೆ ಶಾಕ್

ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಬೇಕೆಂದು ಗಾಡಿಯನ್ನು ತೊಳೆದು ಬರುವುದರೊಳಗೆ ಅಫ್ತರ್ ಹುಸೇನ್​ ಎನ್ನುವಾತನ ಪತ್ನಿ ಹಾಗೂ ಮಗಳು ದಿಢೀರ್ ನಾಪತ್ತೆಯಾಗಿದ್ದಾರೆ. ಇದರಿಂದ ಅಫ್ತರ್ ಕಂಗಾಲಾಗಿದ್ದಾನೆ.

ಗಾಡಿ ತೊಳೆದು ಬರುವುದರೊಳಗೆ ಪತ್ನಿ, ಮಗಳು ಮಾಯ: ಬ್ರಕೀದ್​ ದಿನವೇ ಅಫ್ತರ್ ಹುಸೇನ್​ಗೆ ಶಾಕ್
ಸಾಂದರ್ಭಿಕ ಚಿತ್ರ
Follow us
|

Updated on: Jun 29, 2023 | 3:23 PM

ಬೆಂಗಳೂರು: ಇಂದು (ಜೂನ್ 29) ಪ್ರಪಂಚದಾದ್ಯಂತ ಮುಸ್ಲಿಮರು ಬಕ್ರೀದ್(bakrid) ಹಬ್ಬವನ್ನು ಆಚರಿಸುತ್ತಿದ್ದಾರೆ. ಹೊಸ ಬಟ್ಟೆ ತೊಟ್ಟು, ಮನೆಯಲ್ಲಿ ಸಿಹಿ ಮಾಡಿ ಖುಷಿ ಖುಷಿಯಾಗಿ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಬಕ್ರೀದ್ ಹಬ್ಬದ ಸಂಭ್ರಮದಲ್ಲಿದ್ದ ಅಫ್ತರ್ ಹುಸೇನ್​ಗೆ ಆಘಾತವಾಗಿದೆ. ಹೌದು…ಗಾಡಿ ತೊಳೆದು ಬರುವುದರೊಳಗೆ ಅಫ್ತರ್ ಹುಸೇನ್​ನ ಪತ್ನಿ ಹಾಗೂ ಮಗಳು ನಾಪತ್ತೆಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನ ಹೆಬ್ಬಗೋಡಿ ಠಾಣಾ‌ ವ್ಯಾಪ್ತಿಯ ಬೊಮ್ಮಸಂದ್ರದಲ್ಲಿ ಈ ಘಟನೆ ನಡೆದಿದ್ದು, ಹಬ್ಬದ ಸಂಭ್ರಮದಲ್ಲಿದ್ದ  ಅಫ್ತರ್ ಹುಸೇನ್ ಕಂಗಾಲಾಗಿದ್ದಾನೆ.

ಇದನ್ನೂ ಓದಿ: ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಮುಸ್ಲಿಂ ಬಾಂಧವರಿಗೊಂದು ಕಿವಿಮಾತು ಹೇಳಿದ ಸಿದ್ದರಾಮಯ್ಯ

ವಾಟರ್ ಟ್ಯಾಂಕರ್ ಓಡಿಸಿ ಜೀವನ‌ ಸಾಗಿಸುತ್ತಿರುವ ಅಫ್ತರ್, ನಾಪತ್ತೆಯಾದ ಪತ್ನಿ ಮಗಳನ್ನು ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಒಂದೇ ಬಟ್ಟೆಯಲ್ಲಿ ಹೋಗಿದ್ದಾರೆ. ಅವರ ಬಳಿ ಹಣವೂ ಇಲ್ಲ, ಮೊಬೈಲ್ ಇಲ್ಲ. ಮಡದಿ ಮಕ್ಕಳಿಲ್ಲದೇ ಬಕ್ರಿದ್ ಹೇಗೆ ಆಚರಿಸಲಿ ಎಂದು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಗೋಡಿ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ. ಆದ್ರೆ, ನಾಪತ್ತೆಯಾದವರ ಬಳಿ ಮೊಬೈಲ್ ಇಲ್ಲದ ಕಾರಣ ಟ್ರ್ಯಾಕ್ ಮಾಡುವುದೇ ಪೊಲೀಸರಿಗೆ ಒಂದು ದೊಡ್ಡ ಸವಾಲಾಗಿದೆ.

ಅಸ್ಸಾಂ ಮೂಲದ ಅಫ್ತರ್ ಹುಸೇನ್ ಚಾಲಕನಾಗಿ ಕೆಲಸ ಮಾಡಿಕೊಂಡು ಪತ್ನಿ ಹಾಗೂ ಮಗಳ ಜೊತೆ ಬೆಂಗಳೂರಿನ ಬೊಮ್ಮಸಂದ್ರದಲ್ಲಿ ವಾಸವಿದ್ದಾನೆ. ಆದ್ರೆ, ಏಕಾಏಕಿ ಪತ್ನಿ ಹಾಗೂ ಮಗಳು ನಾಪತ್ತೆಯಾಗಿದ್ದರಿಂದ ಅಫ್ತರ್ ಹುಸೇನ್​ಗೆ ದಿಕ್ಕುತೋಚದಂತಾಗಿದ್ದು, ಹಬ್ಬದ ಸಂಭ್ರಮವನ್ನು ಕಸಿದುಕೊಂಡಿದೆ.

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ