Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಡಿ ತೊಳೆದು ಬರುವುದರೊಳಗೆ ಪತ್ನಿ, ಮಗಳು ಮಾಯ: ಬ್ರಕೀದ್​ ದಿನವೇ ಅಫ್ತರ್ ಹುಸೇನ್​ಗೆ ಶಾಕ್

ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಬೇಕೆಂದು ಗಾಡಿಯನ್ನು ತೊಳೆದು ಬರುವುದರೊಳಗೆ ಅಫ್ತರ್ ಹುಸೇನ್​ ಎನ್ನುವಾತನ ಪತ್ನಿ ಹಾಗೂ ಮಗಳು ದಿಢೀರ್ ನಾಪತ್ತೆಯಾಗಿದ್ದಾರೆ. ಇದರಿಂದ ಅಫ್ತರ್ ಕಂಗಾಲಾಗಿದ್ದಾನೆ.

ಗಾಡಿ ತೊಳೆದು ಬರುವುದರೊಳಗೆ ಪತ್ನಿ, ಮಗಳು ಮಾಯ: ಬ್ರಕೀದ್​ ದಿನವೇ ಅಫ್ತರ್ ಹುಸೇನ್​ಗೆ ಶಾಕ್
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Jun 29, 2023 | 3:23 PM

ಬೆಂಗಳೂರು: ಇಂದು (ಜೂನ್ 29) ಪ್ರಪಂಚದಾದ್ಯಂತ ಮುಸ್ಲಿಮರು ಬಕ್ರೀದ್(bakrid) ಹಬ್ಬವನ್ನು ಆಚರಿಸುತ್ತಿದ್ದಾರೆ. ಹೊಸ ಬಟ್ಟೆ ತೊಟ್ಟು, ಮನೆಯಲ್ಲಿ ಸಿಹಿ ಮಾಡಿ ಖುಷಿ ಖುಷಿಯಾಗಿ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಬಕ್ರೀದ್ ಹಬ್ಬದ ಸಂಭ್ರಮದಲ್ಲಿದ್ದ ಅಫ್ತರ್ ಹುಸೇನ್​ಗೆ ಆಘಾತವಾಗಿದೆ. ಹೌದು…ಗಾಡಿ ತೊಳೆದು ಬರುವುದರೊಳಗೆ ಅಫ್ತರ್ ಹುಸೇನ್​ನ ಪತ್ನಿ ಹಾಗೂ ಮಗಳು ನಾಪತ್ತೆಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನ ಹೆಬ್ಬಗೋಡಿ ಠಾಣಾ‌ ವ್ಯಾಪ್ತಿಯ ಬೊಮ್ಮಸಂದ್ರದಲ್ಲಿ ಈ ಘಟನೆ ನಡೆದಿದ್ದು, ಹಬ್ಬದ ಸಂಭ್ರಮದಲ್ಲಿದ್ದ  ಅಫ್ತರ್ ಹುಸೇನ್ ಕಂಗಾಲಾಗಿದ್ದಾನೆ.

ಇದನ್ನೂ ಓದಿ: ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಮುಸ್ಲಿಂ ಬಾಂಧವರಿಗೊಂದು ಕಿವಿಮಾತು ಹೇಳಿದ ಸಿದ್ದರಾಮಯ್ಯ

ವಾಟರ್ ಟ್ಯಾಂಕರ್ ಓಡಿಸಿ ಜೀವನ‌ ಸಾಗಿಸುತ್ತಿರುವ ಅಫ್ತರ್, ನಾಪತ್ತೆಯಾದ ಪತ್ನಿ ಮಗಳನ್ನು ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಒಂದೇ ಬಟ್ಟೆಯಲ್ಲಿ ಹೋಗಿದ್ದಾರೆ. ಅವರ ಬಳಿ ಹಣವೂ ಇಲ್ಲ, ಮೊಬೈಲ್ ಇಲ್ಲ. ಮಡದಿ ಮಕ್ಕಳಿಲ್ಲದೇ ಬಕ್ರಿದ್ ಹೇಗೆ ಆಚರಿಸಲಿ ಎಂದು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಗೋಡಿ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ. ಆದ್ರೆ, ನಾಪತ್ತೆಯಾದವರ ಬಳಿ ಮೊಬೈಲ್ ಇಲ್ಲದ ಕಾರಣ ಟ್ರ್ಯಾಕ್ ಮಾಡುವುದೇ ಪೊಲೀಸರಿಗೆ ಒಂದು ದೊಡ್ಡ ಸವಾಲಾಗಿದೆ.

ಅಸ್ಸಾಂ ಮೂಲದ ಅಫ್ತರ್ ಹುಸೇನ್ ಚಾಲಕನಾಗಿ ಕೆಲಸ ಮಾಡಿಕೊಂಡು ಪತ್ನಿ ಹಾಗೂ ಮಗಳ ಜೊತೆ ಬೆಂಗಳೂರಿನ ಬೊಮ್ಮಸಂದ್ರದಲ್ಲಿ ವಾಸವಿದ್ದಾನೆ. ಆದ್ರೆ, ಏಕಾಏಕಿ ಪತ್ನಿ ಹಾಗೂ ಮಗಳು ನಾಪತ್ತೆಯಾಗಿದ್ದರಿಂದ ಅಫ್ತರ್ ಹುಸೇನ್​ಗೆ ದಿಕ್ಕುತೋಚದಂತಾಗಿದ್ದು, ಹಬ್ಬದ ಸಂಭ್ರಮವನ್ನು ಕಸಿದುಕೊಂಡಿದೆ.

ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು