AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಡಿ ತೊಳೆದು ಬರುವುದರೊಳಗೆ ಪತ್ನಿ, ಮಗಳು ಮಾಯ: ಬ್ರಕೀದ್​ ದಿನವೇ ಅಫ್ತರ್ ಹುಸೇನ್​ಗೆ ಶಾಕ್

ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಬೇಕೆಂದು ಗಾಡಿಯನ್ನು ತೊಳೆದು ಬರುವುದರೊಳಗೆ ಅಫ್ತರ್ ಹುಸೇನ್​ ಎನ್ನುವಾತನ ಪತ್ನಿ ಹಾಗೂ ಮಗಳು ದಿಢೀರ್ ನಾಪತ್ತೆಯಾಗಿದ್ದಾರೆ. ಇದರಿಂದ ಅಫ್ತರ್ ಕಂಗಾಲಾಗಿದ್ದಾನೆ.

ಗಾಡಿ ತೊಳೆದು ಬರುವುದರೊಳಗೆ ಪತ್ನಿ, ಮಗಳು ಮಾಯ: ಬ್ರಕೀದ್​ ದಿನವೇ ಅಫ್ತರ್ ಹುಸೇನ್​ಗೆ ಶಾಕ್
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Jun 29, 2023 | 3:23 PM

Share

ಬೆಂಗಳೂರು: ಇಂದು (ಜೂನ್ 29) ಪ್ರಪಂಚದಾದ್ಯಂತ ಮುಸ್ಲಿಮರು ಬಕ್ರೀದ್(bakrid) ಹಬ್ಬವನ್ನು ಆಚರಿಸುತ್ತಿದ್ದಾರೆ. ಹೊಸ ಬಟ್ಟೆ ತೊಟ್ಟು, ಮನೆಯಲ್ಲಿ ಸಿಹಿ ಮಾಡಿ ಖುಷಿ ಖುಷಿಯಾಗಿ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಬಕ್ರೀದ್ ಹಬ್ಬದ ಸಂಭ್ರಮದಲ್ಲಿದ್ದ ಅಫ್ತರ್ ಹುಸೇನ್​ಗೆ ಆಘಾತವಾಗಿದೆ. ಹೌದು…ಗಾಡಿ ತೊಳೆದು ಬರುವುದರೊಳಗೆ ಅಫ್ತರ್ ಹುಸೇನ್​ನ ಪತ್ನಿ ಹಾಗೂ ಮಗಳು ನಾಪತ್ತೆಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನ ಹೆಬ್ಬಗೋಡಿ ಠಾಣಾ‌ ವ್ಯಾಪ್ತಿಯ ಬೊಮ್ಮಸಂದ್ರದಲ್ಲಿ ಈ ಘಟನೆ ನಡೆದಿದ್ದು, ಹಬ್ಬದ ಸಂಭ್ರಮದಲ್ಲಿದ್ದ  ಅಫ್ತರ್ ಹುಸೇನ್ ಕಂಗಾಲಾಗಿದ್ದಾನೆ.

ಇದನ್ನೂ ಓದಿ: ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಮುಸ್ಲಿಂ ಬಾಂಧವರಿಗೊಂದು ಕಿವಿಮಾತು ಹೇಳಿದ ಸಿದ್ದರಾಮಯ್ಯ

ವಾಟರ್ ಟ್ಯಾಂಕರ್ ಓಡಿಸಿ ಜೀವನ‌ ಸಾಗಿಸುತ್ತಿರುವ ಅಫ್ತರ್, ನಾಪತ್ತೆಯಾದ ಪತ್ನಿ ಮಗಳನ್ನು ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಒಂದೇ ಬಟ್ಟೆಯಲ್ಲಿ ಹೋಗಿದ್ದಾರೆ. ಅವರ ಬಳಿ ಹಣವೂ ಇಲ್ಲ, ಮೊಬೈಲ್ ಇಲ್ಲ. ಮಡದಿ ಮಕ್ಕಳಿಲ್ಲದೇ ಬಕ್ರಿದ್ ಹೇಗೆ ಆಚರಿಸಲಿ ಎಂದು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಗೋಡಿ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ. ಆದ್ರೆ, ನಾಪತ್ತೆಯಾದವರ ಬಳಿ ಮೊಬೈಲ್ ಇಲ್ಲದ ಕಾರಣ ಟ್ರ್ಯಾಕ್ ಮಾಡುವುದೇ ಪೊಲೀಸರಿಗೆ ಒಂದು ದೊಡ್ಡ ಸವಾಲಾಗಿದೆ.

ಅಸ್ಸಾಂ ಮೂಲದ ಅಫ್ತರ್ ಹುಸೇನ್ ಚಾಲಕನಾಗಿ ಕೆಲಸ ಮಾಡಿಕೊಂಡು ಪತ್ನಿ ಹಾಗೂ ಮಗಳ ಜೊತೆ ಬೆಂಗಳೂರಿನ ಬೊಮ್ಮಸಂದ್ರದಲ್ಲಿ ವಾಸವಿದ್ದಾನೆ. ಆದ್ರೆ, ಏಕಾಏಕಿ ಪತ್ನಿ ಹಾಗೂ ಮಗಳು ನಾಪತ್ತೆಯಾಗಿದ್ದರಿಂದ ಅಫ್ತರ್ ಹುಸೇನ್​ಗೆ ದಿಕ್ಕುತೋಚದಂತಾಗಿದ್ದು, ಹಬ್ಬದ ಸಂಭ್ರಮವನ್ನು ಕಸಿದುಕೊಂಡಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​