AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಸವಾರರೇ ಎಚ್ಚರ! ಹಾಫ್ ಹೆಲ್ಮೆಟ್ ಧರಿಸಿದರೆ ಸಾವು ಖಚಿತ; ನಿಮ್ಹಾನ್ಸ್ ತಜ್ಞ ವೈದ್ಯರು, ಪೊಲೀಸರ ಅಧ್ಯಯನದಲ್ಲಿ ಮಹತ್ವದ ಅಂಶ ಬೆಳಕಿಗೆ

ಹಾಫ್ ಹೆಲ್ಮೆಟ್ ಧರಿಸುವದರಿಂದ ಜೀವಕ್ಕೆ ಕುತ್ತು ತರುತ್ತದೆ ಅಂತ ಅಧ್ಯಯನ ವೇಳೆ ತಿಳಿದುಬಂದಿದೆ. ನಗರದಲ್ಲಿ ನಡೆದ ಬೈಕ್ ಅಪಘಾತದ ಸಾವು ಪ್ರಕರಣಗಳ ಅಂಕಿ ಅಂಶಗಳನ್ನ ಪರಿಶೀಲಿಸಿದ ವೇಳೆ ಈ ಸತ್ಯ ಬಯಲಾಗಿದೆ. ಹಾಫ್ ಹೆಲ್ಮೆಟ್ ಬೈಕ್ ಸವಾರರ ಸಾವಿಗೆ ಕಾರಣವಾಗುತ್ತಿದೆ.

ಬೈಕ್ ಸವಾರರೇ ಎಚ್ಚರ! ಹಾಫ್ ಹೆಲ್ಮೆಟ್ ಧರಿಸಿದರೆ ಸಾವು ಖಚಿತ; ನಿಮ್ಹಾನ್ಸ್ ತಜ್ಞ ವೈದ್ಯರು, ಪೊಲೀಸರ ಅಧ್ಯಯನದಲ್ಲಿ ಮಹತ್ವದ ಅಂಶ ಬೆಳಕಿಗೆ
ಹಾಫ್ ಹೆಲ್ಮೆಟ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jan 25, 2022 | 9:37 AM

Share

ಬೆಂಗಳೂರು: ಯಾರ ಆಯಸ್ಸು ಎಲ್ಲಿವರೆಗೆ ಅಂತ ಯಾರಿಗೂ ಗೊತ್ತಿರಲ್ಲ. ಆದರೆ ಪ್ರತಿಯೊಬ್ಬರಿಗೂ ತಮ್ಮ ಜೀವದ ಬಗ್ಗೆ ಕಾಳಜಿ ಮುಖ್ಯ. ಬೈಕ್ (Bike) ಅಪಘಾತದಲ್ಲಿ ಅದೆಷ್ಟೊ ಜನರ ಉಸಿರು ನಿಂತಿದೆ. ಹೀಗಾಗಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ (Helmet) ಧರಿಸಬೇಕು ಅಂತ ಕಾನೂನಿದೆ. ಆದರೆ ಈ ನಿಯಮದ ಕಾಳಜಿ ಕೆಲ ಜನರಿಗೆ ಇನ್ನೂ ಅರ್ಥವೇ ಆಗಿಲ್ಲ. ಹೀಗಾಗಿ ಬೇಕಾಬಿಟ್ಟಿ ಹೆಲ್ಮೆಟ್ ಧರಿಸದೇ ಓಡಾಡುತ್ತಾರೆ. ಇನ್ನು ಕೆಲವರು ದಂಡ ಕಟ್ಟುವುದನ್ನು ತಪ್ಪಿಸಲು ಹೆಲ್ಮೆಟ್ ಧರಿಸುತ್ತಾರೆ. ಇದೇನೇಯಿರಲಿ, ಈ ಹೆಲ್ಮೆಟ್ ವಿಚಾರಕ್ಕೆ ಸಂಬಂಧಿಸಿ ನಿಮ್ಹಾನ್ಸ್ ಮತ್ತು ಪೊಲೀಸರು ನಡೆಸಿದ ಅಧ್ಯಯನದಲ್ಲಿ ಮಹತ್ವದ ಅಂಶಗಳು ಬೆಳಕಿಗೆ ಬಂದಿದೆ.

ಹಾಫ್ ಹೆಲ್ಮೆಟ್ ಧರಿಸುವದರಿಂದ ಜೀವಕ್ಕೆ ಕುತ್ತು ತರುತ್ತದೆ ಅಂತ ಅಧ್ಯಯನ ವೇಳೆ ತಿಳಿದುಬಂದಿದೆ. ನಗರದಲ್ಲಿ ನಡೆದ ಬೈಕ್ ಅಪಘಾತದ ಸಾವು ಪ್ರಕರಣಗಳ ಅಂಕಿ ಅಂಶಗಳನ್ನ ಪರಿಶೀಲಿಸಿದ ವೇಳೆ ಈ ಸತ್ಯ ಬಯಲಾಗಿದೆ. ಹಾಫ್ ಹೆಲ್ಮೆಟ್ ಬೈಕ್ ಸವಾರರ ಸಾವಿಗೆ ಕಾರಣವಾಗುತ್ತಿದೆ. ಅಪಘಾತದ ವೇಳೆ ಹಾಫ್ ಹೆಲ್ಮೆಟ್ನಿಂದಲೇ ಹೆಚ್ಚು ಸಾವಾಗುತ್ತಿವೆ ಎಂಬ ಅಂಶ ನಿಮ್ಹಾನ್ಸ್ ಮತ್ತು ಪೊಲೀಸರು ನಡೆಸಿದ ಅಧ್ಯಯನದಲ್ಲಿ ಬೆಳಕಿಗೆ ಬಂದಿದೆ.

ನಿಮ್ಹಾನ್ಸ್ ತಜ್ಞ ವೈದ್ಯರು ಹಾಗೂ ಪೊಲೀಸರ ಅಧ್ಯಯನದಲ್ಲಿ ಕಂಡು ಬಂದ ಮಾಹಿತಿ ಏನು?

ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಸವಾರರ ಮರಣೋತ್ತರ ಪರೀಕ್ಷೆ ಅಧ್ಯಯನದಲ್ಲಿ ಅಪಘಾತದ ವೇಳೆ ಹಾಫ್ ಹೆಲ್ಮೆಟ್ ಸಾವಿಗೆ ಕಾರಣವಾಗುತ್ತಿದೆ. ಹಾಫ್ ಹೆಲ್ಮೆಟ್ ಹಾಕಿದಾಗ ಅದರ ಹಿಂಬದಿ, ಮೆದುಳ ಬಳ್ಳಿಯ ಬುಡಕ್ಕೆ ಹೊಡೆಯುತ್ತಂತೆ. ಈ ವೇಳೆ ಮೆದುಳ ಬಳ್ಳಿ ಅಲ್ಲೆ ಕಟ್ ಅಗುತ್ತದೆ. ಹೀಗಾಗಿ ಬೈಕ್ ಸವಾರರು ಘಟನಾ ಸ್ಥಳದಲ್ಲೇ ಸಾವಿಗೀಡಾಗುತ್ತಾರೆ ಅಂತ ಅಧ್ಯಯನದಲ್ಲಿ ತಿಳಿದುಬಂದಿದೆ.

ಕಳಪೆ ಹೆಲ್ಮೆಟ್ ಧರಿಸುವವರೇ ಹೆಚ್ಚು:

ಈ ಸಂಬಂಧ ನಗರದ 15 ಸ್ಥಳಗಳಲ್ಲಿ 90 ಸಾವಿರ ದ್ವಿಚಕ್ರ ವಾಹನ ಸವಾರರನ್ನು ಪರಿಶೀಲನೆ ಮಾಡಲಾಗಿದೆ. ಪರಿಶೀಲನೆ ವೇಳೆ ಕಳಪೆ ಹೆಲ್ಮೆಟ್ಗಳ ಬಳಕೆ ದೊಡ್ಡ ಪ್ರಮಾಣದಲ್ಲಿ ಪತ್ತೆಯಾಗಿದೆ. ಶೇಕಡಾ 60 ರಷ್ಟು ಜನ ಕಳಪೆ ದರ್ಜೆಯ ಹೆಲ್ಮೆಟ್ ಧರಿಸಿ ಸಂಚರಿಸುತ್ತಿದ್ದಾರೆ. ಶೇಕಡಾ 70 ರಷ್ಟು ಹಿಂಬದಿ ಸವಾರರು ಹೆಲ್ಮೆಟ್ ಧರಿಸುತ್ತಾರೆ. ಅದರಲ್ಲಿ ಶೇಕಡಾ 50 ರಷ್ಟು ಜನ ಕಳಪೆ ದರ್ಜೆಯ ಹೆಲ್ಮೆಟ್ ಧರಿಸುತ್ತಾರೆ.

ಸದ್ಯ ಹೆಲ್ಮೆಟ್ ಬಗ್ಗೆ 15 ದಿನ ಅರಿವು ಮೂಡಿಸಲು ಪೊಲೀಸರ ಚಿಂತನೆ ನಡೆಸಿದ್ದು, 15 ದಿನಗಳ ನಂತರ ಹಾಫ್ ಹೆಲ್ಮೆಟ್ ಹಾಕಿದರೆ ಹೆಲ್ಮೆಟ್ ಧರಿಸಿಯೇ ಇಲ್ಲ ಎಂದು ದಂಡ ಹಾಕಲು ನಿರ್ಧರಿಸಿದ್ದಾರೆ. ಈಗಾಗಲೇ ಟ್ರಾಫಿಕ್ ಪೊಲೀಸರು ನಗರದಲ್ಲಿ ಸಾರ್ವಜನಿಕರಿಗೆ ಹಾಫ್ ಹೆಲ್ಮೆಟ್ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ

ಮುಂಬೈನಲ್ಲಿ ದಾಖಲಾಗುತ್ತಿರುವ ಹೊಸ ಕೊವಿಡ್​ 19 ಕೇಸ್​ಗಳಲ್ಲಿ ಶೇ.89ರಷ್ಟು ಒಮಿಕ್ರಾನ್​ ಪ್ರಕರಣಗಳು; ಸಮೀಕ್ಷೆ ವರದಿ

ದೇವರ ದರ್ಶನ ಮಾಡುವ ಮುಂಚೆ ಈ ಕ್ರಮವನ್ನು ನೆನಪಿನಲ್ಲಿಡಿ, ಆಗಲೇ ದರ್ಶನದ ಫಲ ಪ್ರಾಪ್ತಿಯಾಗುವುದು

Published On - 9:31 am, Tue, 25 January 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?