AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಸವಾರರೇ ಎಚ್ಚರ! ಹಾಫ್ ಹೆಲ್ಮೆಟ್ ಧರಿಸಿದರೆ ಸಾವು ಖಚಿತ; ನಿಮ್ಹಾನ್ಸ್ ತಜ್ಞ ವೈದ್ಯರು, ಪೊಲೀಸರ ಅಧ್ಯಯನದಲ್ಲಿ ಮಹತ್ವದ ಅಂಶ ಬೆಳಕಿಗೆ

ಹಾಫ್ ಹೆಲ್ಮೆಟ್ ಧರಿಸುವದರಿಂದ ಜೀವಕ್ಕೆ ಕುತ್ತು ತರುತ್ತದೆ ಅಂತ ಅಧ್ಯಯನ ವೇಳೆ ತಿಳಿದುಬಂದಿದೆ. ನಗರದಲ್ಲಿ ನಡೆದ ಬೈಕ್ ಅಪಘಾತದ ಸಾವು ಪ್ರಕರಣಗಳ ಅಂಕಿ ಅಂಶಗಳನ್ನ ಪರಿಶೀಲಿಸಿದ ವೇಳೆ ಈ ಸತ್ಯ ಬಯಲಾಗಿದೆ. ಹಾಫ್ ಹೆಲ್ಮೆಟ್ ಬೈಕ್ ಸವಾರರ ಸಾವಿಗೆ ಕಾರಣವಾಗುತ್ತಿದೆ.

ಬೈಕ್ ಸವಾರರೇ ಎಚ್ಚರ! ಹಾಫ್ ಹೆಲ್ಮೆಟ್ ಧರಿಸಿದರೆ ಸಾವು ಖಚಿತ; ನಿಮ್ಹಾನ್ಸ್ ತಜ್ಞ ವೈದ್ಯರು, ಪೊಲೀಸರ ಅಧ್ಯಯನದಲ್ಲಿ ಮಹತ್ವದ ಅಂಶ ಬೆಳಕಿಗೆ
ಹಾಫ್ ಹೆಲ್ಮೆಟ್ (ಪ್ರಾತಿನಿಧಿಕ ಚಿತ್ರ)
TV9 Web
| Updated By: Digi Tech Desk|

Updated on:Jan 25, 2022 | 9:37 AM

Share

ಬೆಂಗಳೂರು: ಯಾರ ಆಯಸ್ಸು ಎಲ್ಲಿವರೆಗೆ ಅಂತ ಯಾರಿಗೂ ಗೊತ್ತಿರಲ್ಲ. ಆದರೆ ಪ್ರತಿಯೊಬ್ಬರಿಗೂ ತಮ್ಮ ಜೀವದ ಬಗ್ಗೆ ಕಾಳಜಿ ಮುಖ್ಯ. ಬೈಕ್ (Bike) ಅಪಘಾತದಲ್ಲಿ ಅದೆಷ್ಟೊ ಜನರ ಉಸಿರು ನಿಂತಿದೆ. ಹೀಗಾಗಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ (Helmet) ಧರಿಸಬೇಕು ಅಂತ ಕಾನೂನಿದೆ. ಆದರೆ ಈ ನಿಯಮದ ಕಾಳಜಿ ಕೆಲ ಜನರಿಗೆ ಇನ್ನೂ ಅರ್ಥವೇ ಆಗಿಲ್ಲ. ಹೀಗಾಗಿ ಬೇಕಾಬಿಟ್ಟಿ ಹೆಲ್ಮೆಟ್ ಧರಿಸದೇ ಓಡಾಡುತ್ತಾರೆ. ಇನ್ನು ಕೆಲವರು ದಂಡ ಕಟ್ಟುವುದನ್ನು ತಪ್ಪಿಸಲು ಹೆಲ್ಮೆಟ್ ಧರಿಸುತ್ತಾರೆ. ಇದೇನೇಯಿರಲಿ, ಈ ಹೆಲ್ಮೆಟ್ ವಿಚಾರಕ್ಕೆ ಸಂಬಂಧಿಸಿ ನಿಮ್ಹಾನ್ಸ್ ಮತ್ತು ಪೊಲೀಸರು ನಡೆಸಿದ ಅಧ್ಯಯನದಲ್ಲಿ ಮಹತ್ವದ ಅಂಶಗಳು ಬೆಳಕಿಗೆ ಬಂದಿದೆ.

ಹಾಫ್ ಹೆಲ್ಮೆಟ್ ಧರಿಸುವದರಿಂದ ಜೀವಕ್ಕೆ ಕುತ್ತು ತರುತ್ತದೆ ಅಂತ ಅಧ್ಯಯನ ವೇಳೆ ತಿಳಿದುಬಂದಿದೆ. ನಗರದಲ್ಲಿ ನಡೆದ ಬೈಕ್ ಅಪಘಾತದ ಸಾವು ಪ್ರಕರಣಗಳ ಅಂಕಿ ಅಂಶಗಳನ್ನ ಪರಿಶೀಲಿಸಿದ ವೇಳೆ ಈ ಸತ್ಯ ಬಯಲಾಗಿದೆ. ಹಾಫ್ ಹೆಲ್ಮೆಟ್ ಬೈಕ್ ಸವಾರರ ಸಾವಿಗೆ ಕಾರಣವಾಗುತ್ತಿದೆ. ಅಪಘಾತದ ವೇಳೆ ಹಾಫ್ ಹೆಲ್ಮೆಟ್ನಿಂದಲೇ ಹೆಚ್ಚು ಸಾವಾಗುತ್ತಿವೆ ಎಂಬ ಅಂಶ ನಿಮ್ಹಾನ್ಸ್ ಮತ್ತು ಪೊಲೀಸರು ನಡೆಸಿದ ಅಧ್ಯಯನದಲ್ಲಿ ಬೆಳಕಿಗೆ ಬಂದಿದೆ.

ನಿಮ್ಹಾನ್ಸ್ ತಜ್ಞ ವೈದ್ಯರು ಹಾಗೂ ಪೊಲೀಸರ ಅಧ್ಯಯನದಲ್ಲಿ ಕಂಡು ಬಂದ ಮಾಹಿತಿ ಏನು?

ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಸವಾರರ ಮರಣೋತ್ತರ ಪರೀಕ್ಷೆ ಅಧ್ಯಯನದಲ್ಲಿ ಅಪಘಾತದ ವೇಳೆ ಹಾಫ್ ಹೆಲ್ಮೆಟ್ ಸಾವಿಗೆ ಕಾರಣವಾಗುತ್ತಿದೆ. ಹಾಫ್ ಹೆಲ್ಮೆಟ್ ಹಾಕಿದಾಗ ಅದರ ಹಿಂಬದಿ, ಮೆದುಳ ಬಳ್ಳಿಯ ಬುಡಕ್ಕೆ ಹೊಡೆಯುತ್ತಂತೆ. ಈ ವೇಳೆ ಮೆದುಳ ಬಳ್ಳಿ ಅಲ್ಲೆ ಕಟ್ ಅಗುತ್ತದೆ. ಹೀಗಾಗಿ ಬೈಕ್ ಸವಾರರು ಘಟನಾ ಸ್ಥಳದಲ್ಲೇ ಸಾವಿಗೀಡಾಗುತ್ತಾರೆ ಅಂತ ಅಧ್ಯಯನದಲ್ಲಿ ತಿಳಿದುಬಂದಿದೆ.

ಕಳಪೆ ಹೆಲ್ಮೆಟ್ ಧರಿಸುವವರೇ ಹೆಚ್ಚು:

ಈ ಸಂಬಂಧ ನಗರದ 15 ಸ್ಥಳಗಳಲ್ಲಿ 90 ಸಾವಿರ ದ್ವಿಚಕ್ರ ವಾಹನ ಸವಾರರನ್ನು ಪರಿಶೀಲನೆ ಮಾಡಲಾಗಿದೆ. ಪರಿಶೀಲನೆ ವೇಳೆ ಕಳಪೆ ಹೆಲ್ಮೆಟ್ಗಳ ಬಳಕೆ ದೊಡ್ಡ ಪ್ರಮಾಣದಲ್ಲಿ ಪತ್ತೆಯಾಗಿದೆ. ಶೇಕಡಾ 60 ರಷ್ಟು ಜನ ಕಳಪೆ ದರ್ಜೆಯ ಹೆಲ್ಮೆಟ್ ಧರಿಸಿ ಸಂಚರಿಸುತ್ತಿದ್ದಾರೆ. ಶೇಕಡಾ 70 ರಷ್ಟು ಹಿಂಬದಿ ಸವಾರರು ಹೆಲ್ಮೆಟ್ ಧರಿಸುತ್ತಾರೆ. ಅದರಲ್ಲಿ ಶೇಕಡಾ 50 ರಷ್ಟು ಜನ ಕಳಪೆ ದರ್ಜೆಯ ಹೆಲ್ಮೆಟ್ ಧರಿಸುತ್ತಾರೆ.

ಸದ್ಯ ಹೆಲ್ಮೆಟ್ ಬಗ್ಗೆ 15 ದಿನ ಅರಿವು ಮೂಡಿಸಲು ಪೊಲೀಸರ ಚಿಂತನೆ ನಡೆಸಿದ್ದು, 15 ದಿನಗಳ ನಂತರ ಹಾಫ್ ಹೆಲ್ಮೆಟ್ ಹಾಕಿದರೆ ಹೆಲ್ಮೆಟ್ ಧರಿಸಿಯೇ ಇಲ್ಲ ಎಂದು ದಂಡ ಹಾಕಲು ನಿರ್ಧರಿಸಿದ್ದಾರೆ. ಈಗಾಗಲೇ ಟ್ರಾಫಿಕ್ ಪೊಲೀಸರು ನಗರದಲ್ಲಿ ಸಾರ್ವಜನಿಕರಿಗೆ ಹಾಫ್ ಹೆಲ್ಮೆಟ್ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ

ಮುಂಬೈನಲ್ಲಿ ದಾಖಲಾಗುತ್ತಿರುವ ಹೊಸ ಕೊವಿಡ್​ 19 ಕೇಸ್​ಗಳಲ್ಲಿ ಶೇ.89ರಷ್ಟು ಒಮಿಕ್ರಾನ್​ ಪ್ರಕರಣಗಳು; ಸಮೀಕ್ಷೆ ವರದಿ

ದೇವರ ದರ್ಶನ ಮಾಡುವ ಮುಂಚೆ ಈ ಕ್ರಮವನ್ನು ನೆನಪಿನಲ್ಲಿಡಿ, ಆಗಲೇ ದರ್ಶನದ ಫಲ ಪ್ರಾಪ್ತಿಯಾಗುವುದು

Published On - 9:31 am, Tue, 25 January 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!