AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲುವೆ ಒತ್ತುವರಿ ಜಾಗ ತೆರವುಗೊಳಿಸುವಂತೆ ಬೆಂಗಳೂರಿನ ರೈನ್​ಬೋ ಡ್ರೈವ್​ ಲೇಔಟ್ ವಿಲ್ಲಾಗಳಿಗೆ ನೋಟಿಸ್

ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕೆಂದು, 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್​ ನೋಟಿಸ್​ ಜಾರಿಗೊಳಿಸಿದ್ದಾರೆ. ಮಳೆಯಿಂದ ರೈನ್​ಬೋ ಡ್ರೈವ್ ಲೇಔಟ್ ಜಲಾವೃತಗೊಂಡಿತ್ತು.

ಕಾಲುವೆ ಒತ್ತುವರಿ ಜಾಗ ತೆರವುಗೊಳಿಸುವಂತೆ ಬೆಂಗಳೂರಿನ ರೈನ್​ಬೋ ಡ್ರೈವ್​ ಲೇಔಟ್ ವಿಲ್ಲಾಗಳಿಗೆ ನೋಟಿಸ್
ಮಳೆಯಿಂದ ಜಲಾವೃತಗೊಂಡಿದ್ದ ರೈನ್​ಬೋ ಡ್ರೈವ್ ಲೇಔಟ್
TV9 Web
| Edited By: |

Updated on:Sep 11, 2022 | 9:19 AM

Share

ಬೆಂಗಳೂರು: ಮಳೆ ನೀರು ನಿಂತು ರೈನ್ ಬೋ ಡ್ರೈವ್ ಲೇಔಟ್ ದೇಶಾದ್ಯಂತ ಹೆಸರುವಾಸಿಯಾಗಿತ್ತು. ಸದ್ಯ ಕಾಲುವೆ ಒತ್ತುವರಿ ಜಾಗ ತೆರವುಗೊಳಿಸುವಂತೆ ನಗರದ ರೈನ್​ಬೋ ಡ್ರೈವ್​ ಲೇಔಟ್ ವಿಲ್ಲಾಗಳಿಗೆ ಬೆಂಗಳೂರು ಪೂರ್ವ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದಾರೆ. ಒತ್ತುವರಿ ಜಾಗವನ್ನು ತೆರವು ಮಾಡದಿದ್ರೆ ನಾವೇ ಮಾಡುತ್ತೇವೆ. ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕೆಂದು, 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್​ ನೋಟಿಸ್​ ಜಾರಿಗೊಳಿಸಿದ್ದಾರೆ. ಮಳೆಯಿಂದ ರೈನ್​ಬೋ ಡ್ರೈವ್ ಲೇಔಟ್ ಜಲಾವೃತಗೊಂಡಿತ್ತು. ರೈನ್​ಬೋ ಡ್ರೈವ್ ಲೇಔಟ್​​ನಲ್ಲಿ ಜಿಲ್ಲಾಡಳಿತ ಸರ್ವೆ ನಡೆಸಿದ್ದು, ಕಾಲುವೆ ಒತ್ತುವರಿ ಮಾಡಿ ವಿಲ್ಲಾಗಳನ್ನ ನಿರ್ಮಿಸಿರುವುದು ಬಹಿರಂಗವಾಗಿದೆ. ಇದೀಗ ವಿಲ್ಲಾಗಳ‌ನ್ನ ತೆರವುಗೊಳಿಸುವಂತೆ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಮಳೆ ನಿಂತು ಹೋದ ಮೇಲೆ ರೈನ್ ಬೋ ಡ್ರೈವ್​ಗೆ ಆತಂಕ ಶುರುವಾಗಿದ್ದು, ಮಳೆ‌ ಹಿನ್ನೆಲೆ ಸುಮ್ಮನಿದ್ದ ಅಧಿಕಾರಿಗಳು, ಈಗ ತೆರವು ಮಾಡಲೇ ಬೇಕೆಂದು ಪಟ್ಟು ಹಿಡಿದಿದ್ದಾರೆ.

ಜಲಾವೃತಗೊಂಡ ರೈನ್ ಬೋ ಬಡಾವಣೆ, ನಿಲ್ಲದ ಜನರ ಸಂಕಷ್ಟ

ಸರ್ಜಾಪುರ ರಸ್ತೆಯಲ್ಲಿರುವ ರೈನ್ ಬೋ ಡ್ರೈವ್ ಬಡಾವಣೆ ನಿವಾಸಿಗಳ ಟೈಮ್ ಸರಿ ಇಲ್ಲ ಅನ್ಸುತ್ತೆ.. ಮಳೆ ಬಂತು ಅಂದ್ರೆ ಸಾಕು ಬಡಾವಣೆಗೆ ಕೆರೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿದೆ, ಕಳೆದ ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಮಹದೇವಪುರ ಕ್ಷೇತ್ರದ ದೊಡ್ಡಕನ್ನಹಳ್ಳಿಯ ರೈನ್ ಬೋ ಡ್ರೈವ್ ಬಡಾವಣೆ ನೀರು ನುಗ್ಗಿ ಇಡೀ ಬಡಾವಣೆ ಜಲಾವೃತಗೊಂಡು ನಿವಾಸಿಗಳು ಮನೆಯಿಂದ ಹೊರಬರಲು ಹಾಗೂ ಒಳ ಹೋಗಲು ಸಾಧ್ಯವಾಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು, ಮೂರು ದಿನ ಕಳೆದ್ರೂ ಸಹ ಬಡಾವಣೆಯಲ್ಲಿ ತುಂಬಿದ್ದ ನೀರು ಕಂಪ್ಲೀಟ್ ತಗ್ಗದ ಹಿನ್ನೆಲೆ ಲೇಔಟ್ ನಿವಾಸಿಗಳು ಪರದಾಡುವ ಸ್ಥಿತಿ ಇದೆ.

ಇಡೀ ಬಡಾವಣೆಯು ದ್ವೀಪದಂತಾಗಿ ಮಾರ್ಪಟ್ಟಿದ್ದರು ಸಹ ಸ್ಥಳೀಯ ಶಾಸಕರಾದ ಅರವಿಂದ್ ಲಿಂಬಾವಳಿ ಮಾತ್ರ ಇತ್ತ ತಲೆಯನ್ನು ಹಾಕಿ ನೋಡಿಲ್ಲ. ಬಿಬಿಎಂಪಿ ಅಧಿಕಾರಿಗಳಂತೂ ಬಡಾವಣೆಯ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಜನರು ಲೇಔಟ್ ರಸ್ತೆಯಲ್ಲಿ ನಿಂತಿರುವ ನೀರು ದಾಟಲು ಹರಸಾಹಸ ಪಡುವಂತಾಗಿತ್ತು . ಇನ್ನು ತುರ್ತು ಸೇವೆ ನೀಡಲು ಆಟೋ ಚಾಲಕರು ಪ್ರಾಣವನ್ನು ಕೈಯಲ್ಲಿ ಹಿಡಿದು ಆಟೋ ಚಾಲನೆ ಮಾಡುವ ಸ್ಥಿತಿ ಆ ಭಾಗದಲ್ಲಿ ಕಂಡು ಬಂದಿದೆ. ಸಿಟಿಯಲ್ಲಿ ಕೊಂಚ ಮಳೆ ಕಡಿಮೆಯಾದ್ರೂ ನಿವಾಸಿಗಳು ಮಾತ್ರ ಪರದಾಡುತ್ತಿದ್ದು ರೈನ್ಬೋ ಡ್ರೈವ್ ಬಡಾವಣೆ ಮಳೆಯಿಂದಾಗಿ ಡ್ರೈನೇಜ್ ಬಡಾವಣೆ ಆಗಿ ಮಾರ್ಪಟ್ಟಿದ್ದು ಸ್ಥಳೀಯ ನಿವಾಸಿಗಳು ಮಾತ್ರ ಪರದಾಟ ಪಡುವಂತಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:13 am, Sun, 11 September 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!