Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವು

ಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ 2:30ರ ಸುಮಾರಿಗೆ ನಡೆದಿದೆ.

ಬೆಂಗಳೂರು: ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 16, 2022 | 5:11 PM

ಬೆಂಗಳೂರು: ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ 2:30ರ ಸುಮಾರಿಗೆ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿ. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು

ಚಾಮರಾಜನಗರ: ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ ನಡೆದಿದೆ. ಚಂದ್ರು(19), ಸುನಿಲ್(27) ಮೃತ ದುರ್ದೈವಿಗಳು. ಮೃತರು ಮಂಡ್ಯ ಜಿಲ್ಲೆಯ ಹಲಗೂರು ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕರು ಕುಟುಂಬದವರ ಜತೆ ದೇಗುಲಕ್ಕೆ ಬಂದಿದ್ದಾಗ ಪೂಜೆ ನಂತರ ಕಾಲುವೆಯಲ್ಲಿ ಈಜಲು ತೆರಳಿದ್ದಾಗ ದುರಂತ ಸಂಭವಿಸಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಯುವಕ ಸಾವು

ರಾಮನಗರ: ಕನಕಪುರ  ತಾಲ್ಲೂಕಿನ ಚುಂಚಿಫಾಲ್ಸ್ ಬಳಿ  ಯುವಕ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಪ್ರವೀಣ್ ಚಂದ್ರ (26) ಮೃತ ಯುವಕ. ಮೃತ ಯುವಕ ಬೆಂಗಳೂರಿನ ಶಂಕರಮಠದ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದನು. ಪ್ರವೀಣ್ ಚಂದ್ರ ಭಾನುವಾರ ತನ್ನ ಇಬ್ಬರು ಸ್ನೇಹಿತರ ಜೊತೆ ಚುಂಚಿಫಾಲ್ಸ್​ಗೆ ಬಂದಿದ್ದನು.

ಈ ವೇಳೆ ಅಪಾಯದ ಸ್ಥಳದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಚಾರಿ ಬಿದ್ದು ಸಾವನ್ನಪ್ಪಿದ್ದಾನೆ. ಇಂದು ಚುಂಚಿಪಾಲ್ಸ್ ನಿಂದ ಒಂದು ಕಿಲೋಮೀಟರ್ ದೂರದಲ್ಲಿದೆ ಮೃತ ದೇಹ ಪತ್ತೆಯಾಗಿದೆ. ಸಾತನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿರವಾರ- ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರು ಅಪಘಾತದಲ್ಲಿ ಸಾವು, ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ

ರಾಯಚೂರು: ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟರು. ಸಿರವಾರ ತಾಲೂಕಿನ ಕಲ್ಲೂರಿನ ಭೀಮವ್ವ ಮಾಸಳಿ (50), ಬಸವರಾಜ್ ಮಾಸಳಿ (40), ನರೇಶ್ (8) ಮೃತರು. ಸಂಬಂಧಿಯೊಬ್ಬರ ಅಂತ್ಯಕ್ರಿಯೆಗಾಗಿ ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಇವರು ತೆರಳುತ್ತಿದ್ದರು. ಬೈಕ್​ಗೆ ಡಿಕ್ಕಿಯಾದ ನಂತರ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ಪಕ್ಕದ ಜಮೀನಿಗೆ ನುಗ್ಗಿತು. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಅರ್ಬಾಜ್ ಹತ್ಯೆ: ಮೂವರ ಬಂಧನ ಆರೋಪಿ ಬಂಧನ

ಬೆಂಗಳೂರು: ಕೆ.ಜಿ.ಹಳ್ಳಿಯಲ್ಲಿ ವಿದ್ಯಾರ್ಥಿ ಅರ್ಬಾಜ್ ಹತ್ಯೆಗೈದ ಪ್ರಮುಖ ಆರೋಪಿ ಮೊಹಮ್ಮದ್ ಸಾದ್ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ನಾಲ್ವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅರ್ಬಾಜ್ ಮತ್ತು ಅವನ ಸ್ನೇಹಿತರು ಮೊಹಮ್ಮದ್ ಸಾದ್​​ನನ್ನು ನಿಂದಿಸಿದ್ದರು. ಇದಕ್ಕೆ ಪ್ರತಿಯಾಗಿ ಆಗಸ್ಟ್ 12ರಂದು ಹತ್ಯೆ ಮಾಡಿದ್ದೆ ಎಂದು ಮೊಹಮದ್ ಸಾದ್ ತಪ್ಪೊಪ್ಪಿಕೊಂಡಿದ್ದ.

ಟಿಬೆಟಿಯನ್ ಕಾಲೊನಿಯಲ್ಲಿ ಗಾಂಜಾ ಪತ್ತೆ

ಕಾರವಾರ: ಮುಂಡಗೋಡ ತಾಲ್ಲೂಕಿನ ಟಿಬೆಟಿಯನ್‌ ಕಾಲೋನಿಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 7 ಕೆಜಿ ಹಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಮಗಲ್ ಚೋಟೇನ್ ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿ: ಇಬ್ಬರಿಗೆ ಚಾಕು ಇರಿತ

ಹುಬ್ಬಳ್ಳಿ: ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಹಣಕಾಸಿನ ವಿಷಯದ ವಿವಾದ ವಿಕೋಪಕ್ಕೆ ಹೋಗಿ ಸನ್ಮೂನ್ ಕಬಾಡೆ ಎಂಬಾತನಿಗೆ ಅನಿಲ್ ಎಂಬಾತ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 5:08 pm, Tue, 16 August 22

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ