AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆಯಲು ಯತ್ನ! ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

ಸಿದ್ದಲಿಂಗೇಶ ಮೊದಲು ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಿದ್ದ. ಅನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ.

ಬೆಂಗಳೂರು: ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆಯಲು ಯತ್ನ! ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 30, 2022 | 9:26 AM

Share

ಬೆಂಗಳೂರು: ವ್ಯಕ್ತಿಯೊಬ್ಬ ಅನುಕಂಪದ ಅಧಾರದ ಮೇಲೆ ನಕಲಿ ಅಂಕಪಟ್ಟಿ (Mark Card) ನೀಡಿ ಉದ್ಯೋಗ (Job) ಪಡೆಯಲು ಯತ್ನಿಸಿದ್ದಾನೆ. ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಹುದ್ದೆ ಪಡೆಯಲು ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಸಿದ್ಧಲಿಂಗೇಶ ಗಂಗಾಧರ ಬುದ್ನಿ ವಿರುದ್ಧ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ವಿಷ್ಣುವರ್ಧನ ರೆಡ್ಡಿಯಿಂದ ದೂರು ದಾಖಲಾಗಿದೆ. ಇಲಾಖೆಯ ಸೇವೆಯಲ್ಲಿರುವಾಗಲೆ ಸಿದ್ಧಲಿಂಗೇಶ ತಂದೆ ಗಂಗಾಧರ ಬುದ್ನಿ ಮರಣ ಹೊಂದಿದ್ದರು. ಅನುಕಂಪದ ಅಧಾರದ ಮೇಲೆ ಕೆಲಸ ನೀಡುವಂತೆ ಸಿದ್ದಲಿಂಗೇಶ ಪ್ರಸ್ತಾವನೆ ಸಲ್ಲಿಸಿದ್ದ.

ಸಿದ್ದಲಿಂಗೇಶ ಮೊದಲು ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಿದ್ದ. ಅನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ. ನೇಮಕಾತಿ ಸಂದರ್ಭದಲ್ಲಿ ದಾಖಲಾತಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ. ಇಲಾಖೆಗೆ ವಂಚಿಸಿರುವ ಆರೋಪದಡಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.

ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: ಹುಬ್ಬಳ್ಳಿ: ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಅಮಿತ್ ಪ್ರಭು, ಅಂಕಿತಾ ಕಾಮತ್, ಬೆಂಗಳೂರಿನ ದೀಪಕ್ ಶರಣಕುಮಾರ್ ಎಂಬುವವರು ಹುಬ್ಬಳ್ಳಿಯ ಸಿಬಿಟಿ ಕಿಲ್ಲಾದ ವಿನೋದ್ ರಾಠೋಡ್​ಗೆ ವಂಚನೆ ಮಾಡಿದ್ದಾಗಿ ಆರೋಪ ಕೇಳಿಬಂದಿದೆ. ಆರೋಪಿಗಳು ಬಿಎಲ್ಎಚ್ ಹೈಟೆಕ್ ಪ್ರೈ.ಲಿ ಎಂಬ ಕಂಪನಿ ಹೆಸರಿನಲ್ಲಿ 3.5 ಕೊಟಿ ರೂಪಾಯಿ ವಂಚನೆ ಮಾಡಿದ್ದಾರಂತೆ. ಪ್ರಕರಣ ಸಂಬಂಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ

ಹಿಜಾಬ್ ವಿವಾದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗದಂತೆ ಸಾಮಾಜಿಕ ಜಾಲತಾಣದಲ್ಲಿ ತಿಳುವಳಿಕೆ ಅಭಿಯಾನ ಆರಂಭ

40 ವರ್ಷದ ನಂತರವೂ ಮಹಿಳೆಯರು ಫಿಟ್ ಆಗಿರುವುದು ಹೇಗೆ? ಇಲ್ಲಿದೆ ಮಾಹಿತಿ

Published On - 9:24 am, Wed, 30 March 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ