AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆಯಲು ಯತ್ನ! ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

ಸಿದ್ದಲಿಂಗೇಶ ಮೊದಲು ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಿದ್ದ. ಅನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ.

ಬೆಂಗಳೂರು: ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆಯಲು ಯತ್ನ! ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Mar 30, 2022 | 9:26 AM

ಬೆಂಗಳೂರು: ವ್ಯಕ್ತಿಯೊಬ್ಬ ಅನುಕಂಪದ ಅಧಾರದ ಮೇಲೆ ನಕಲಿ ಅಂಕಪಟ್ಟಿ (Mark Card) ನೀಡಿ ಉದ್ಯೋಗ (Job) ಪಡೆಯಲು ಯತ್ನಿಸಿದ್ದಾನೆ. ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಹುದ್ದೆ ಪಡೆಯಲು ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಸಿದ್ಧಲಿಂಗೇಶ ಗಂಗಾಧರ ಬುದ್ನಿ ವಿರುದ್ಧ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ವಿಷ್ಣುವರ್ಧನ ರೆಡ್ಡಿಯಿಂದ ದೂರು ದಾಖಲಾಗಿದೆ. ಇಲಾಖೆಯ ಸೇವೆಯಲ್ಲಿರುವಾಗಲೆ ಸಿದ್ಧಲಿಂಗೇಶ ತಂದೆ ಗಂಗಾಧರ ಬುದ್ನಿ ಮರಣ ಹೊಂದಿದ್ದರು. ಅನುಕಂಪದ ಅಧಾರದ ಮೇಲೆ ಕೆಲಸ ನೀಡುವಂತೆ ಸಿದ್ದಲಿಂಗೇಶ ಪ್ರಸ್ತಾವನೆ ಸಲ್ಲಿಸಿದ್ದ.

ಸಿದ್ದಲಿಂಗೇಶ ಮೊದಲು ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಿದ್ದ. ಅನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ. ನೇಮಕಾತಿ ಸಂದರ್ಭದಲ್ಲಿ ದಾಖಲಾತಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ. ಇಲಾಖೆಗೆ ವಂಚಿಸಿರುವ ಆರೋಪದಡಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.

ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: ಹುಬ್ಬಳ್ಳಿ: ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಅಮಿತ್ ಪ್ರಭು, ಅಂಕಿತಾ ಕಾಮತ್, ಬೆಂಗಳೂರಿನ ದೀಪಕ್ ಶರಣಕುಮಾರ್ ಎಂಬುವವರು ಹುಬ್ಬಳ್ಳಿಯ ಸಿಬಿಟಿ ಕಿಲ್ಲಾದ ವಿನೋದ್ ರಾಠೋಡ್​ಗೆ ವಂಚನೆ ಮಾಡಿದ್ದಾಗಿ ಆರೋಪ ಕೇಳಿಬಂದಿದೆ. ಆರೋಪಿಗಳು ಬಿಎಲ್ಎಚ್ ಹೈಟೆಕ್ ಪ್ರೈ.ಲಿ ಎಂಬ ಕಂಪನಿ ಹೆಸರಿನಲ್ಲಿ 3.5 ಕೊಟಿ ರೂಪಾಯಿ ವಂಚನೆ ಮಾಡಿದ್ದಾರಂತೆ. ಪ್ರಕರಣ ಸಂಬಂಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ

ಹಿಜಾಬ್ ವಿವಾದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗದಂತೆ ಸಾಮಾಜಿಕ ಜಾಲತಾಣದಲ್ಲಿ ತಿಳುವಳಿಕೆ ಅಭಿಯಾನ ಆರಂಭ

40 ವರ್ಷದ ನಂತರವೂ ಮಹಿಳೆಯರು ಫಿಟ್ ಆಗಿರುವುದು ಹೇಗೆ? ಇಲ್ಲಿದೆ ಮಾಹಿತಿ

Published On - 9:24 am, Wed, 30 March 22

ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ