AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆಯಲು ಯತ್ನ! ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

ಸಿದ್ದಲಿಂಗೇಶ ಮೊದಲು ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಿದ್ದ. ಅನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ.

ಬೆಂಗಳೂರು: ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆಯಲು ಯತ್ನ! ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Mar 30, 2022 | 9:26 AM

Share

ಬೆಂಗಳೂರು: ವ್ಯಕ್ತಿಯೊಬ್ಬ ಅನುಕಂಪದ ಅಧಾರದ ಮೇಲೆ ನಕಲಿ ಅಂಕಪಟ್ಟಿ (Mark Card) ನೀಡಿ ಉದ್ಯೋಗ (Job) ಪಡೆಯಲು ಯತ್ನಿಸಿದ್ದಾನೆ. ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಹುದ್ದೆ ಪಡೆಯಲು ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಸಿದ್ಧಲಿಂಗೇಶ ಗಂಗಾಧರ ಬುದ್ನಿ ವಿರುದ್ಧ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ವಿಷ್ಣುವರ್ಧನ ರೆಡ್ಡಿಯಿಂದ ದೂರು ದಾಖಲಾಗಿದೆ. ಇಲಾಖೆಯ ಸೇವೆಯಲ್ಲಿರುವಾಗಲೆ ಸಿದ್ಧಲಿಂಗೇಶ ತಂದೆ ಗಂಗಾಧರ ಬುದ್ನಿ ಮರಣ ಹೊಂದಿದ್ದರು. ಅನುಕಂಪದ ಅಧಾರದ ಮೇಲೆ ಕೆಲಸ ನೀಡುವಂತೆ ಸಿದ್ದಲಿಂಗೇಶ ಪ್ರಸ್ತಾವನೆ ಸಲ್ಲಿಸಿದ್ದ.

ಸಿದ್ದಲಿಂಗೇಶ ಮೊದಲು ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಿದ್ದ. ಅನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ. ನೇಮಕಾತಿ ಸಂದರ್ಭದಲ್ಲಿ ದಾಖಲಾತಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ. ಇಲಾಖೆಗೆ ವಂಚಿಸಿರುವ ಆರೋಪದಡಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.

ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: ಹುಬ್ಬಳ್ಳಿ: ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಅಮಿತ್ ಪ್ರಭು, ಅಂಕಿತಾ ಕಾಮತ್, ಬೆಂಗಳೂರಿನ ದೀಪಕ್ ಶರಣಕುಮಾರ್ ಎಂಬುವವರು ಹುಬ್ಬಳ್ಳಿಯ ಸಿಬಿಟಿ ಕಿಲ್ಲಾದ ವಿನೋದ್ ರಾಠೋಡ್​ಗೆ ವಂಚನೆ ಮಾಡಿದ್ದಾಗಿ ಆರೋಪ ಕೇಳಿಬಂದಿದೆ. ಆರೋಪಿಗಳು ಬಿಎಲ್ಎಚ್ ಹೈಟೆಕ್ ಪ್ರೈ.ಲಿ ಎಂಬ ಕಂಪನಿ ಹೆಸರಿನಲ್ಲಿ 3.5 ಕೊಟಿ ರೂಪಾಯಿ ವಂಚನೆ ಮಾಡಿದ್ದಾರಂತೆ. ಪ್ರಕರಣ ಸಂಬಂಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ

ಹಿಜಾಬ್ ವಿವಾದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗದಂತೆ ಸಾಮಾಜಿಕ ಜಾಲತಾಣದಲ್ಲಿ ತಿಳುವಳಿಕೆ ಅಭಿಯಾನ ಆರಂಭ

40 ವರ್ಷದ ನಂತರವೂ ಮಹಿಳೆಯರು ಫಿಟ್ ಆಗಿರುವುದು ಹೇಗೆ? ಇಲ್ಲಿದೆ ಮಾಹಿತಿ

Published On - 9:24 am, Wed, 30 March 22

Follow Us
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ