AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆಯಲು ಯತ್ನ! ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

ಸಿದ್ದಲಿಂಗೇಶ ಮೊದಲು ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಿದ್ದ. ಅನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ.

ಬೆಂಗಳೂರು: ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಪಡೆಯಲು ಯತ್ನ! ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Mar 30, 2022 | 9:26 AM

Share

ಬೆಂಗಳೂರು: ವ್ಯಕ್ತಿಯೊಬ್ಬ ಅನುಕಂಪದ ಅಧಾರದ ಮೇಲೆ ನಕಲಿ ಅಂಕಪಟ್ಟಿ (Mark Card) ನೀಡಿ ಉದ್ಯೋಗ (Job) ಪಡೆಯಲು ಯತ್ನಿಸಿದ್ದಾನೆ. ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಹುದ್ದೆ ಪಡೆಯಲು ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಸಿದ್ಧಲಿಂಗೇಶ ಗಂಗಾಧರ ಬುದ್ನಿ ವಿರುದ್ಧ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ವಿಷ್ಣುವರ್ಧನ ರೆಡ್ಡಿಯಿಂದ ದೂರು ದಾಖಲಾಗಿದೆ. ಇಲಾಖೆಯ ಸೇವೆಯಲ್ಲಿರುವಾಗಲೆ ಸಿದ್ಧಲಿಂಗೇಶ ತಂದೆ ಗಂಗಾಧರ ಬುದ್ನಿ ಮರಣ ಹೊಂದಿದ್ದರು. ಅನುಕಂಪದ ಅಧಾರದ ಮೇಲೆ ಕೆಲಸ ನೀಡುವಂತೆ ಸಿದ್ದಲಿಂಗೇಶ ಪ್ರಸ್ತಾವನೆ ಸಲ್ಲಿಸಿದ್ದ.

ಸಿದ್ದಲಿಂಗೇಶ ಮೊದಲು ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದ. ಬಾಗಲಕೋಟೆ ಉಪನಿರ್ದೇಶಕರ ಕಚೇರಿಗೆ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಿದ್ದ. ಅನಂತರ ಪದವಿ ಪ್ರಮಾಣ ಪತ್ರ ನೀಡಿ ಪ್ರಥಮ ದರ್ಜೆ ಹುದ್ದೆ ನೀಡುವಂತೆ ಕೇಳಿಕೊಂಡಿದ್ದ. ನೇಮಕಾತಿ ಸಂದರ್ಭದಲ್ಲಿ ದಾಖಲಾತಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ. ಇಲಾಖೆಗೆ ವಂಚಿಸಿರುವ ಆರೋಪದಡಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.

ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: ಹುಬ್ಬಳ್ಳಿ: ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಅಮಿತ್ ಪ್ರಭು, ಅಂಕಿತಾ ಕಾಮತ್, ಬೆಂಗಳೂರಿನ ದೀಪಕ್ ಶರಣಕುಮಾರ್ ಎಂಬುವವರು ಹುಬ್ಬಳ್ಳಿಯ ಸಿಬಿಟಿ ಕಿಲ್ಲಾದ ವಿನೋದ್ ರಾಠೋಡ್​ಗೆ ವಂಚನೆ ಮಾಡಿದ್ದಾಗಿ ಆರೋಪ ಕೇಳಿಬಂದಿದೆ. ಆರೋಪಿಗಳು ಬಿಎಲ್ಎಚ್ ಹೈಟೆಕ್ ಪ್ರೈ.ಲಿ ಎಂಬ ಕಂಪನಿ ಹೆಸರಿನಲ್ಲಿ 3.5 ಕೊಟಿ ರೂಪಾಯಿ ವಂಚನೆ ಮಾಡಿದ್ದಾರಂತೆ. ಪ್ರಕರಣ ಸಂಬಂಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ

ಹಿಜಾಬ್ ವಿವಾದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗದಂತೆ ಸಾಮಾಜಿಕ ಜಾಲತಾಣದಲ್ಲಿ ತಿಳುವಳಿಕೆ ಅಭಿಯಾನ ಆರಂಭ

40 ವರ್ಷದ ನಂತರವೂ ಮಹಿಳೆಯರು ಫಿಟ್ ಆಗಿರುವುದು ಹೇಗೆ? ಇಲ್ಲಿದೆ ಮಾಹಿತಿ

Published On - 9:24 am, Wed, 30 March 22

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್