AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವು

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ, ಜುಲೈ 9ರಂದು ನಾಗರಬಾವಿ ಸರ್ಕಲ್ ಬಳಿ ಅಪಘಾತ ಸಂಭವಿಸಿತ್ತು. ಸ್ಥಳದಲ್ಲೇ ವ್ಯಕ್ತಿಯ ಪತ್ನಿ ಸಾವನ್ನಪ್ಪಿದ್ದರು, ಇದೀಗ ಪತಿಯು ಕೂಡ ಕೊನೆಯುಸಿರೆಳೆದಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಯೋಗೇಂದ್ರ ಮೃತಪಟ್ಟಿದ್ದಾರೆ.

ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವು
BBMP LorryImage Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 14, 2022 | 3:46 PM

Share

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ, ಜುಲೈ 9ರಂದು ನಾಗರಬಾವಿ ಸರ್ಕಲ್ ಬಳಿ ಅಪಘಾತ ಸಂಭವಿಸಿತ್ತು. ಸ್ಥಳದಲ್ಲೇ ವ್ಯಕ್ತಿಯ ಪತ್ನಿ ಸಾವನ್ನಪ್ಪಿದ್ದರು, ಇದೀಗ ಪತಿಯು ಕೂಡ ಕೊನೆಯುಸಿರೆಳೆದಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಯೋಗೇಂದ್ರ ಮೃತಪಟ್ಟಿದ್ದಾರೆ.

ನಾಗರಬಾವಿ ಸರ್ಕಲ್ ಬಳಿ ಕಸದ ಲಾರಿಯು ದಂಪತಿ ಇದ್ದ ಬೈಕ್​ಗೆ ಡಿಕ್ಕಿ ಹೊಡೆದಿತ್ತು . ಜುಲೈ 9ರಂದು ರಾತ್ರಿ ವಿಜಯಾ ಮೃತಪಟ್ಟಿದ್ದರು. ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಏಪ್ರಿಲ್​ 19ರಂದು ಇಂಥದ್ದೇ ಘಟನೆ ನಡೆದಿತ್ತು: ದ್ವಿಚಕ್ರ ವಾಹನಕ್ಕೆ ಕಸದ ಲಾರಿ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ನಗರದ ನಾಯಂಡಹಳ್ಳಿ ಬಳಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಸೇಂಟ್ ಮಾರ್ಕ್ಸ್​ ರಸ್ತೆಯಿಂದ ರಾಜರಾಜೇಶ್ವರಿ ನಗರಕ್ಕೆ ಹೋಗುತ್ತಿದ್ದ ಪದ್ಮಿನಿ ಮೃತರು.

ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಸ್ಕೂಟರ್​ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಚಾಲಕ ಲಾರಿಯನ್ನು ರಸ್ತೆಯಲ್ಲಿಯೇ ನಿಲ್ಲಿಸಿ ಪರಾರಿಯಾದ. ಕಸದ ಲಾರಿಗಳಿಂದ ಪದೇ‌ಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ತ್ಯಾಜ್ಯ ವಿಲೇವಾರಿ ವಾಹನಗಳ ಕ್ರಮಬದ್ಧ ತಪಾಸಣೆ ಮತ್ತು ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಎಲ್ಲ ಕಾಂಪ್ಯಾಕ್ಟರ್, ಟಿಪ್ಪರ್​ಗಳು ಫಿಟ್​ನೆಸ್ ಸರ್ಟಿಫಿಕೆಟ್ ಹೊಂದಿರಬೇಕು. ವೇಗ ನಿಯಂತ್ರಕಗಳನ್ನು ಅಳವಡಿಸಿರಬೇಕು ಎಂದು ಹೇಳಿದ್ದರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ