AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಹಗ್ ಮಾಡು ಯಾರಿಗೂ ಹೇಳಲ್ಲ: ಪಾಸ್​ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಯುವತಿಗೆ ಪೊಲೀಸ್ ಕಾನ್​ಸ್ಟೇಬಲ್ ಕಿರುಕುಳ

ಪಾಸ್​ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಪೊಲೀಸ್ ಕಾನ್​ಸ್ಟೇಬಲ್ ಒಬ್ಬ ಟೆಕ್ಕಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಸಂಬಂಧ ಪಶ್ಚಿಮ ವಿಭಾಗ ಡಿಸಿಪಿಗೆ ಯುವತಿ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಪೊಲೀಸ್ ಕಾನ್ಸ್​ಟೇಬಲ್​ನನ್ನು ಅಮಾನತುಗೊಳಿಸಿದ್ದಾರೆ. ಘಟನೆಯ ಪೂರ್ಣ ವಿವರ ಇಲ್ಲಿದೆ.

ಒಂದು ಹಗ್ ಮಾಡು ಯಾರಿಗೂ ಹೇಳಲ್ಲ: ಪಾಸ್​ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಯುವತಿಗೆ ಪೊಲೀಸ್ ಕಾನ್​ಸ್ಟೇಬಲ್ ಕಿರುಕುಳ
ಪಾಸ್​ಪೋರ್ಟ್ (ಸಾಂದರ್ಭಿಕ ಚಿತ್ರ)
ಜಗದೀಶ ಬಿ.
| Edited By: |

Updated on: Dec 02, 2024 | 9:10 AM

Share

ಬೆಂಗಳೂರು, ಡಿಸೆಂಬರ್ 2: ‘ಒಂದೇ ಒಂದು ಹಗ್ ಮಾಡು, ಯಾರಿಗೂ ಹೇಳುವುದಿಲ್ಲ’ ಎಂದು ಪಾಸ್​ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಪೊಲೀಸ್ ಕಾನ್​ಸ್ಟೇಬಲ್ ಒಬ್ಬರು ಮಹಿಳಾ ಟೆಕ್ಕಿಗೆ ಕಿರುಕುಳ ನೀಡಿದ ಆರೋಪ ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಮಹಿಳಾ ಟೆಕ್ಕಿಯ ಆರೋಪದ ಬೆನ್ನಲ್ಲೇ, ಅಸಭ್ಯ ವರ್ತನೆ ತೋರಿದ ಕಾನ್​ಸ್ಟೇಬಲ್ ಕಿರಣ್ ಎಂಬಾತನನ್ನು ಅಮಾನತುಗೊಳಿಸಲಾಗಿದೆ.

ಬಾಪೂಜಿನಗರದ ಯುವತಿಯೊಬ್ಬರು ಇತ್ತೀಚಗೆ ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ನಂತರ, ಪಾಸ್​ಪೋರ್ಟ್ ವೆರಿಫಿಕೇಷನ್​ಗೆಂದು ಪೊಲೀಸ್ ಕಾನ್​ಸ್ಟೇಬಲ್ ಕಿರಣ್ ಯುವತಿಯ ಮನೆಗೆ ತೆರಳಿದ್ದ. ಎರಡ್ಮೂರು ಬಾರಿ ಕಿರಣ್ ಯುವತಿಯ ಮನೆಗೆ ಹೋಗಿದ್ದ, ಅಲ್ಲದೆ ಅಸಭ್ಯ ವರ್ತನೆ ತೋರಿದ್ದ ಎಂದು ಆರೋಪಿಸಲಾಗಿದೆ.

ಹಠಾತ್ ಮನೆ ಒಳ ಪ್ರವೇಶಿಸಿ ಬಾಗಿಲು ಮುಚ್ಚಿದ ಪೊಲೀಸ್

ಪಾಸ್​ಪೋರ್ಟ್ ವೆರಿಫಿಕೇಷನ್​ ನೆಪದಲ್ಲಿ ಯುವತಿಯ ಮನೆಗೆ ಬಂದ ಪೊಲೀಸ್ ಕಾನ್​ಸ್ಟೇಬಲ್ ಕಿರಣ್, ಮನೆ ಒಳ ಪ್ರವೇಶಿಸಿ ಅರ್ಧ ಬಾಗಿಲು ಮುಚ್ಚಿದ್ದಾನೆ. ನಂತರ ಯುವತಿ ಬಳಿ, ‘‘ನಿಮ್ಮಣ್ಣ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆ. ಇದನ್ನೇ ನೆಪವಾಗಿಟ್ಟುಕೊಂಡು ನಿನ್ನ ಪಾಸ್​ಪೋರ್ಟ್ ಕ್ಯಾನ್ಸಲ್ ಮಾಡಿಸುತ್ತೇನೆ. ನೀನು ನನಗೆ ಸಹಕರಿಸಬೇಕು. ಬಾಗಿಲು ಹಾಕು’’ ಎಂದು ಯುವತಿ ಬಳಿ ಪೊಲೀಸ್ ಕಾನ್​ಸ್ಟೇಬಲ್ ಆಗ್ರಹಿಸಿದ್ದ ಎಂದು ದೂರಲಾಗಿದೆ. ಅಲ್ಲದೆ, ಯುವತಿ ಒಪ್ಪದಿದ್ದಾಗ ತಾನೇ ಹೋಗಿ ಬಾಗಿಲು ಮುಚ್ಚಿದ್ದಾನೆ. ಅಲ್ಲದೆ, ಯಾರಿಗೂ ಹೇಳಬೇಡ, ಒಂದೇ ಒಂದ್ ಸಲ ಹಗ್ ಮಾಡುತ್ತೇನೆ ಎಂದಿದ್ದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ: ಲವರ್​ನ ಕೊಂದು ಆತ್ಮಹತ್ಯೆಗೆ ಆನ್​ಲೈನ್​ನಲ್ಲಿ ಹಗ್ಗ ಆರ್ಡರ್​: ಪ್ರೀತಿ ಕೊಂದ ಕೊಲೆಗಾರನ ಸ್ಫೋಟಕ ಅಂಶ ಬೆಳಕಿಗೆ

ಯುವತಿಯ ಅಣ್ಣನ ಕಾಣುತ್ತಿದ್ದಂತೆ ವರಸೆ ಬದಲು!

ಯುವತಿ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಂತೆಯೇ ಆಕೆಯ ಅಣ್ಣ ಮತ್ತೊಂದು ಕೊಠಡಿಯಲ್ಲಿ ಇರುವುದು ಪೊಲೀಸ್ ಕಾನ್​​ಸ್ಟೇಬಲ್ ಗಮನಕ್ಕೆ ಬಂದಿದೆ. ಆಗ ವರಸೆ ಬದಲಾಯಿಸಿದ ಕಿರಣ್, ‘‘ನೀನು ಒಳಗೆ ಇದ್ದಿ ಎಂದೇ ನಾನೆ ಹಿಂಗೆ ಮಾತನಾಡಿದ್ದು, ನಿನ್ನ ತಂಗಿ ನನ್ನ ತಂಗಿ ಇದ್ದಹಾಗೆ’’ ಎಂದಿದ್ದ. ಈ ಬಗ್ಗೆ ಪಶ್ಚಿಮ ವಿಭಾಗ ಡಿಸಿಪಿಗೆ ಯುವತಿ ದೂರು ನೀಡಿದ್ದರು. ನಂತರ ಡಿಸಿಪಿ ಗಿರೀಶ್ ತನಿಖೆ ನಡೆಸಿ ಪೇದೆ ಕಿರಣ್​ನನ್ನು ಅಮಾನತುಗೊಳಿಸಿದ್ದಾರೆ.‌

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ