AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಹಗ್ ಮಾಡು ಯಾರಿಗೂ ಹೇಳಲ್ಲ: ಪಾಸ್​ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಯುವತಿಗೆ ಪೊಲೀಸ್ ಕಾನ್​ಸ್ಟೇಬಲ್ ಕಿರುಕುಳ

ಪಾಸ್​ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಪೊಲೀಸ್ ಕಾನ್​ಸ್ಟೇಬಲ್ ಒಬ್ಬ ಟೆಕ್ಕಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಸಂಬಂಧ ಪಶ್ಚಿಮ ವಿಭಾಗ ಡಿಸಿಪಿಗೆ ಯುವತಿ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಪೊಲೀಸ್ ಕಾನ್ಸ್​ಟೇಬಲ್​ನನ್ನು ಅಮಾನತುಗೊಳಿಸಿದ್ದಾರೆ. ಘಟನೆಯ ಪೂರ್ಣ ವಿವರ ಇಲ್ಲಿದೆ.

ಒಂದು ಹಗ್ ಮಾಡು ಯಾರಿಗೂ ಹೇಳಲ್ಲ: ಪಾಸ್​ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಯುವತಿಗೆ ಪೊಲೀಸ್ ಕಾನ್​ಸ್ಟೇಬಲ್ ಕಿರುಕುಳ
ಪಾಸ್​ಪೋರ್ಟ್ (ಸಾಂದರ್ಭಿಕ ಚಿತ್ರ)
ಜಗದೀಶ ಬಿ.
| Edited By: |

Updated on: Dec 02, 2024 | 9:10 AM

Share

ಬೆಂಗಳೂರು, ಡಿಸೆಂಬರ್ 2: ‘ಒಂದೇ ಒಂದು ಹಗ್ ಮಾಡು, ಯಾರಿಗೂ ಹೇಳುವುದಿಲ್ಲ’ ಎಂದು ಪಾಸ್​ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಪೊಲೀಸ್ ಕಾನ್​ಸ್ಟೇಬಲ್ ಒಬ್ಬರು ಮಹಿಳಾ ಟೆಕ್ಕಿಗೆ ಕಿರುಕುಳ ನೀಡಿದ ಆರೋಪ ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಮಹಿಳಾ ಟೆಕ್ಕಿಯ ಆರೋಪದ ಬೆನ್ನಲ್ಲೇ, ಅಸಭ್ಯ ವರ್ತನೆ ತೋರಿದ ಕಾನ್​ಸ್ಟೇಬಲ್ ಕಿರಣ್ ಎಂಬಾತನನ್ನು ಅಮಾನತುಗೊಳಿಸಲಾಗಿದೆ.

ಬಾಪೂಜಿನಗರದ ಯುವತಿಯೊಬ್ಬರು ಇತ್ತೀಚಗೆ ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ನಂತರ, ಪಾಸ್​ಪೋರ್ಟ್ ವೆರಿಫಿಕೇಷನ್​ಗೆಂದು ಪೊಲೀಸ್ ಕಾನ್​ಸ್ಟೇಬಲ್ ಕಿರಣ್ ಯುವತಿಯ ಮನೆಗೆ ತೆರಳಿದ್ದ. ಎರಡ್ಮೂರು ಬಾರಿ ಕಿರಣ್ ಯುವತಿಯ ಮನೆಗೆ ಹೋಗಿದ್ದ, ಅಲ್ಲದೆ ಅಸಭ್ಯ ವರ್ತನೆ ತೋರಿದ್ದ ಎಂದು ಆರೋಪಿಸಲಾಗಿದೆ.

ಹಠಾತ್ ಮನೆ ಒಳ ಪ್ರವೇಶಿಸಿ ಬಾಗಿಲು ಮುಚ್ಚಿದ ಪೊಲೀಸ್

ಪಾಸ್​ಪೋರ್ಟ್ ವೆರಿಫಿಕೇಷನ್​ ನೆಪದಲ್ಲಿ ಯುವತಿಯ ಮನೆಗೆ ಬಂದ ಪೊಲೀಸ್ ಕಾನ್​ಸ್ಟೇಬಲ್ ಕಿರಣ್, ಮನೆ ಒಳ ಪ್ರವೇಶಿಸಿ ಅರ್ಧ ಬಾಗಿಲು ಮುಚ್ಚಿದ್ದಾನೆ. ನಂತರ ಯುವತಿ ಬಳಿ, ‘‘ನಿಮ್ಮಣ್ಣ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆ. ಇದನ್ನೇ ನೆಪವಾಗಿಟ್ಟುಕೊಂಡು ನಿನ್ನ ಪಾಸ್​ಪೋರ್ಟ್ ಕ್ಯಾನ್ಸಲ್ ಮಾಡಿಸುತ್ತೇನೆ. ನೀನು ನನಗೆ ಸಹಕರಿಸಬೇಕು. ಬಾಗಿಲು ಹಾಕು’’ ಎಂದು ಯುವತಿ ಬಳಿ ಪೊಲೀಸ್ ಕಾನ್​ಸ್ಟೇಬಲ್ ಆಗ್ರಹಿಸಿದ್ದ ಎಂದು ದೂರಲಾಗಿದೆ. ಅಲ್ಲದೆ, ಯುವತಿ ಒಪ್ಪದಿದ್ದಾಗ ತಾನೇ ಹೋಗಿ ಬಾಗಿಲು ಮುಚ್ಚಿದ್ದಾನೆ. ಅಲ್ಲದೆ, ಯಾರಿಗೂ ಹೇಳಬೇಡ, ಒಂದೇ ಒಂದ್ ಸಲ ಹಗ್ ಮಾಡುತ್ತೇನೆ ಎಂದಿದ್ದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ: ಲವರ್​ನ ಕೊಂದು ಆತ್ಮಹತ್ಯೆಗೆ ಆನ್​ಲೈನ್​ನಲ್ಲಿ ಹಗ್ಗ ಆರ್ಡರ್​: ಪ್ರೀತಿ ಕೊಂದ ಕೊಲೆಗಾರನ ಸ್ಫೋಟಕ ಅಂಶ ಬೆಳಕಿಗೆ

ಯುವತಿಯ ಅಣ್ಣನ ಕಾಣುತ್ತಿದ್ದಂತೆ ವರಸೆ ಬದಲು!

ಯುವತಿ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಂತೆಯೇ ಆಕೆಯ ಅಣ್ಣ ಮತ್ತೊಂದು ಕೊಠಡಿಯಲ್ಲಿ ಇರುವುದು ಪೊಲೀಸ್ ಕಾನ್​​ಸ್ಟೇಬಲ್ ಗಮನಕ್ಕೆ ಬಂದಿದೆ. ಆಗ ವರಸೆ ಬದಲಾಯಿಸಿದ ಕಿರಣ್, ‘‘ನೀನು ಒಳಗೆ ಇದ್ದಿ ಎಂದೇ ನಾನೆ ಹಿಂಗೆ ಮಾತನಾಡಿದ್ದು, ನಿನ್ನ ತಂಗಿ ನನ್ನ ತಂಗಿ ಇದ್ದಹಾಗೆ’’ ಎಂದಿದ್ದ. ಈ ಬಗ್ಗೆ ಪಶ್ಚಿಮ ವಿಭಾಗ ಡಿಸಿಪಿಗೆ ಯುವತಿ ದೂರು ನೀಡಿದ್ದರು. ನಂತರ ಡಿಸಿಪಿ ಗಿರೀಶ್ ತನಿಖೆ ನಡೆಸಿ ಪೇದೆ ಕಿರಣ್​ನನ್ನು ಅಮಾನತುಗೊಳಿಸಿದ್ದಾರೆ.‌

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ