AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕಾಕ್‌ನಿಂದ ಬಂದವನ ಬ್ಯಾಗಲ್ಲಿತ್ತು ಹೆಬ್ಬಾವು, ಮೊಸಳೆ! ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ಜಪ್ತಿ

ಆರೋಪಿಯ ಬ್ಯಾಗ್​ ಅನ್ನು ತೆರೆದು ನೋಡಿದಾಗ, ಅದರಲ್ಲಿ ಜೀವಂತ ಪ್ರಾಣಿಗಳು ಮತ್ತು ಸರೀಸೃಪಗಳು ಕಂಡುಬಂದವು. ಮರಿ ಕಾಂಗರೊಂದು ಉಸಿರುಗಟ್ಟಿ ಮೃತಪಟ್ಟಿತ್ತು ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಬ್ಯಾಂಕಾಕ್‌ನಿಂದ ಬಂದವನ ಬ್ಯಾಗಲ್ಲಿತ್ತು ಹೆಬ್ಬಾವು, ಮೊಸಳೆ! ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ಜಪ್ತಿ
ಟ್ರ್ಯಾಲಿ ಬ್ಯಾಗ್​ನಲ್ಲಿ ಸಿಕ್ಕಿದ ಪ್ರಾಣಿಗಳು
ನವೀನ್ ಕುಮಾರ್ ಟಿ
| Edited By: |

Updated on:Aug 22, 2023 | 11:00 PM

Share

ಬೆಂಗಳೂರು, ಆಗಸ್ಟ್ 22: ವಿಮಾನದಲ್ಲಿ ಪ್ರಯಾಣ ಮಾಡಿ ಬಂದವರ ಟ್ರ್ಯಾಲಿ ಬ್ಯಾಗ್​​ನಲ್ಲಿ (Trolley Bag) ಹೆಬ್ಬಾವು, ಊಸರವಳ್ಳಿ, ಆಮೆ, ಮೊಸಳೆ ಮರಿ (Animals) ಇರಲು ಸಾಧ್ಯವೇ? ಅನುಮಾನವೇ ಬೇಡ. ಬರೀ ಇಷ್ಟೇ ಅಲ್ಲ, ಒಟ್ಟು 234 ಪ್ರಾಣಿಗಳು ಇದ್ದುದು ಪತ್ತೆಯಾಗಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಜಪ್ತಿ ಮಾಡಲಾಗಿದೆ. ಕೆಂಪೇಗೌಡ ಏರ್‌ಪೋರ್ಟ್‌ನ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಇಂಥದ್ದೊಂದು ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಪ್ರಾಣಿಗಳನ್ನು ವಿದೇಶದಿಂದ ಆಗಮಿಸಿದ್ದ ಪ್ರಯಾಣಿಕರೊಬ್ಬರು ಟ್ರ್ಯಾಲಿ ಬ್ಯಾಗ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದರು.

ಬ್ಯಾಂಕಾಕ್‌ನಿಂದ ‘ಎಫ್‌ಡಿ 137’ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕ ವಿವಿಧ ಪ್ರಾಣಿಗಳನ್ನು ಟ್ರ್ಯಾಲಿ ಬ್ಯಾಗ್​ನಲ್ಲಿ ಮರೆಮಾಚಿ ಸಾಗಿಸುತ್ತಿದ್ದ. ಈ ವೇಳೆ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಪ್ರಾಣಿಗಳು ಪತ್ತೆಯಾಗಿವೆ. ಆರೋಪಿಯು ಪ್ರಾಣಿಗಳನ್ನು ಬಾಕ್ಸ್‌ಗಳಲ್ಲಿ ತುಂಬಿಕೊಂಡು ದೊಡ್ಡ ಬ್ಯಾಗ್​ನಲ್ಲಿಟ್ಟುಕೊಂಡು ಬಂದಿದ್ದ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಪ್ರಾಣಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ನೀಡಿದ್ದಾರೆ.

ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 104 ರ ಅಡಿಯಲ್ಲಿ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗುತ್ತಿದೆ. ಆರೋಪಿಯು ತಮಿಳುನಾಡು ಮೂಲದ 32 ವರ್ಷ ವಯಸ್ಸಿನ ವ್ಯಕ್ತಿ ಎನ್ನಲಾಗಿದೆ.

ಆರೋಪಿಯ ಬ್ಯಾಗ್​ ಅನ್ನು ತೆರೆದು ನೋಡಿದಾಗ, ಅದರಲ್ಲಿ ಜೀವಂತ ಪ್ರಾಣಿಗಳು ಮತ್ತು ಸರೀಸೃಪಗಳು ಕಂಡುಬಂದವು. ಮರಿ ಕಾಂಗರೊಂದು ಉಸಿರುಗಟ್ಟಿ ಮೃತಪಟ್ಟಿತ್ತು ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾರಿನೊಳಗೆ ನಾಯಿ ಲಾಕ್, ಶ್ವಾನದ ಪ್ರಾಣಕ್ಕೆ ಕುತ್ತು ತಂದಿಟ್ಟ ಮಾನಸಿಕ ಅಸ್ವಸ್ಥ

ಬ್ಯಾಂಕಾಕ್‌ನಲ್ಲಿ ಈ ಬ್ಯಾಗ್ ತನಗೆ ಹಸ್ತಾಂತರಿಸಲ್ಪಟ್ಟಿತ್ತು. ಅದರಲ್ಲಿ ಏನಿತ್ತು ಎಂಬುದು ತನಗೆ ತಿಳಿದಿಲ್ಲ ಎಂದು ಆರೋಪಿಯು ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಜತೆಗೆ ಬ್ಯಾಗನ್ನು ಬೆಂಗಳೂರಿಗೆ ಕೊಂಡೊಯ್ಯಲು ತನಗೆ ಅದನ್ನು ಕೊಟ್ಟವರ ಸೂಚನೆ ಇತ್ತು ಎಂದೂ ಹೇಳಿದ್ದಾನೆ. ಆದರೆ, ಆತನ ಹೇಳಿಕೆಗಳ ಬಗ್ಗೆ ತನಿಖಾಧಿಕಾರಿಗಳು ತೃಪ್ತಿಹೊಂದಿಲ್ಲ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 pm, Tue, 22 August 23

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ