AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕಾಕ್‌ನಿಂದ ಬಂದವನ ಬ್ಯಾಗಲ್ಲಿತ್ತು ಹೆಬ್ಬಾವು, ಮೊಸಳೆ! ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ಜಪ್ತಿ

ಆರೋಪಿಯ ಬ್ಯಾಗ್​ ಅನ್ನು ತೆರೆದು ನೋಡಿದಾಗ, ಅದರಲ್ಲಿ ಜೀವಂತ ಪ್ರಾಣಿಗಳು ಮತ್ತು ಸರೀಸೃಪಗಳು ಕಂಡುಬಂದವು. ಮರಿ ಕಾಂಗರೊಂದು ಉಸಿರುಗಟ್ಟಿ ಮೃತಪಟ್ಟಿತ್ತು ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಬ್ಯಾಂಕಾಕ್‌ನಿಂದ ಬಂದವನ ಬ್ಯಾಗಲ್ಲಿತ್ತು ಹೆಬ್ಬಾವು, ಮೊಸಳೆ! ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ಜಪ್ತಿ
ಟ್ರ್ಯಾಲಿ ಬ್ಯಾಗ್​ನಲ್ಲಿ ಸಿಕ್ಕಿದ ಪ್ರಾಣಿಗಳು
ನವೀನ್ ಕುಮಾರ್ ಟಿ
| Edited By: |

Updated on:Aug 22, 2023 | 11:00 PM

Share

ಬೆಂಗಳೂರು, ಆಗಸ್ಟ್ 22: ವಿಮಾನದಲ್ಲಿ ಪ್ರಯಾಣ ಮಾಡಿ ಬಂದವರ ಟ್ರ್ಯಾಲಿ ಬ್ಯಾಗ್​​ನಲ್ಲಿ (Trolley Bag) ಹೆಬ್ಬಾವು, ಊಸರವಳ್ಳಿ, ಆಮೆ, ಮೊಸಳೆ ಮರಿ (Animals) ಇರಲು ಸಾಧ್ಯವೇ? ಅನುಮಾನವೇ ಬೇಡ. ಬರೀ ಇಷ್ಟೇ ಅಲ್ಲ, ಒಟ್ಟು 234 ಪ್ರಾಣಿಗಳು ಇದ್ದುದು ಪತ್ತೆಯಾಗಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಜಪ್ತಿ ಮಾಡಲಾಗಿದೆ. ಕೆಂಪೇಗೌಡ ಏರ್‌ಪೋರ್ಟ್‌ನ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಇಂಥದ್ದೊಂದು ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಪ್ರಾಣಿಗಳನ್ನು ವಿದೇಶದಿಂದ ಆಗಮಿಸಿದ್ದ ಪ್ರಯಾಣಿಕರೊಬ್ಬರು ಟ್ರ್ಯಾಲಿ ಬ್ಯಾಗ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದರು.

ಬ್ಯಾಂಕಾಕ್‌ನಿಂದ ‘ಎಫ್‌ಡಿ 137’ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕ ವಿವಿಧ ಪ್ರಾಣಿಗಳನ್ನು ಟ್ರ್ಯಾಲಿ ಬ್ಯಾಗ್​ನಲ್ಲಿ ಮರೆಮಾಚಿ ಸಾಗಿಸುತ್ತಿದ್ದ. ಈ ವೇಳೆ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಪ್ರಾಣಿಗಳು ಪತ್ತೆಯಾಗಿವೆ. ಆರೋಪಿಯು ಪ್ರಾಣಿಗಳನ್ನು ಬಾಕ್ಸ್‌ಗಳಲ್ಲಿ ತುಂಬಿಕೊಂಡು ದೊಡ್ಡ ಬ್ಯಾಗ್​ನಲ್ಲಿಟ್ಟುಕೊಂಡು ಬಂದಿದ್ದ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಪ್ರಾಣಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ನೀಡಿದ್ದಾರೆ.

ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 104 ರ ಅಡಿಯಲ್ಲಿ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗುತ್ತಿದೆ. ಆರೋಪಿಯು ತಮಿಳುನಾಡು ಮೂಲದ 32 ವರ್ಷ ವಯಸ್ಸಿನ ವ್ಯಕ್ತಿ ಎನ್ನಲಾಗಿದೆ.

ಆರೋಪಿಯ ಬ್ಯಾಗ್​ ಅನ್ನು ತೆರೆದು ನೋಡಿದಾಗ, ಅದರಲ್ಲಿ ಜೀವಂತ ಪ್ರಾಣಿಗಳು ಮತ್ತು ಸರೀಸೃಪಗಳು ಕಂಡುಬಂದವು. ಮರಿ ಕಾಂಗರೊಂದು ಉಸಿರುಗಟ್ಟಿ ಮೃತಪಟ್ಟಿತ್ತು ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾರಿನೊಳಗೆ ನಾಯಿ ಲಾಕ್, ಶ್ವಾನದ ಪ್ರಾಣಕ್ಕೆ ಕುತ್ತು ತಂದಿಟ್ಟ ಮಾನಸಿಕ ಅಸ್ವಸ್ಥ

ಬ್ಯಾಂಕಾಕ್‌ನಲ್ಲಿ ಈ ಬ್ಯಾಗ್ ತನಗೆ ಹಸ್ತಾಂತರಿಸಲ್ಪಟ್ಟಿತ್ತು. ಅದರಲ್ಲಿ ಏನಿತ್ತು ಎಂಬುದು ತನಗೆ ತಿಳಿದಿಲ್ಲ ಎಂದು ಆರೋಪಿಯು ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಜತೆಗೆ ಬ್ಯಾಗನ್ನು ಬೆಂಗಳೂರಿಗೆ ಕೊಂಡೊಯ್ಯಲು ತನಗೆ ಅದನ್ನು ಕೊಟ್ಟವರ ಸೂಚನೆ ಇತ್ತು ಎಂದೂ ಹೇಳಿದ್ದಾನೆ. ಆದರೆ, ಆತನ ಹೇಳಿಕೆಗಳ ಬಗ್ಗೆ ತನಿಖಾಧಿಕಾರಿಗಳು ತೃಪ್ತಿಹೊಂದಿಲ್ಲ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 pm, Tue, 22 August 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?