AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ನಟೋರಿಯಸ್ ರೌಡಿ‌ ಶೀಟರ್ ಕಾಲಿಗೆ ಗುಂಡೇಟು

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ರಾಗಿಹಳ್ಳಿ ಬಳಿ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ಸ್ ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ, ಬಂಧಿಸಿದ್ದಾರೆ. ಬಂಧಿಸಲು ಹೋದ ವೇಳೆ ಬಾಲ ಬಿಚ್ಚಿದ್ದ ಹಿನ್ನಲೆ ಆತನ ಕಾಲಿಗೆ ಫೈರಿಂಗ್ ಮಾಡಲಾಗಿದೆ.

ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ನಟೋರಿಯಸ್ ರೌಡಿ‌ ಶೀಟರ್ ಕಾಲಿಗೆ ಗುಂಡೇಟು
ನಟೋರಿಯಸ್ ರೌಡಿ‌ಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಕಾಲಿಗೆ ಗುಂಡೇಟು
ರಾಮು, ಆನೇಕಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 03, 2024 | 7:45 PM

Share

ಬೆಂಗಳೂರು, ಆ.03: ಆನೇಕಲ್(Anekal)​ನಲ್ಲಿ ಪೊಲೀಸರ ಗನ್ ಮತ್ತೆ ಸದ್ದು ಮಾಡಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ರಾಗಿಹಳ್ಳಿ ಬಳಿ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ಸ್ ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ, ಬಂಧಿಸಿದ್ದಾರೆ. ಆತನನ್ನು ಅರೆಸ್ಟ್​ ಮಾಡಲು ಹೋದಾಗ ಕ್ರೈಂ ಸಿಬ್ಬಂದಿ ವಿನಯ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ.

ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಪೊಲೀಸರು

ಮೊದಲು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಶರಣಾಗುಂತೆ ವಾರ್ನಿಂಗ್ ಮಾಡಿದ್ದಾರೆ. ಅದಕ್ಕೆ ಕೇಳದೆ ಇದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹೀಗಾಗಿ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ರೌಡಿ ಶೀಟರ್ ವೆಂಕಟರಾಜು, ಶೆಟ್ಟಿಹಳ್ಳಿ ಬಳಿ ಕೊಲೆ ಯತ್ನ ನಡೆಸಿದ್ದ. ಈ ಹಿನ್ನಲೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ 307 ಪ್ರಕರಣ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ:ಫೈರಿಂಗ್ ವೇಳೆ ಗಾಯಗೊಂಡಿದ್ದ ರೌಡಿಶೀಟರ್;​ ಚಿಕಿತ್ಸೆಗೆ ಕರೆದೊಯ್ಯುವಾಗ ಸಿಪಿಐ ಮೇಲೆ ಚಾಕು ಇರಿದು ಪರಾರಿಗೆ ಯತ್ನ

ಅಂದಿನಿಂದ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಕೊಲೆ, ಕೊಲೆ ಯತ್ನ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿ ಶೀಟರ್ ವೆಂಕಟರಾಜು, ಹತ್ತಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದವನನ್ನು ಬಂಧಿಸಲು ಹೋದ ವೇಳೆ ಬಾಲ ಬಿಚ್ಚಿದ್ದಾನೆ. ಈ ಹಿನ್ನಲೆ ರೌಡಿ ಶೀಟರ್ ಕಾಲಿಗೆ ಫೈರಿಂಗ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು