AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಕಿಡ್ ಇಂಟರ್ ನ್ಯಾಶನಲ್ ಶಾಲೆಯಿಂದ ದೋಖಾ; ಸಿಬಿಎಸ್​ಇ ಪಠ್ಯಕ್ರಮ ಎಂದು ಟೊಳ್ಳು ಭರವಸೆ ನೀಡಿ ಲಕ್ಷ ಲಕ್ಷ ಪೀಕಿದ ಶಾಲೆ

ಇಂಟರ್ ನ್ಯಾಷನಲ್ ಲೇವಲ್ ಶಾಲೆ ಎಂದು ಪೋಸ್ ಕೊಟ್ಟಿರುವ ಖಾಸಗಿ ಶಾಲೆಯೊಂದು ಮಕ್ಕಳನ್ನೂ ಸೇರಿಸಿಕೊಂಡು, ಪೋಷಕರಿಗೂ ಕನ್ಫ್ಯೂಸ್ ಮಾಡಿದೆ. ನಮ್ಮದು ಸಿಬಿಎಸ್​ಇ ಪಠ್ಯಕ್ರಮ ಎಂದು ಅಡ್ಮಿಷನ್ ಮಾಡಿಕೊಂಡು ಲಕ್ಷಾಂತರ ದುಡ್ಡು ಪೀಕಿದೆ.

ಆರ್ಕಿಡ್ ಇಂಟರ್ ನ್ಯಾಶನಲ್ ಶಾಲೆಯಿಂದ ದೋಖಾ; ಸಿಬಿಎಸ್​ಇ ಪಠ್ಯಕ್ರಮ ಎಂದು ಟೊಳ್ಳು ಭರವಸೆ ನೀಡಿ ಲಕ್ಷ ಲಕ್ಷ ಪೀಕಿದ ಶಾಲೆ
ಆರ್ಕಿಡ್ ಇಂಟರ್ ನ್ಯಾಶನಲ್ ಶಾಲೆಯಿಂದ ಸಿಬಿಎಸ್​ಇ ಪಠ್ಯಕ್ರಮ ಎಂದು ಟೊಳ್ಳು ಭರವಸೆ ನೀಡಿ ಲಕ್ಷಗಟ್ಟಲೇ ಪೀಕಿದ ಶಾಲೆ
ಕಿರಣ್ ಹನುಮಂತ್​ ಮಾದಾರ್
|

Updated on: Mar 06, 2023 | 8:47 AM

Share

ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಹೊಮ್ಮದೇವನಹಳ್ಳಿಯಲ್ಲಿರುವ ಆರ್ಕಿಡ್ ಇಂಟರ್ ನ್ಯಾಶನಲ್ ಶಾಲೆ(orchid international school) ಸಿ ಬಿ ಎಸ್ ಸಿ ಪಠ್ಯಕ್ರಮ ಶಾಲೆ ಎಂದು ಪೋಸ್ ಕೊಟ್ಟು ಪೋಷಕರಿಗೆ ಪಂಗನಾಮ ಹಾಕಿದೆ. ಸಿಬಿಎಸ್​ಸಿ ಪಠ್ಯಕ್ರಮ ಓದಿಸುವ ಅರ್ಹತೆ ಗಿಟ್ಟಿಸಿಕೊಳ್ಳದೇ ಇದ್ದರೂ, ನಮ್ಮದು ಸಿಬಿಎಸ್​ಸಿ ಪಠ್ಯಕ್ರಮ ಎಂದು ಹೇಳಿ ಲಕ್ಷ ಲಕ್ಷ ಹಣ ಪೀಕಿದೆ.‌ ಆದರೆ ಮಕ್ಕಳಿಗೆ ಓದಲು ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ನೀಡಿದ ಪುಸ್ತಕವನ್ನು ನೀಡಿದೆ. ಇದನ್ನು ಕಂಡ ಪೋಷಕರು ಪ್ರಶ್ನೆ ಮಾಡಿದಕ್ಕೆ, ಯಾವ ಸ್ಪಷ್ಟನೆ ನೀಡದೇ, ನಾವು ಕೇಂದ್ರದ ಪಠ್ಯಕ್ರಮ ಓದಿಸುತ್ತಿಲ್ಲ, ಅದರದ್ದೇ ಥರಾ ಇರುವ ಪಠ್ಯಕ್ರಮ ನೀಡಿದ್ದೇವೆ ಎಂದು ಕನ್ಫ್ಯೂಸ್ ಮಾಡಿದೆ.

ಸಿಬಿಎಸ್​ಸಿ ಪಠ್ಯಕ್ರಮ ಇಲ್ಲದೇ ಇದ್ರೂ ಯಾಕೆ ಪೊಷಕರಿಗೆ ಸುಳ್ಳು ಹೇಳಿದ್ದೀರಾ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ ಸಂಸ್ಥೆ ಮ್ಯಾನೇಜ್ಮೆಂಟ್, ನಾವು ಯಾರಿಗೂ ಹೀಗೆ ಹೇಳೇ ಇಲ್ಲ ಅಂತ ನುಣುಚಿಕೊಂಡಿದೆ. ಇನ್ನು ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೆ ಕೇಳಿದರೆ,‌ ನಾವು ಆರ್ಕಿಡ್ ಸಂಸ್ಥೆಗೆ ಸಂಬಂಧಿಸಿದಂತೆ ಅಕ್ರಮ ಮಾಡಿರುವ ಎಲ್ಲಾ ಶಾಲೆಗಳಿಗೂ ನೊಟೀಸ್ ಜಾರಿ ಮಾಡಿದ್ದೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಡಾಫೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ದೂರು ದಾಖಲು​, ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ

ರಾಜ್ಯ ಸರ್ಕಾರದ ಪಠ್ಯಕ್ರಮವೇ ಓಧಿಸುವ ಹಾಗಿದ್ರೆ, ಲಕ್ಷ ಲಕ್ಷ ದುಡ್ಡು ಕೊಟ್ಟು ನಾವು ಆರ್ಕೀಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯಾಕೆ ಓದಿಸೋದು, ಸರಕಾರಿ ಶಾಲೆಯಲ್ಲೇ ಓದಿಸಬಹುದಿತ್ತು ಎಂದು ಕೆಲ ಪೋಷಕರು ತಮ್ಮ ಮಕ್ಕಳ ಟಿ.ಸಿ ಪಡೆಯಲು ಮುಂದಾಗಿದ್ದಾರೆ. ಇನ್ನಾದರೂ ಶಿಕ್ಷಣ ಇಲಾಖೆ ಈ ಕುರಿತು ಕ್ರಮಕ್ಕೆ ಮುಂದಾಗುತ್ತಾ ಕಾದು ನೋಡಬೇಕಿದೆ.

ವರದಿ: ಸೈಯ್ಯದ್ ನಿಜಾಮುದ್ದೀನ್ ಟಿವಿ9 ಆನೇಕಲ್

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್