Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangaluru: ಎಲೆಕ್ಟ್ರಾನಿಕ್​ ಸಿಟಿಯಲ್ಲೊಂದು ಸ್ಮಾರ್ಟ್ ಬಸ್ ನಿಲ್ದಾಣ; ಇದರ ವಿಶೇಷತೆ ಹೀಗಿದೆ

ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಮಾರ್ಟ್ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದ್ದು, ಇದನ್ನು ಫೆ.27 ರಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ ಮತ್ತು ಬೆಂಗಳೂರಿನ ಸಂಚಾರಿ ವಿಶೇಷ ಪೊಲೀಸ್ ಆಯುಕ್ತ ಡಾ ಎಂಎ ಸಲೀಂ ಅವರು ಉದ್ಘಾಟಿಸಿದ್ದಾರೆ.

Bangaluru: ಎಲೆಕ್ಟ್ರಾನಿಕ್​ ಸಿಟಿಯಲ್ಲೊಂದು ಸ್ಮಾರ್ಟ್ ಬಸ್ ನಿಲ್ದಾಣ; ಇದರ ವಿಶೇಷತೆ ಹೀಗಿದೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 28, 2023 | 10:45 PM

ಬೆಂಗಳೂರು: ಸ್ಮಾರ್ಟ್​ ಯುಗಕ್ಕೆ ತಕ್ಕಂತೆ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಮಾರ್ಟ್ ಬಸ್ ನಿಲ್ದಾಣವೊಂದನ್ನ ನಿರ್ಮಿಸಲಾಗಿದ್ದು, ಫೆ.27 ರಂದು ಇದನ್ನ ಉದ್ಘಾಟಿಸಲಾಯಿತು. ಇನ್ನು ಈ ಬಸ್​ ನಿಲ್ದಾಣದ ವಿಶೇಷತೆ ನೋಡುವುದಾದರೆ ಇಲ್ಲಿ ವೆಂಡಿಂಗ್​ ಮಷೀನ್ ಅಳವಡಿಸಲಾಗಿದೆ ಜೊತೆಗೆ ಫೋನ್‌ ಮತ್ತು ಲ್ಯಾಪ್‌ಟಾಪ್​ಗಳಿಗೆ ಚಾರ್ಜರ್​ ವ್ಯವಸ್ಥೆ ಕೂಡ ಮಾಡಲಾಗಿದ್ದು, ಬಸ್ ಮಾರ್ಗಗಳು ಹಾಗೂ ಅವುಗಳ ನಿಖರ ಸಮಯವನ್ನ ಇಲ್ಲಿ ಪರಿಶೀಲಿಸಬಹುದಾಗಿದೆ.

ಇನ್ನು ಈ ಕುರಿತು ELCITA ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್‌ನಲ್ಲಿ ಉದ್ಘಾಟನೆಯ ದೃಶ್ಯಗಳನ್ನು ಹಂಚಿಕೊಂಡಿದೆ, ಇದಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ ಮತ್ತು ಬೆಂಗಳೂರಿನ ಸಂಚಾರಿ ವಿಶೇಷ ಪೊಲೀಸ್ ಆಯುಕ್ತ ಡಾ ಎಂಎ ಸಲೀಂ ಗೌರವ ಅತಿಥಿಗಳಾಗಿದ್ದರು.

ಇದನ್ನೂ ಓದಿ:Apple Jobs: ಆ್ಯಪಲ್ ಕರಾಮತ್ತು; ಕರ್ನಾಟಕ ಸೇರಿ ವಿವಿಧೆಡೆ 19 ತಿಂಗಳಲ್ಲಿ 1 ಲಕ್ಷ ನೇರ ಉದ್ಯೋಗ

ಈ ಸ್ಮಾರ್ಟ್ ಬಸ್ ನಿಲ್ದಾಣವು ಸ್ಮಾರ್ಟ್ ಡಸ್ಟ್‌ಬಿನ್‌ಗಳನ್ನು ಹೊಂದಿದ್ದು, ಅದು 70% ತುಂಬಿದಾಗ ಎಚ್ಚರಿಕೆಗಳನ್ನು ಕಳುಹಿಸುತ್ತದೆ. ಬಸ್​ನ ನಿಖರವಾದ ಸಮಯದ ಬಗ್ಗೆ ಮಾಹಿತಿಯನ್ನ ತೋರಿಸುತ್ತದೆ. ಜೊತೆಗೆ ಇದು ಮಾರ್ಗ ನಕ್ಷೆಯನ್ನು ಕೂಡ ತೋರಿಸುತ್ತದೆ ಎಂದು ELCITA ಟ್ವೀಟ್‌ ಮಾಡಿದೆ. ಎಲ್ಲರ ಸುರಕ್ಷತೆಗಾಗಿ ಬಸ್ ನಿಲ್ದಾಣದಲ್ಲಿ ಎರಡು ಸಿಸಿಟಿವಿ ಕ್ಯಾಮೆರಾಗಳು ಮತ್ತು ದ್ವಿಮುಖ SOS ವ್ಯವಸ್ಥೆಯನ್ನ ಮಾಡಲಾಗಿದೆ. “ಸ್ಮಾರ್ಟ್” ಜೊತೆಗೆ ಬಸ್ ನಿಲ್ದಾಣವು “ಹಸಿರು” ಆಗಿದೆ. ಸ್ಮಾರ್ಟ್ ಉದ್ಯಾನವನ್ನು ಸ್ಥಾಪಿಸಲಾಗಿದೆ ಎಂದು ELCITA ಹೇಳಿದೆ.

ಇಂದು ನಮ್ಮ ಇ-ನಗರದಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ಹೊಸ ಯುಗ ಆರಂಭವಾಗಿದೆ. ಶ್ರೀಮತಿ ಸತ್ಯವತಿ ಜಿ. IAS (ವ್ಯವಸ್ಥಾಪಕ ನಿರ್ದೇಶಕರು, BMTC), ಮತ್ತು ಡಾ ಎಂಎ ಸಲೀಂ IPS, (ಬೆಂಗಳೂರು ನಗರ ಸಂಚಾರಿ ವಿಶೇಷ ಪೊಲೀಸ್ ಆಯುಕ್ತರು), ಮೊದಲ ಸ್ಮಾರ್ಟ್ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು. ಜೊತೆಗೆ ಮೊದಲ ಬಸ್ ಅನ್ನು ಸ್ಮಾರ್ಟ್ ಬಸ್ ನಿಲ್ದಾಣದಿಂದ ಇಬ್ಬರೂ ಗೌರವಾನ್ವಿತ ಅತಿಥಿಗಳು ಫ್ಲ್ಯಾಗ್ ಆಫ್ ಮಾಡಿದರು ಎಂದು “ELCITA ಟ್ವಿಟ್​ ಮೂಲಕ ಹಂಚಿಕೊಂಡಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Tue, 28 February 23

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್