AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯನ್ನ ಕೊಂದು ಆತ್ಮಹತ್ಯೆಗೆ ಶರಣಾದ ಮಗ..!

ಕುಡಿದ ಮತ್ತಿನಲ್ಲಿ ತಾಯಿಯನ್ನು ಕೊಂದು ಬಳಿಕ ಮಗ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೊಟ್ಟೆ ಪಾಡಿಗಾಗಿ ದೂರದ ಚಿತ್ರದುರ್ಗದಿಂದ ಬಂದಿದ್ದ ತಾಯಿ ಮಗ ಆನೇಕಲ್​ ಬಳಿಯ ಚಂದಾಪುರದಲ್ಲಿ ನೆಲೆಸಿದ್ದರು. ಆದ್ರೆ, ಮಗ ಕುಡಿದುಬಂದು ನಿತ್ಯ ಗಲಾಟೆ ಮಾಡುತ್ತಿದ್ದ. ಅದರಂತೆ ನಿನ್ನೆ ಕುಡಿದುಬಂದು ಮತ್ತೆ ಜಗಳ ಮಾಡಿದ್ದಾನೆ. ಈ ವೇಳೆ ಗಲಾಟೆ ತಾರಕಕ್ಕೇರಿದ್ದು, ಮೊಬೈಲ್​ ಚಾರ್ಜರ್​ ವೈರ್​ನಿಂದ ತಾಯಿ ಕುತ್ತಿಗೆ ಹಿಸುಕು ಕೊಲೆ ಮಾಡಿದ್ದಾನೆ.

ತಾಯಿಯನ್ನ ಕೊಂದು ಆತ್ಮಹತ್ಯೆಗೆ ಶರಣಾದ ಮಗ..!
ಪ್ರಾತಿನಿಧಿಕ ಚಿತ್ರImage Credit source: CNBCTV18.COM
ರಾಮು, ಆನೇಕಲ್​
| Edited By: |

Updated on: Jan 05, 2025 | 11:38 AM

Share

ಅನೇಕಲ್, (ಜನವರಿ 05): ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ನಡೆದಿದೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಮಗ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಚಿಕ್ಕಹಳ್ಳಿ ಕುಟುಂಬ, ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬಂದಿದ್ದರು. ಆದ್ರೆ, ಮಗ ಕುಡಿದುಬಂದು ತಾಯಿ ಜೊತೆ ಜಗಳ ಮಾಡುತ್ತಿದ್ದ. ಅದರಂತೆ ನಿನ್ನೆ(ಜನವರಿ 04) ಗಲಾಟೆ ವಿಕೋಪಕ್ಕೆ ತಿರುಗಿದ್ದು, ಮೊಬೈಲ್​ ಚಾರ್ಜರ್​ ವೈರ್​ನಿಂದ ತಾಯಿ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ.

ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಗ ಕುಡಿದು ಬಂದು ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿಯೂ ಕುಡಿದು ಬಂದು ತಾಯಿ ಮಹಾಲಕ್ಷ್ಮಿ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೊಬೈಲ್ ಚಾರ್ಜಿಂಗ್ ವೈರ್‌ನಿಂದ ಕುತ್ತಿಗೆಗೆ ಬಿಗಿದು ತಾಯಿ ಹತ್ಯೆ ಮಾಡಿದ್ದಾನೆ. ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರ ಮತ್ತು ಬೆಂಗಳೂರು ಗ್ರಾಮಾಂತರ ಎಎಸ್‌ಪಿ ನಾಗೇಶ್ ಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ದೇಹಗಳನ್ನು ಅತ್ತಿಬೆಲೆ ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ.

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ