AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ

ಬೆಂಗಳೂರಿನಲ್ಲಿ ನಿನ್ನೆ ಏಪ್ರಿಲ್ 14) ಮಹಿಳೆಯೋರ್ವಳಿ ತನ್ನ 14 ವರ್ಷದ ಮಗಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೈಯಾರೇ ಮುದ್ದಾದ ಮಗಳನ್ನ ಕೊಂದಿರುವುದಕ್ಕೆ ಸಂಬಂಧಿಕರು ಏರಿಯಾದ ಜನರು ಮಮ್ಮಲ ಮರುಗಿದ್ದಾರೆ. ಈ ಘಟನೆ ಮಾಸುವ ಮುನ್ನವೇ ಪುತ್ರನೋರ್ವ ತಾಯಿಯನ್ನ ಮನೆ ಮಹಡಿ ಮೇಲಿಂದ ತಳ್ಳಿ ಕೊಂದಿರುವ ಘಟನೆ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ
Savitramma And Venkatesh
ಪ್ರದೀಪ್​ ಚಿಕ್ಕಾಟಿ
| Edited By: |

Updated on: Apr 15, 2026 | 10:18 PM

Share

ಬೆಂಗಳೂರು, (ಏಪ್ರಿಲ್ 15): ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು (Mother) ಮಗನೇ (Son) ಕೊಲೆ ಮಾಡಿರುವ ಘಟನೆ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ (RR Nagar) ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತನೆ ತನ್ನ ಹೆತ್ತ ತಾಯಿ ಸಾವಿತ್ರಮ್ಮ(72)ರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ. ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ,ಸುಮಾರು ಐದಾರು ವರ್ಷದಿಂದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ತಾಯಿ ಸಾವಿತ್ರಮ್ಮಳನ್ನ 3ನೇ ಮಹಡಿಯಿಂದ ತಳ್ಳಿದ್ದಾನೆ.

ಸುಮಾರು ವರ್ಷಗಳಿಂದ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ತಾಯಿ ಅವಸ್ಥೆಯಿಂದ ನೊಂದು ಪುತ್ರ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.  ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆರ್‌ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮಗ ವೆಂಕಟೇಶ್‌ನನ್ನ ಆರ್‌ಆರ್ ನಗರ ಪೊಲೀಸರು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

ಇದನ್ನೂ ನೋಡಿ: ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?

ಮುಪ್ಪಾದ ಕಾಲಕ್ಕೆ ಒಂದು ಸೂರು, ತುತ್ತು ಅನ್ನ ಇದ್ರೆ ವಯೋವೃದ್ಧರು ಹೇಗೋ ಇರುವಷ್ಟು ದಿನ ಪಾಲಿಗೆ ಬಂದಿದ್ದು ಪಂಚಾಮೃತ ಅಂತ ಕಾಲ ದೂಡ್ತಾರೆ. ಆದ್ರೆ, ಪುತ್ರ ವೆಂಕಟೇಶ್ ಮಾತ್ರ ತಾಯಿಯ ಅನಾರೋಗ್ಯಕ್ಕೆ ಬೇಸತ್ತಿದ್ದು, ಕೈಯಾರೇ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಬಲಿಕೊಟ್ಟಿದ್ದಾನೆ.

ಮುಪ್ಪಿನ ಕಾಲವು ಜೀವನದ ಅತ್ಯಂತ ಸೂಕ್ಷ್ಮ ಮತ್ತು ಹಿರಿಯರ ಆರೈಕೆ ಅಗತ್ಯವಿರುವ ಹಂತವಾಗಿದೆ. ಇಳಿ ವಯಸ್ಸಿನಲ್ಲಿ ಆರ್ಥಿಕ ಸ್ವಾವಲಂಬನೆ, ಮಕ್ಕಳ ಪ್ರೀತಿ-ವಿಶ್ವಾಸ, ಮತ್ತು ಉತ್ತಮ ಆರೋಗ್ಯ ಸೌಲಭ್ಯಗಳು ಅತ್ಯಗತ್ಯ. ಆದರೆ, ದುರದೃಷ್ಟವಶಾತ್ ಅನೇಕರು ಈ ಸಮಯದಲ್ಲಿ ಮೂಲೆಗುಂಪಾಗುತ್ತಿದ್ದು, ವೃದ್ಧಾಶ್ರಮಗಳ ಆಸರೆ ಪಡೆಯುವಂತಾಗಿದೆ. ಇನ್ನೊಂದೆಡೆ ವಯಸ್ಸಾದ ತಂದೆ ತಾಯಿ ಮಕ್ಕಳಿಂದ ಕೈಯಿಂದಲೇ ಜೀವ ಕಳೆದುಕೊಳ್ಳುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us