AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳಗೇರಿ ನಿವಾಸಿಗಳಿಗೆ ವಿಶೇಷ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತೆ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಗ್ರಾಮೀಣ ಭಾಗದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದಾರೆ. ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಲಸಿಕೆ ನೀಡಿಕೆ ಕಡಿಮೆಯಾಗಿದೆ. ಕೊಳಗೇರಿ ನಿವಾಸಿಗಳಿಗೆ ವಿಶೇಷ ಲಸಿಕಾ ಮೇಳ ಪ್ರತಿನಿತ್ಯ ಹಮ್ಮಿಕೊಳ್ಳುವ ಕಾರ್ಯತಂತ್ರ ರೂಪಿಸಿದ್ದೇವೆ. -ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕೊಳಗೇರಿ ನಿವಾಸಿಗಳಿಗೆ ವಿಶೇಷ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತೆ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 30, 2021 | 1:17 PM

Share

ಬೆಂಗಳೂರು: ರಾಜ್ಯದಲ್ಲಿ 4 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿದ್ದೇವೆ. ಡಿಸೆಂಬರ್ ಅಂತ್ಯದ ವೇಳೆ 2 ಡೋಸ್ ನೀಡುವ ಗುರಿ ಇದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಆಗಸ್ಟ್ 27ರ ವರೆಗೆ ಒಟ್ಟು 4 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆ 2 ಡೋಸ್ ನೀಡುವ ಗುರಿ ಇದೆ. ಗ್ರಾಮೀಣ ಭಾಗದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದಾರೆ. ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಲಸಿಕೆ ನೀಡಿಕೆ ಕಡಿಮೆಯಾಗಿದೆ. ಕೊಳಗೇರಿ ನಿವಾಸಿಗಳಿಗೆ ವಿಶೇಷ ಲಸಿಕಾ ಮೇಳ ಪ್ರತಿನಿತ್ಯ ಹಮ್ಮಿಕೊಳ್ಳುವ ಕಾರ್ಯತಂತ್ರ ರೂಪಿಸಿದ್ದೇವೆ. ಕೇರಳ ಗಡಿ ಭಾಗದ 20 ಕಿ.ಮೀ. ವ್ಯಾಪ್ತಿಯಲ್ಲಿರುವ ಜನರಿಗೆ ಮೊದಲ ಪ್ರಾಶಸ್ತ್ಯದ ಲಸಿಕೆ ನೀಡುತ್ತೇವೆ. ಡಿಸೆಂಬರ್ ಅಂತ್ಯದ ವೇಳೆ 2 ಡೋಸ್ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ. ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ಸಿಕ್ಕ ಬಳಿಕ ಅವರಿಗೂ ಲಸಿಕೆ ನೀಡ್ತೇವೆ. ಮೊದಲ, 2ನೇ ಡೋಸ್ ಮಧ್ಯೆ ಸ್ವಲ್ಪ ತಾಂತ್ರಿಕ ಸಮಸ್ಯೆ ಇದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ರು.

ಕೇರಳದಲ್ಲಿ ದಿನಕ್ಕೆ 20 ಸಾವಿರ ಕೊರೊನಾ ಕೇಸ್ ಬರುತ್ತಿದೆ. ಆದರೆ ಬೆಂಗಳೂರಿನಲ್ಲಿ 400ರಿಂದ 500 ಕೇಸ್‌ ಸಹ ಬರ್ತಿಲ್ಲ. ಬಿಬಿಎಂಪಿ ಸೂಕ್ತ ಕ್ರಮ ಕೈಗೊಂಡಿದ್ದರಿಂದ ನಿಯಂತ್ರಣವಾಗಿದೆ ಎಂದು ಬಿಬಿಎಂಪಿ ಕಾರ್ಯಕ್ಕೆ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನರು ಸಹಕಾರ ಕೊಟ್ಟಿದ್ದರಿಂದ ಇದು ಸಾಧ್ಯವಾಗಿದೆ. ಕೆಲವು ರಾಜ್ಯಗಳಲ್ಲಿ ಕೊರೊನಾ 3ನೇ ಅಲೆ ಆರಂಭವಾಗಿದೆ. ನಮ್ಮ ರಾಜ್ಯದಲ್ಲಿ 3ನೇ ಅಲೆಯಿಂದ ಸಮಸ್ಯೆಯಾಗಬಾರದು. ಹೀಗಾಗಿ ನಾವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಜನರು ಸಹಕಾರ ಕೊಟ್ಟಾಗ ಮಾತ್ರ ಇದು ಸಾಧ್ಯವಾಗುತ್ತದೆ ಎಂದರು.

ಇದನ್ನೂ ಓದಿ: ಕೊರೊನಾ ಮೂರನೇ ಅಲೆ ಎದುರಿಸಲು ನಡೆಸಿರುವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಡಾ ಕೆ ಸುಧಾಕರ್

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?