AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳಗೇರಿ ನಿವಾಸಿಗಳಿಗೆ ವಿಶೇಷ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತೆ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಗ್ರಾಮೀಣ ಭಾಗದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದಾರೆ. ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಲಸಿಕೆ ನೀಡಿಕೆ ಕಡಿಮೆಯಾಗಿದೆ. ಕೊಳಗೇರಿ ನಿವಾಸಿಗಳಿಗೆ ವಿಶೇಷ ಲಸಿಕಾ ಮೇಳ ಪ್ರತಿನಿತ್ಯ ಹಮ್ಮಿಕೊಳ್ಳುವ ಕಾರ್ಯತಂತ್ರ ರೂಪಿಸಿದ್ದೇವೆ. -ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕೊಳಗೇರಿ ನಿವಾಸಿಗಳಿಗೆ ವಿಶೇಷ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತೆ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 30, 2021 | 1:17 PM

Share

ಬೆಂಗಳೂರು: ರಾಜ್ಯದಲ್ಲಿ 4 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿದ್ದೇವೆ. ಡಿಸೆಂಬರ್ ಅಂತ್ಯದ ವೇಳೆ 2 ಡೋಸ್ ನೀಡುವ ಗುರಿ ಇದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಆಗಸ್ಟ್ 27ರ ವರೆಗೆ ಒಟ್ಟು 4 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆ 2 ಡೋಸ್ ನೀಡುವ ಗುರಿ ಇದೆ. ಗ್ರಾಮೀಣ ಭಾಗದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದಾರೆ. ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಲಸಿಕೆ ನೀಡಿಕೆ ಕಡಿಮೆಯಾಗಿದೆ. ಕೊಳಗೇರಿ ನಿವಾಸಿಗಳಿಗೆ ವಿಶೇಷ ಲಸಿಕಾ ಮೇಳ ಪ್ರತಿನಿತ್ಯ ಹಮ್ಮಿಕೊಳ್ಳುವ ಕಾರ್ಯತಂತ್ರ ರೂಪಿಸಿದ್ದೇವೆ. ಕೇರಳ ಗಡಿ ಭಾಗದ 20 ಕಿ.ಮೀ. ವ್ಯಾಪ್ತಿಯಲ್ಲಿರುವ ಜನರಿಗೆ ಮೊದಲ ಪ್ರಾಶಸ್ತ್ಯದ ಲಸಿಕೆ ನೀಡುತ್ತೇವೆ. ಡಿಸೆಂಬರ್ ಅಂತ್ಯದ ವೇಳೆ 2 ಡೋಸ್ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ. ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ಸಿಕ್ಕ ಬಳಿಕ ಅವರಿಗೂ ಲಸಿಕೆ ನೀಡ್ತೇವೆ. ಮೊದಲ, 2ನೇ ಡೋಸ್ ಮಧ್ಯೆ ಸ್ವಲ್ಪ ತಾಂತ್ರಿಕ ಸಮಸ್ಯೆ ಇದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ರು.

ಕೇರಳದಲ್ಲಿ ದಿನಕ್ಕೆ 20 ಸಾವಿರ ಕೊರೊನಾ ಕೇಸ್ ಬರುತ್ತಿದೆ. ಆದರೆ ಬೆಂಗಳೂರಿನಲ್ಲಿ 400ರಿಂದ 500 ಕೇಸ್‌ ಸಹ ಬರ್ತಿಲ್ಲ. ಬಿಬಿಎಂಪಿ ಸೂಕ್ತ ಕ್ರಮ ಕೈಗೊಂಡಿದ್ದರಿಂದ ನಿಯಂತ್ರಣವಾಗಿದೆ ಎಂದು ಬಿಬಿಎಂಪಿ ಕಾರ್ಯಕ್ಕೆ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನರು ಸಹಕಾರ ಕೊಟ್ಟಿದ್ದರಿಂದ ಇದು ಸಾಧ್ಯವಾಗಿದೆ. ಕೆಲವು ರಾಜ್ಯಗಳಲ್ಲಿ ಕೊರೊನಾ 3ನೇ ಅಲೆ ಆರಂಭವಾಗಿದೆ. ನಮ್ಮ ರಾಜ್ಯದಲ್ಲಿ 3ನೇ ಅಲೆಯಿಂದ ಸಮಸ್ಯೆಯಾಗಬಾರದು. ಹೀಗಾಗಿ ನಾವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಜನರು ಸಹಕಾರ ಕೊಟ್ಟಾಗ ಮಾತ್ರ ಇದು ಸಾಧ್ಯವಾಗುತ್ತದೆ ಎಂದರು.

ಇದನ್ನೂ ಓದಿ: ಕೊರೊನಾ ಮೂರನೇ ಅಲೆ ಎದುರಿಸಲು ನಡೆಸಿರುವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಡಾ ಕೆ ಸುಧಾಕರ್

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ