ಕಾರು-ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು: ದ್ವೇಷಕ್ಕೆ ನಡೆಯಿತಾ ಅಪಘಾತ ರೀತಿಯ ಕೊಲೆ?

ಅದು ಬೆಳ್ಳಂ ಬೆಳಗ್ಗೆ ನಡೆದಿದ್ದ ಅಪಘಾತ, ಕೆಲಸಕ್ಕೆ ಹೊರಟಿದ್ದ ಕಾರ್ಮಿಕರ ಬೈಕ್​ಗೆ ಕಾರು ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೆ ದುರ್ಮರಣಕ್ಕೀಡಾಗಿದ್ದರು. ಇನ್ನೂ ಇದು ಸಹಜ ಅಪಘಾತ ಎಂದು ಎಲ್ಲರೂ ಅಂದುಕೊಳ್ಳುತ್ತಿದ್ದಂತೆ, ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಅಪಘಾತದ ನೆಪದಲ್ಲಿ ನಡೆಯಿತಾ ದ್ವೇಷದ ಕೊಲೆ ಎನ್ನುವ ಅನುಮಾನ ಮೂಡಿದೆ.

ಕಾರು-ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು: ದ್ವೇಷಕ್ಕೆ ನಡೆಯಿತಾ ಅಪಘಾತ ರೀತಿಯ ಕೊಲೆ?
ಮೃತ ವ್ಯಕ್ತಿಗಳು
Follow us
|

Updated on: May 12, 2023 | 10:32 AM

ಬೆಂಗಳೂರು: ಬೆಳ್ಳಂ ಬೆಳಗ್ಗೆ ನಡು ರಸ್ತೆಯಲ್ಲಿ ಭೀಕರ ಅಪಘಾತ (Accident) ನಡೆದಿದೆ. ಅಪಘಾತದ ರಬಸಕ್ಕೆ ಬೈಕ್ ಒಂದಷ್ಟು ದೂರ ಹೋಗಿ ಬಿದ್ದಿದ್ರೆ, ಕಾರಿನ ಮುಂಭಾಗ ಜಖಂಗೊಂಡಿದೆ. ಇನ್ನು ಮೆಲ್ನೋಟಕ್ಕೆ ಇದು ಅನೀರಿಕ್ಷಿತ ಆಕ್ಸಿಡೆಂಟ್ ಎಂದು ನೋಡಿದವರಿಗೆ ಅನ್ನಿಸಿದ್ರು, ಇಲ್ಲಿ ಕಣ್ಣೀರಾಕುತ್ತಾ ದುಖಃದಲ್ಲೆ ಆಕ್ರಂಧನ ಹೊರ ಹಾಕುತ್ತಿರುವ ಇವರು ಹೇಳುತ್ತಿರುವದನ್ನ ಕಂಡು ಪೊಲೀಸರೆ ಒಂದು ಕ್ಷಣ ಬೆಚ್ಚಿ ಬಿದ್ದಿದ್ದಾರೆ. ಹೌದು ಅಂದಹಾಗೆ ಇಂತಹ ಭೀಕರ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ದುರ್ದೈವಿಗಳು ನಾಗರಾಜ್ ಮತ್ತು ರಾಮಯ್ಯ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಚಲ್ಲಹಳ್ಳಿ ಗ್ರಾಮದವರಾದ ಇವರು ರಾಜಾನುಕುಂಟೆಯ ಪ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ(ಮೇ.11) ಬೆಳಗ್ಗೆ ಎಂದಿನಂತೆ ಗ್ರಾಮದಿಂದ ಇಬ್ಬರು ಸ್ನೇಹಿತರು ಕಾಕೋಳು ರಸ್ತೆ ಮೂಲಕ ಕೆಲಸಕ್ಕೆಂದು ಬೈಕ್ ನಲ್ಲಿ ಹೊರಟಿದ್ರು. ಈ ವೇಳೆ ಚಲ್ಲಹಳ್ಳಿ ಗೇಟ್ ಬಳಿ ಕಾಕೋಳು ರಸ್ತೆಯಲ್ಲಿ ಬಂದ ಸ್ವಿಪ್ಟ್ ಕಾರು ನೋಡ ನೋಡುತ್ತಿದ್ದಂತೆ ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಬಸಕ್ಕೆ ಬೈಕ್ ಒಂದಷ್ಟು ದೂರ ಹೋಗಿ ಬಿದ್ದಿದ್ರೆ, ಬೈಕ್​ನಲ್ಲಿದ್ದವರು ರಸ್ತೆಯಲ್ಲಿ ಬಿದ್ದು ಸಾವನ್ನಪಿದ್ದಾರೆ.

ಇನ್ನು ಮೆಲ್ನೂಟಕ್ಕೆ ಅಚಾನಕ್ಕಾಗಿ ಆದ ಅಪಘಾತ ಅಂತಲೇ ಎಲ್ಲರೂ ಅಂದುಕೊಂಡು ರಾಜಾನುಕುಂಟೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಬಾಡಿಗಳನ್ನ ಶಿಪ್ಟ್ ಮಾಡಿಸಿ ಕಾರು ಚಾಲಕ ಭರತ್ ಎಂಬುವವನನ್ನ ವಶಕ್ಕೆ ಪಡೆದಿದ್ರು. ಆದ್ರೆ, ಅಷ್ಟರಲ್ಲೆ ಠಾಣೆ ಮುಂದೆ ಜಮಾಯಿಸಿದ ಸಂಬಂಧಿಕರು ಅಪಘಾತದ ಕೇಸ್​ಗೆ ಕೊಲೆ ಎನ್ನುವ ಅನುಮಾನದ ಟ್ವಿಸ್ಟ್ ನೀಡಿದ್ದಾರೆ. ಮೃತ ನಾಗರಾಜ್ ಮತ್ತು ರಾಮಯ್ಯ ಕಳೆದ ಹಲವು ವರ್ಷಗಳಿಂದ ಜೊತೆಯಲ್ಲೆ ಕೆಲಸಕ್ಕೆ ಹೋಗಿ ಬರ್ತಿದ್ದು, ಕಳೆದ ವಾರ ಕೆಲಸ ಮುಗಿಸಿಕೊಂಡು ಹೋಟೆಲ್ ಒಂದರ ಬಳಿ ಹೋಗಿ ಊಟ ಮಾಡಿ ನೀರು ಕುಡಿಯುತ್ತಿದ್ದನಂತೆ. ಈ ವೇಳೆ ಕಾರು ಚಾಲಕ ಆರೋಪಿ ಭರತ್ ಜಾತಿ ನಿಂದನೆ ಮಾಡಿ ಗಲಾಟೆ ಮಾಡಿ ನಾಗರಾಜ್ ಮೇಲೆ ಹಲ್ಲೆ ಮಾಡಿದ್ದ ಎಂದು ನಾಗರಾಜ್ ತಂದೆ ಆರೋಪಿಸಿದ್ದಾನೆ. ಅಲ್ಲದೆ ಇದೇ ದ್ವೇಷದಿಂದಲೇ ಕಾದುಕೊಂಡಿದ್ದು, ಬೈಕ್​ಗೆ ಡಿಕ್ಕಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಮೃತನ ತಂದೆಗೆ ಕೆಲ ದಲಿತ ಸಂಘಟನೆಗಳ ಮುಖಂಡರು ಸಹ ಸಾಥ್ ನೀಡಿದ್ದು, ರಾಜಾನುಕುಂಟೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:ಕರ್ನಾಟಕದ ಈ ಹೆದ್ದಾರಿ ಈಗ ಸಾವಿನ ಹೆದ್ದಾರಿ; ಒಂದೇ ವರ್ಷದಲ್ಲಿ 30ಕ್ಕೂ ಹೆಚ್ಚು ಅಪಘಾತ, 23 ಸಾವು

ಒಟ್ಟಾರೆ ಬೆಳ್ಳಂ ಬೆಳಗ್ಗೆ ಗ್ರಾಮದ ಹೊರ ವಲಯದಲ್ಲಿ ನಡೆದ ಅಪಘಾತ ಮೃತರ ಕುಟುಂಬಸ್ಥರಲ್ಲಿ ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಈ ಬಗ್ಗೆ ರಾಜಾನುಕುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು, ಪೊಲೀಸರ ತನಿಖೆಯಿಂದಷ್ಟೆ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವುದು ಬೆಳಕಿಗೆ ಬರಬೇಕಿದೆ.

ವರದಿ: ನವೀನ್ ಟಿವಿ9 ದೇವನಹಳ್ಳಿ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು