AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು-ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು: ದ್ವೇಷಕ್ಕೆ ನಡೆಯಿತಾ ಅಪಘಾತ ರೀತಿಯ ಕೊಲೆ?

ಅದು ಬೆಳ್ಳಂ ಬೆಳಗ್ಗೆ ನಡೆದಿದ್ದ ಅಪಘಾತ, ಕೆಲಸಕ್ಕೆ ಹೊರಟಿದ್ದ ಕಾರ್ಮಿಕರ ಬೈಕ್​ಗೆ ಕಾರು ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೆ ದುರ್ಮರಣಕ್ಕೀಡಾಗಿದ್ದರು. ಇನ್ನೂ ಇದು ಸಹಜ ಅಪಘಾತ ಎಂದು ಎಲ್ಲರೂ ಅಂದುಕೊಳ್ಳುತ್ತಿದ್ದಂತೆ, ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಅಪಘಾತದ ನೆಪದಲ್ಲಿ ನಡೆಯಿತಾ ದ್ವೇಷದ ಕೊಲೆ ಎನ್ನುವ ಅನುಮಾನ ಮೂಡಿದೆ.

ಕಾರು-ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು: ದ್ವೇಷಕ್ಕೆ ನಡೆಯಿತಾ ಅಪಘಾತ ರೀತಿಯ ಕೊಲೆ?
ಮೃತ ವ್ಯಕ್ತಿಗಳು
ಕಿರಣ್ ಹನುಮಂತ್​ ಮಾದಾರ್
|

Updated on: May 12, 2023 | 10:32 AM

Share

ಬೆಂಗಳೂರು: ಬೆಳ್ಳಂ ಬೆಳಗ್ಗೆ ನಡು ರಸ್ತೆಯಲ್ಲಿ ಭೀಕರ ಅಪಘಾತ (Accident) ನಡೆದಿದೆ. ಅಪಘಾತದ ರಬಸಕ್ಕೆ ಬೈಕ್ ಒಂದಷ್ಟು ದೂರ ಹೋಗಿ ಬಿದ್ದಿದ್ರೆ, ಕಾರಿನ ಮುಂಭಾಗ ಜಖಂಗೊಂಡಿದೆ. ಇನ್ನು ಮೆಲ್ನೋಟಕ್ಕೆ ಇದು ಅನೀರಿಕ್ಷಿತ ಆಕ್ಸಿಡೆಂಟ್ ಎಂದು ನೋಡಿದವರಿಗೆ ಅನ್ನಿಸಿದ್ರು, ಇಲ್ಲಿ ಕಣ್ಣೀರಾಕುತ್ತಾ ದುಖಃದಲ್ಲೆ ಆಕ್ರಂಧನ ಹೊರ ಹಾಕುತ್ತಿರುವ ಇವರು ಹೇಳುತ್ತಿರುವದನ್ನ ಕಂಡು ಪೊಲೀಸರೆ ಒಂದು ಕ್ಷಣ ಬೆಚ್ಚಿ ಬಿದ್ದಿದ್ದಾರೆ. ಹೌದು ಅಂದಹಾಗೆ ಇಂತಹ ಭೀಕರ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ದುರ್ದೈವಿಗಳು ನಾಗರಾಜ್ ಮತ್ತು ರಾಮಯ್ಯ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಚಲ್ಲಹಳ್ಳಿ ಗ್ರಾಮದವರಾದ ಇವರು ರಾಜಾನುಕುಂಟೆಯ ಪ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ(ಮೇ.11) ಬೆಳಗ್ಗೆ ಎಂದಿನಂತೆ ಗ್ರಾಮದಿಂದ ಇಬ್ಬರು ಸ್ನೇಹಿತರು ಕಾಕೋಳು ರಸ್ತೆ ಮೂಲಕ ಕೆಲಸಕ್ಕೆಂದು ಬೈಕ್ ನಲ್ಲಿ ಹೊರಟಿದ್ರು. ಈ ವೇಳೆ ಚಲ್ಲಹಳ್ಳಿ ಗೇಟ್ ಬಳಿ ಕಾಕೋಳು ರಸ್ತೆಯಲ್ಲಿ ಬಂದ ಸ್ವಿಪ್ಟ್ ಕಾರು ನೋಡ ನೋಡುತ್ತಿದ್ದಂತೆ ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಬಸಕ್ಕೆ ಬೈಕ್ ಒಂದಷ್ಟು ದೂರ ಹೋಗಿ ಬಿದ್ದಿದ್ರೆ, ಬೈಕ್​ನಲ್ಲಿದ್ದವರು ರಸ್ತೆಯಲ್ಲಿ ಬಿದ್ದು ಸಾವನ್ನಪಿದ್ದಾರೆ.

ಇನ್ನು ಮೆಲ್ನೂಟಕ್ಕೆ ಅಚಾನಕ್ಕಾಗಿ ಆದ ಅಪಘಾತ ಅಂತಲೇ ಎಲ್ಲರೂ ಅಂದುಕೊಂಡು ರಾಜಾನುಕುಂಟೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಬಾಡಿಗಳನ್ನ ಶಿಪ್ಟ್ ಮಾಡಿಸಿ ಕಾರು ಚಾಲಕ ಭರತ್ ಎಂಬುವವನನ್ನ ವಶಕ್ಕೆ ಪಡೆದಿದ್ರು. ಆದ್ರೆ, ಅಷ್ಟರಲ್ಲೆ ಠಾಣೆ ಮುಂದೆ ಜಮಾಯಿಸಿದ ಸಂಬಂಧಿಕರು ಅಪಘಾತದ ಕೇಸ್​ಗೆ ಕೊಲೆ ಎನ್ನುವ ಅನುಮಾನದ ಟ್ವಿಸ್ಟ್ ನೀಡಿದ್ದಾರೆ. ಮೃತ ನಾಗರಾಜ್ ಮತ್ತು ರಾಮಯ್ಯ ಕಳೆದ ಹಲವು ವರ್ಷಗಳಿಂದ ಜೊತೆಯಲ್ಲೆ ಕೆಲಸಕ್ಕೆ ಹೋಗಿ ಬರ್ತಿದ್ದು, ಕಳೆದ ವಾರ ಕೆಲಸ ಮುಗಿಸಿಕೊಂಡು ಹೋಟೆಲ್ ಒಂದರ ಬಳಿ ಹೋಗಿ ಊಟ ಮಾಡಿ ನೀರು ಕುಡಿಯುತ್ತಿದ್ದನಂತೆ. ಈ ವೇಳೆ ಕಾರು ಚಾಲಕ ಆರೋಪಿ ಭರತ್ ಜಾತಿ ನಿಂದನೆ ಮಾಡಿ ಗಲಾಟೆ ಮಾಡಿ ನಾಗರಾಜ್ ಮೇಲೆ ಹಲ್ಲೆ ಮಾಡಿದ್ದ ಎಂದು ನಾಗರಾಜ್ ತಂದೆ ಆರೋಪಿಸಿದ್ದಾನೆ. ಅಲ್ಲದೆ ಇದೇ ದ್ವೇಷದಿಂದಲೇ ಕಾದುಕೊಂಡಿದ್ದು, ಬೈಕ್​ಗೆ ಡಿಕ್ಕಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಮೃತನ ತಂದೆಗೆ ಕೆಲ ದಲಿತ ಸಂಘಟನೆಗಳ ಮುಖಂಡರು ಸಹ ಸಾಥ್ ನೀಡಿದ್ದು, ರಾಜಾನುಕುಂಟೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:ಕರ್ನಾಟಕದ ಈ ಹೆದ್ದಾರಿ ಈಗ ಸಾವಿನ ಹೆದ್ದಾರಿ; ಒಂದೇ ವರ್ಷದಲ್ಲಿ 30ಕ್ಕೂ ಹೆಚ್ಚು ಅಪಘಾತ, 23 ಸಾವು

ಒಟ್ಟಾರೆ ಬೆಳ್ಳಂ ಬೆಳಗ್ಗೆ ಗ್ರಾಮದ ಹೊರ ವಲಯದಲ್ಲಿ ನಡೆದ ಅಪಘಾತ ಮೃತರ ಕುಟುಂಬಸ್ಥರಲ್ಲಿ ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಈ ಬಗ್ಗೆ ರಾಜಾನುಕುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು, ಪೊಲೀಸರ ತನಿಖೆಯಿಂದಷ್ಟೆ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವುದು ಬೆಳಕಿಗೆ ಬರಬೇಕಿದೆ.

ವರದಿ: ನವೀನ್ ಟಿವಿ9 ದೇವನಹಳ್ಳಿ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್