AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಏರ್​ಪೋರ್ಟ್​ ರಸ್ತೆಯಲ್ಲಿ ಭೀಕರ ಅಪಘಾತ! ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ದ್ವಿಚಕ್ರ ಚಾಲಕ ಏರ್ಫೊರ್ಟ್ ಫ್ಲೈಓವರ್ ಮೇಲೆ ಹೋಗುತ್ತಿದ್ದರು. ಈ ವೇಳೆ ಎಡಬದಿಯಲ್ಲಿ ಹೋಗುತ್ತಿದ್ದ ಬೈಕ್ ಹಿಂದಿನಿಂದ ಬಂದ ಕಾರು ರಭಸವಾಗಿ ಗುದ್ದಿದೆ. ಪರಿಣಾಮ ಫ್ಲೈಓವರ್ ಮೇಲಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದಾರೆ.

ಬೆಂಗಳೂರಿನ ಏರ್​ಪೋರ್ಟ್​ ರಸ್ತೆಯಲ್ಲಿ ಭೀಕರ ಅಪಘಾತ! ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಫ್ಲೈಓವರ್ ಮೇಲಿಂದ ಬೈಕ್ ಸಮೇತ ಸವಾರ ಕೆಳಗೆ ಬಿದ್ದಿದ್ದಾರೆ.
TV9 Web
| Edited By: sandhya thejappa|

Updated on:May 22, 2022 | 12:07 PM

Share

ಬೆಂಗಳೂರು: ನಗರದ ಏರ್ಪೋರ್ಟ್ ರಸ್ತೆಯಲ್ಲಿ ಇಂದು (ಮೇ 22) ಭೀಕರ ಅಪಘಾತ (Accident) ನಡೆದಿದ್ದು, ಘಟನೆಯಲ್ಲಿ ಫ್ಲೈಓವರ್ (fly over) ಮೇಲಿಂದ ಕೆಳಗೆ ಬಿದ್ದು ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಕ್ಕೂರು ಏರೋಡ್ರಮ್ ಸಮೀಪ ಈ ದುರ್ಘಟನೆ ಸಂಭವಿಸಿದೆ. ದ್ವಿಚಕ್ರ ಚಾಲಕ ಏರ್ಫೊರ್ಟ್ ಫ್ಲೈಓವರ್ ಮೇಲೆ ಹೋಗುತ್ತಿದ್ದರು. ಈ ವೇಳೆ ಎಡಬದಿಯಲ್ಲಿ ಹೋಗುತ್ತಿದ್ದ ಬೈಕ್ ಹಿಂದಿನಿಂದ ಬಂದ ಕಾರು ರಭಸವಾಗಿ ಗುದ್ದಿದೆ. ಪರಿಣಾಮ ಫ್ಲೈಓವರ್ ಮೇಲಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದಾರೆ.

ಬೈಕ್​ನಲ್ಲಿ ಹಿಂಬದಿ 12 ವರ್ಷದ ಬಾಲಕನಿದ್ದ. ಆತ ಗಂಭೀರ ಗಾಯಗೊಂಡಿದ್ದಾನೆ. ಅಪಘಾತ ಸ್ಥಳದಿಂದ 200 ಮೀಟರ್ ದೂರದಲ್ಲಿ ಬೈಕ್ ಬಿದ್ದಿದೆ. ಸದ್ಯ ಪೊಲೀಸರು ಅಪಘಾತಕ್ಕೆ ಒಳಗಾದವರ ಗುರುತು ಪತ್ತೆಹಚ್ಚುತ್ತಿದ್ದಾರೆ. ಕೆ ಆರ್ ಪುರಂ ಬಳಿ ಕಾರು ಚಾಲಕ ವರುಣ್​ನ  ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Colorectal Cancer: ಗುದನಾಳದ ಕ್ಯಾನ್ಸರ್ ಎಂದರೇನು? ಲಕ್ಷಣಗಳೇನು? ಡಯಟ್​ನಲ್ಲಿ ಏನಿರಬೇಕು

ಇದನ್ನೂ ಓದಿ
Image
Colorectal Cancer: ಗುದನಾಳದ ಕ್ಯಾನ್ಸರ್ ಎಂದರೇನು? ಲಕ್ಷಣಗಳೇನು? ಡಯಟ್​ನಲ್ಲಿ ಏನಿರಬೇಕು
Image
ವೇತನ ಹೆಚ್ಚಳವಾಯ್ತೇ? ಹಾಗಿದ್ದರೆ ಹೆಚ್ಚುವರಿ ತೆರಿಗೆ ಉಳಿಸಲು ಈ ಅಂಶಗಳನ್ನು ಫಾಲೋ ಮಾಡಿ
Image
ಮರಳು ತುಂಬುವ ಎರಡು ಗುಂಪುಗಳ ನಡುವೆ ಮಾರಾಮಾರಿ: 10ಕ್ಕೂ ಹೆಚ್ಚು ಜನರಿಗೆ ಗಾಯ, 16 ಜನರ ಬಂಧನ
Image
ದುನಿಯಾ ವಿಜಯ್​ ನಿರ್ದೇಶನದ ‘ಭೀಮ’ ಚಿತ್ರದ ಮೇಕಿಂಗ್ ವಿಡಿಯೋ ಕಂಡು ಕಣ್ಣರಳಿಸಿದ ಫ್ಯಾನ್ಸ್​

ಮೃತ ವ್ಯಕ್ತಿ 44 ವರ್ಷದ ಗೋವಿಂದಪ್ಪ ಎಂದು ತಿಳಿದುಬಂದಿದೆ. ಮೃತ ವ್ಯಕ್ತಿ ಜಕ್ಕೂರು ಲೇಔಟ್ ನಿವಾಸಿ. ಗೋವಿಂದಪ್ಪ ಸಂಬಂಧಿಕರ ಮಗನಿಗೆ ಜಕ್ಕೂರು ಏರೋಡ್ರಮ್ ತೋರಿಸಲು ಬಂದಿದ್ದರು. ಏರ್​ಪೋರ್ಟ್ ಫ್ಲೈಓವರ್ ಮೇಲೆ ಮೊಪೆಡ್ ಬೈಕ್ ನಿಲ್ಲಿಸಿ ಏರೋಡ್ರಮ್ ತೋರಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಮೊಪೆಡ್​ಗೆ ಡಿಕ್ಕಿ ಹೊಡೆದಿದೆ. ಬಾಲಕ ಸಂಜಯ್​ಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಏರ್​ಪೋರ್ಟ್​ ಕಡೆಯಿಂದ ವೇಗವಾಗಿ ಬರುತ್ತಿತ್ತು. ಕಾರಿನಲ್ಲಿ ಐವರು ಸ್ನೇಹಿತರು ಇದ್ದರು. ಬಂಧನಕ್ಕೊಳಗಾಗಿರುವ ವರುಣ್ ಜೆಸಿ ನಗರದ ಮೆಡಿಕಲ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

ಬೆಳಗಾವಿ ಮೂಲದ ಮೂವರು ಮೃತ: ಗೋವಾದ ಮಾಪ್ಸಾ ಜಿಲ್ಲೆಯ ಕುಛೇಲಿ ಬಳಿ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ  ಬೆಳಗಾವಿ ಮೂಲದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಯರ್(28), ರೋಹನ್(26), ಸನ್ನಿ ಅವನೇಕರ್(31) ಮೃತ ಯುವಕರು. ವಿಶಾಲ್ ಕರಜೇಕರ್‌ಗೆ ಗಂಭೀರ ಗಾಯವಾಗಿದ್ದು, ಜೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:15 am, Sun, 22 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು