AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಾಜಿನಗರದ ಪರೀಕ್ಷಾ ಕೊಠಡಿಗೆ ಹಿಜಾಬ್ ಧರಿಸಿ ಬಂದ ಮೇಲ್ವಿಚಾರಕಿ ಅಮಾನತು!

ಹಿಜಾಬ್ ತೆಗಿಯಬೇಕು ಎನ್ನುವ ಆದೇಶ ವಿದ್ಯಾರ್ಥಿಗಳಿಗೆ ಮಾತ್ರ. ಶಿಕ್ಷಕರಿಗೆ ಅನ್ವಯಿಸಲ್ಲ ಅಂತ ಅಧೀಕ್ಷಕರ ಜೊತೆ ವಾದ ಶಿಕ್ಷಕಿ ನೂರ್ ಫಾತಿಮಾ ವಾಗ್ವಾದ ನಡೆಸಿದರು.

ರಾಜಾಜಿನಗರದ ಪರೀಕ್ಷಾ ಕೊಠಡಿಗೆ ಹಿಜಾಬ್ ಧರಿಸಿ ಬಂದ ಮೇಲ್ವಿಚಾರಕಿ ಅಮಾನತು!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 28, 2022 | 11:52 AM

Share

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ (SSLC Exam) ಆರಂಭವಾಗಿದೆ. ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು (Students) ಪರೀಕ್ಷೆ ಬರೆಯಲಿದ್ದಾರೆ. ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಮತಿ ನೀಡಲ್ಲ ಅಂತ ಸರ್ಕಾರ ಈಗಾಗಲೇ ತಿಳಿಸಿದೆ. ಹೀಗಿದ್ದೂ, ರಾಜಾಜಿನಗರದ ಕೆಟಿಎಸ್​ವಿ ಹೈಸ್ಕೂಲ್ ಶಿಕ್ಷಕಿ ಪರೀಕ್ಷಾ ಕೊಠಡಿಗೆ ಹಿಜಾಬ್ ಧರಿಸಿ ಬಂದಿದ್ದರು. ಹೀಗೆ ಹಿಜಾಬ್ ಧರಿಸಿ ಬಂದ ಪರೀಕ್ಷಾ ಮೇಲ್ವಿಚಾರಕಿ ಫಾತಿಮಾ ಅವರನ್ನು ಅಮಾನತು ಮಾಡಲಾಗಿದೆ. ಪರೀಕ್ಷಾ ಕೆಲಸದಿಂದ ಮುಖ್ಯ ಅಧೀಕ್ಷಕರು ವಜಾಗೊಳಿಸಿದ್ದಾರೆ.

ಶಿಕ್ಷಕಿ ನೂರ್ ಫಾತಿಮಾ ಅವರನ್ನು ಪರೀಕ್ಷಾ ಮೇಲ್ವಿಚಾರಕರಾಗಿ ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಹಿಜಾಬ್ ಧರಿಸಿ ಬಂದ ಹಿನ್ನೆಲೆ ಕೂಡಲೇ ಪರೀಕ್ಷಾ ಕೆಲಸದಿಂದ ವಜಾಗೊಳಿಸಿದ ರಾಜಾಜಿನಗರದ ಸಿದ್ದಗಂಗಾ ಶಾಲೆಯ ಪರೀಕ್ಷಾ ಕೇಂದ್ರದ ಅಧೀಕ್ಷಕಿ ಮಾಲಿನಿ, ಇವರ ಜಾಗಕ್ಕೆ ಮತ್ತೋರ್ವ ಪರೀಕ್ಷಾ ಮೇಲ್ವಿಚಾರಕರನ್ನು ನಿಯೋಜನೆ ಮಾಡಿದ್ದಾರೆ. ಹಿಜಾಬ್ ತೆಗಿಯಬೇಕು ಎನ್ನುವ ಆದೇಶ ವಿದ್ಯಾರ್ಥಿಗಳಿಗೆ ಮಾತ್ರ. ಶಿಕ್ಷಕರಿಗೆ ಅನ್ವಯಿಸಲ್ಲ ಅಂತ ಅಧೀಕ್ಷಕರ ಜೊತೆ ವಾದ ಶಿಕ್ಷಕಿ ನೂರ್ ಫಾತಿಮಾ ವಾಗ್ವಾದ ನಡೆಸಿದರು.

ಹಿಜಾಬ್ ತೆಗೆಯುವಂತೆ ಸೂಚಿಸಿದರು ಶಿಕ್ಷಕಿ ಫಾತಿಮಾ ನಿರಾಕಸಿದ್ದಾರೆ. ಹೀಗಾಗಿ ಪರೀಕ್ಷಾ ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಹಿಜಾಬ್​ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಅಂತ ಸರ್ಕಾರ ಈಗಾಗಲೇ ತಿಳಿಸಿದೆ. ಆದರೆ ಶಿವಮೊಗ್ಗದ ಕಸ್ತೂರಬಾ ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿ ಹಿಬಾಜ್‌ಗೆ ಅನುಮತಿ ನೀಡದ ಹಿನ್ನೆಲೆ ಮನೆಗೆ ವಾಪಸ್ ಆಗಿದ್ದಳು. ನಂತರ ಪೋಷಕರು ಮನೆಗೆ ವಾಪಸಾಗಿದ್ದ ವಿದ್ಯಾರ್ಥಿನಿಯನ್ನ ಕರೆತಂದು ಬುದ್ಧಿವಾದ ಹೇಳಿದ್ದಾರೆ.

ಇದನ್ನೂ ಓದಿ

ವಾಗೀಶ್ ಸ್ವಾಮಿಗೆ ಟಿಕೆಟ್ ಇಲ್ಲ ಎಂದ ಸಿದ್ದೇಶ್ವರ: ರೇಣುಕಾಚಾರ್ಯ ಆಪ್ತರಿಗೆ ಹಿನ್ನಡೆ

ಇಂದಿನಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ; ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ

Published On - 11:42 am, Mon, 28 March 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು