AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಮೂರು ವರ್ಷದ ಮಗು? ಅನುಮಾಸ್ಪದ ಸಾವಿನ ಬಗ್ಗೆ ದೂರು ದಾಖಲು

ಬೆಂಗಳೂರಿನಲ್ಲಿ ಜ್ವರದಿಂದ ಬಳಲುತ್ತಿದ್ದ 3 ವರ್ಷದ ಮಗು ವೈದ್ಯರ ನಿರ್ಲಕ್ಷ್ಯಕ್ಕೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮಗುವಿನ ಪೋಷಕರು ಆಸ್ಪತ್ರೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಮೂರು ವರ್ಷದ ಮಗು? ಅನುಮಾಸ್ಪದ ಸಾವಿನ ಬಗ್ಗೆ ದೂರು ದಾಖಲು
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 27, 2023 | 7:00 AM

Share

ಬೆಂಗಳೂರು: ನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಜ್ವರದಿಂದ ಬಳಲುತ್ತಿದ್ದ 3 ವರ್ಷದ ಮಗುವನ್ನ ನಿನ್ನೆ(ಏ.26) ಮಧ್ಯಾಹ್ನ ಯಲಹಂಕದ ಶುಶ್ರೂಷಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಸುಮಾರು ಒಂದು ಗಂಟೆ ಕಾಲ ಚಿಕಿತ್ಸೆ ನೀಡದೆ ವೈದ್ಯರು ಕಾಯಿಸಿದ್ದಾರೆ. ನಂತರ ಅಲ್ಲಿಂದ ಹೆಬ್ಬಾಳದ ಬ್ಯಾಪ್ಟಿಸ್ಟ್​ ಆಸ್ಪತ್ರೆಗೆ ಕಳಿಸಿದ್ದು, ಸಂಜೆ ಸುಮಾರಿಗೆ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ರಾತ್ರಿ 9 ಗಂಟೆ ಬಳಿಕ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ.

ಇನ್ನು ಮಗುವಿನ ಸಾವಿನ ವಿಚಾರ ಪೋಷಕರಿಗೆ ತಿಳಿಯುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿದ್ದು, ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಮಗುವಿನ ಅನುಮಾನಾಸ್ಪದ ಸಾವಿನ ಬಗ್ಗೆ ದೂರು ನೀಡಲು ನಿರ್ಧರಿಸಿದ್ದು, ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಮಗು ಅಳುತ್ತಿರುವುದಕ್ಕೆ ವಿಮಾನದಲ್ಲಿನ ಪ್ರಯಾಣಿಕ ಸಿಡಿಮಿಡಿ; ಕೋಪಗೊಂಡು ವ್ಯಕ್ತಿ ಮಾಡಿದ್ದೇನು ಗೊತ್ತಾ?

ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಮಗು ಸಾವು: ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಇಂತಹ ಘಟನೆಗಳು ಇತ್ತೀಚೆಗೆ ಹೆಚ್ಚಾಗಿದ್ದು ಕಳೆದ ಮಾರ್ಚ್​ 9 ರಂದು ಹೊಟ್ಟೆ ನೋವು ಎಂದು ಹೊಸಕೋಟೆ ಗ್ರಾಮದ ಕಂಬಳಿಪುರ ಗ್ರಾಮದ ವೇಣುಗೋಪಾಲ ಮತ್ತು ಪ್ರಿಯಾಂಕಾ ದಂಪತಿಯ 5 ತಿಂಗಳ ಮಗುವನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಬಳಿಕ  ಮಗು ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿತ್ತು. ಇದಕ್ಕೆ ವೈದ್ಯರ ನಿರ್ಲಕ್ಷ್ಯಕ್ಕೆ ಕಾರಣ ಎಂದು ಪೋಷಕರು ಆರೋಪಿಸಿದ್ದರು. ಹೌದು ಮಗುವಿಗೆ ಹೊಟ್ಟೆ ನೋವು ಹಾಗೂ ವಾಂತಿ ಕಾಣಿಸಿಕೊಂಡಿದ್ದು,ನಂತರ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಒಂದು ವಾರದಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಮಗು ಮಾತ್ರ ಗುಣಮುಖವಾಗಿರಲಿಲ್ಲ ಎಂದು ಪೋಷಕರು ಆರೋಪಿಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ