AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಮೂರು ವರ್ಷದ ಮಗು? ಅನುಮಾಸ್ಪದ ಸಾವಿನ ಬಗ್ಗೆ ದೂರು ದಾಖಲು

ಬೆಂಗಳೂರಿನಲ್ಲಿ ಜ್ವರದಿಂದ ಬಳಲುತ್ತಿದ್ದ 3 ವರ್ಷದ ಮಗು ವೈದ್ಯರ ನಿರ್ಲಕ್ಷ್ಯಕ್ಕೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮಗುವಿನ ಪೋಷಕರು ಆಸ್ಪತ್ರೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಮೂರು ವರ್ಷದ ಮಗು? ಅನುಮಾಸ್ಪದ ಸಾವಿನ ಬಗ್ಗೆ ದೂರು ದಾಖಲು
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Apr 27, 2023 | 7:00 AM

Share

ಬೆಂಗಳೂರು: ನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಜ್ವರದಿಂದ ಬಳಲುತ್ತಿದ್ದ 3 ವರ್ಷದ ಮಗುವನ್ನ ನಿನ್ನೆ(ಏ.26) ಮಧ್ಯಾಹ್ನ ಯಲಹಂಕದ ಶುಶ್ರೂಷಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಸುಮಾರು ಒಂದು ಗಂಟೆ ಕಾಲ ಚಿಕಿತ್ಸೆ ನೀಡದೆ ವೈದ್ಯರು ಕಾಯಿಸಿದ್ದಾರೆ. ನಂತರ ಅಲ್ಲಿಂದ ಹೆಬ್ಬಾಳದ ಬ್ಯಾಪ್ಟಿಸ್ಟ್​ ಆಸ್ಪತ್ರೆಗೆ ಕಳಿಸಿದ್ದು, ಸಂಜೆ ಸುಮಾರಿಗೆ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ರಾತ್ರಿ 9 ಗಂಟೆ ಬಳಿಕ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ.

ಇನ್ನು ಮಗುವಿನ ಸಾವಿನ ವಿಚಾರ ಪೋಷಕರಿಗೆ ತಿಳಿಯುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿದ್ದು, ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಮಗುವಿನ ಅನುಮಾನಾಸ್ಪದ ಸಾವಿನ ಬಗ್ಗೆ ದೂರು ನೀಡಲು ನಿರ್ಧರಿಸಿದ್ದು, ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಮಗು ಅಳುತ್ತಿರುವುದಕ್ಕೆ ವಿಮಾನದಲ್ಲಿನ ಪ್ರಯಾಣಿಕ ಸಿಡಿಮಿಡಿ; ಕೋಪಗೊಂಡು ವ್ಯಕ್ತಿ ಮಾಡಿದ್ದೇನು ಗೊತ್ತಾ?

ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಮಗು ಸಾವು: ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಇಂತಹ ಘಟನೆಗಳು ಇತ್ತೀಚೆಗೆ ಹೆಚ್ಚಾಗಿದ್ದು ಕಳೆದ ಮಾರ್ಚ್​ 9 ರಂದು ಹೊಟ್ಟೆ ನೋವು ಎಂದು ಹೊಸಕೋಟೆ ಗ್ರಾಮದ ಕಂಬಳಿಪುರ ಗ್ರಾಮದ ವೇಣುಗೋಪಾಲ ಮತ್ತು ಪ್ರಿಯಾಂಕಾ ದಂಪತಿಯ 5 ತಿಂಗಳ ಮಗುವನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಬಳಿಕ  ಮಗು ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿತ್ತು. ಇದಕ್ಕೆ ವೈದ್ಯರ ನಿರ್ಲಕ್ಷ್ಯಕ್ಕೆ ಕಾರಣ ಎಂದು ಪೋಷಕರು ಆರೋಪಿಸಿದ್ದರು. ಹೌದು ಮಗುವಿಗೆ ಹೊಟ್ಟೆ ನೋವು ಹಾಗೂ ವಾಂತಿ ಕಾಣಿಸಿಕೊಂಡಿದ್ದು,ನಂತರ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಒಂದು ವಾರದಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಮಗು ಮಾತ್ರ ಗುಣಮುಖವಾಗಿರಲಿಲ್ಲ ಎಂದು ಪೋಷಕರು ಆರೋಪಿಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ