AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ಯವಾದ ತಿಳಿಸುವ ನೆಪದಲ್ಲಿ ತಬ್ಬಿಕೊಂಡು ಚಿನ್ನದ ಸರವನ್ನು ಎಗರಿಸುವ ಲೇಡಿ! ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮಹಿಳೆ ಜನರ ಗಮನವನ್ನು ಬೇರೆಡೆ ಸೆಳೆದು ಕ್ಷಣಾರ್ಧದಲ್ಲೇ ಬಂಗಾರದ ಸರವನ್ನು ಕದಿಯುತ್ತಾಳೆ. ಕಾರಿನಲ್ಲಿ ಪ್ರಯಾಣಿಸುವ ಶ್ರೀಮಂತರೇ ಇವಳಿಗೆ ಟಾರ್ಗೆಟ್ ಅಂತೆ. ಡ್ರಾಪ್ ಕೇಳುವ ನೆಪದಲ್ಲಿ ಕಾರು ಹತ್ತುತ್ತಾಳೆ. ಥ್ಯಾಂಕ್ಸ್ ಹೇಳಲು ತಬ್ಬಿಕೊಳ್ಳುತ್ತಾಳೆ.

ಧನ್ಯವಾದ ತಿಳಿಸುವ ನೆಪದಲ್ಲಿ ತಬ್ಬಿಕೊಂಡು ಚಿನ್ನದ ಸರವನ್ನು ಎಗರಿಸುವ ಲೇಡಿ! ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಚಿನ್ನದ ಸರವನ್ನು ಎಗರಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
TV9 Web
| Edited By: |

Updated on:Feb 09, 2022 | 8:56 AM

Share

ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬಳು ಧನ್ಯವಾದ ತಿಳಿಸುವ ನೆಪದಲ್ಲಿ ತಬ್ಬಿಕೊಂಡು ಚೈನ್ ಕಳ್ಳತನ (Chain Snatching) ಮಾಡುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಮಹಿಳೆ ಡ್ರಾಪ್ ಕೇಳಿ ವಕೀಲ ಪ್ರವೀಣ್ ಎಂಬುವವರ ಕಾರು ಹತ್ತಿದ್ದಳು. ಕಾರು ಇಳಿದ ಬಳಿಕ ಧನ್ಯವಾದ ತಿಳಿಸಿ ತಬ್ಬಿಕೊಂಡಿದ್ದಾಳೆ. ಈ ವೇಳೆ ಪ್ರವೀಣ್ ಎಂಬುವವರ ಚಿನ್ನದ ಸರವನ್ನು ಎಗರಿಸಿದ್ದಾಳೆ. ಈ ಘಟನೆ ಬೆಂಗಳೂರಿನ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ನಡೆದಿದ್ದು, ಕ್ಷಣಾರ್ಧದಲ್ಲಿ ಜನರ ಚಿನ್ನದ ಸರವನ್ನು ಎಗರಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ (CC Camera) ಸೆರೆಯಾಗಿದೆ.

ಮಹಿಳೆ ಜನರ ಗಮನವನ್ನು ಬೇರೆಡೆ ಸೆಳೆದು ಕ್ಷಣಾರ್ಧದಲ್ಲೇ ಬಂಗಾರದ ಸರವನ್ನು ಕದಿಯುತ್ತಾಳೆ. ಕಾರಿನಲ್ಲಿ ಪ್ರಯಾಣಿಸುವ ಶ್ರೀಮಂತರೇ ಇವಳಿಗೆ ಟಾರ್ಗೆಟ್ ಅಂತೆ. ಡ್ರಾಪ್ ಕೇಳುವ ನೆಪದಲ್ಲಿ ಕಾರು ಹತ್ತುತ್ತಾಳೆ. ಥ್ಯಾಂಕ್ಸ್ ಹೇಳಲು ತಬ್ಬಿಕೊಳ್ಳುತ್ತಾಳೆ. ಈ ವೇಳೆ ಕುತ್ತಿಗೆಯಲ್ಲಿರುವ ಬಂಗಾರದ ಸರವನ್ನು ಕದಿಯುತ್ತಾಳೆ. ಇದೇ ರೀತಿ ವಕೀಲ ಪ್ರವೀಣ್ ಸರವನ್ನು ಕದ್ದಿದ್ದಾಳೆ. ಏರ್ ಲೈನ್ಸ್ ಹೋಟೆಲ್ ಬಳಿ ಫೆಬ್ರವರಿ 3 ರಂದು ಈ ಘಟನೆ ನಡೆದಿದೆ.

ಪ್ರವೀಣ್ ಕುತ್ತಿಗೆಯಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ಕದ್ದ ಮಹಿಳೆ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಾಕಿಂಗ್ ಹೋಗುತ್ತಿದ್ದ ವೃದ್ಧೆಯ ಸರ ಕಳ್ಳತನ: ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಆದರ್ಶ ನಗರದಲ್ಲಿ ವಾಕಿಂಗ್ ಹೋಗುತ್ತಿದ್ದ ವೃದ್ಧೆಯೊಬ್ಬರು ಸರ ಕಳ್ಳತನವಾಗಿದೆ. ಸೌಭಾಗ್ಯ(60) ಎಂಬುವವರ ಮಾಂಗಲ್ಯ ಸರ ಕಳ್ಳತನವಾಗಿದೆ. 60ಗ್ರಾಂ ತೂಕದ ಮಾಂಗಲ್ಯ ಸರ 2 ಲಕ್ಷಕ್ಕೂ ಹೆಚ್ಚು ಬೆಲೆಬಾಳುವತ್ತದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೌಡಿಶೀಟರ್​ನಿಂದ ಹಲ್ಲೆ: ಹಣಕಾಸು ವಿಚಾರದಲ್ಲಿ ರೌಡಿಶೀಟರ್​ ರಸ್ತೆಯಲ್ಲೇ ಹಲ್ಲೆ ನಡೆಸಿರುವ ಘಟನೆ  ಬೆಂಗಳೂರಿನ ಅಟ್ಟೂರು ಲೇಔಟ್​ನಲ್ಲಿ ನಡೆದಿದೆ. ರೌಡಿಶೀಟರ್​ ಶ್ರೀಕಾಂತ್​ ಚರಣ್​ರಾಜ್​ ಮೇಲೆ ಹಲ್ಲೆ ಮಾಡಿದ್ದಾನೆ. ಗೂಡ್ಸ್​ ​ವಾಹನಕ್ಕೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾನೆ. ಆರೋಪಿ ಪರವಾಗಿ ಮತ್ತೊಬ್ಬ ರೌಡಿಶೀಟರ್​​ ಧಮ್ಕಿ ಹಾಕಿದ್ದಾನೆ. ಈ ಬಗ್ಗೆ ಯಲಹಂಕ‌ ನ್ಯೂಟೌನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ

ಕುಂಕುಮಾರ್ಚನೆ ಮಾಡುವುದರ ಮಹತ್ವ ಮತ್ತು ಪ್ರಾಮುಖ್ಯತೆ, ಯಾವ ಬೆರಳಿನಿಂದ ಕುಂಕುಮ ಹಚ್ಚಬೇಕು, ಶಾಸ್ತ್ರ ಏನು ಹೇಳುತ್ತದೆ?

Weather Today: ಪಂಜಾಬ್, ದೆಹಲಿ ಸೇರಿ 15 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ

Published On - 8:52 am, Wed, 9 February 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ