AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ಯವಾದ ತಿಳಿಸುವ ನೆಪದಲ್ಲಿ ತಬ್ಬಿಕೊಂಡು ಚಿನ್ನದ ಸರವನ್ನು ಎಗರಿಸುವ ಲೇಡಿ! ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮಹಿಳೆ ಜನರ ಗಮನವನ್ನು ಬೇರೆಡೆ ಸೆಳೆದು ಕ್ಷಣಾರ್ಧದಲ್ಲೇ ಬಂಗಾರದ ಸರವನ್ನು ಕದಿಯುತ್ತಾಳೆ. ಕಾರಿನಲ್ಲಿ ಪ್ರಯಾಣಿಸುವ ಶ್ರೀಮಂತರೇ ಇವಳಿಗೆ ಟಾರ್ಗೆಟ್ ಅಂತೆ. ಡ್ರಾಪ್ ಕೇಳುವ ನೆಪದಲ್ಲಿ ಕಾರು ಹತ್ತುತ್ತಾಳೆ. ಥ್ಯಾಂಕ್ಸ್ ಹೇಳಲು ತಬ್ಬಿಕೊಳ್ಳುತ್ತಾಳೆ.

ಧನ್ಯವಾದ ತಿಳಿಸುವ ನೆಪದಲ್ಲಿ ತಬ್ಬಿಕೊಂಡು ಚಿನ್ನದ ಸರವನ್ನು ಎಗರಿಸುವ ಲೇಡಿ! ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಚಿನ್ನದ ಸರವನ್ನು ಎಗರಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
TV9 Web
| Edited By: sandhya thejappa|

Updated on:Feb 09, 2022 | 8:56 AM

Share

ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬಳು ಧನ್ಯವಾದ ತಿಳಿಸುವ ನೆಪದಲ್ಲಿ ತಬ್ಬಿಕೊಂಡು ಚೈನ್ ಕಳ್ಳತನ (Chain Snatching) ಮಾಡುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಮಹಿಳೆ ಡ್ರಾಪ್ ಕೇಳಿ ವಕೀಲ ಪ್ರವೀಣ್ ಎಂಬುವವರ ಕಾರು ಹತ್ತಿದ್ದಳು. ಕಾರು ಇಳಿದ ಬಳಿಕ ಧನ್ಯವಾದ ತಿಳಿಸಿ ತಬ್ಬಿಕೊಂಡಿದ್ದಾಳೆ. ಈ ವೇಳೆ ಪ್ರವೀಣ್ ಎಂಬುವವರ ಚಿನ್ನದ ಸರವನ್ನು ಎಗರಿಸಿದ್ದಾಳೆ. ಈ ಘಟನೆ ಬೆಂಗಳೂರಿನ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ನಡೆದಿದ್ದು, ಕ್ಷಣಾರ್ಧದಲ್ಲಿ ಜನರ ಚಿನ್ನದ ಸರವನ್ನು ಎಗರಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ (CC Camera) ಸೆರೆಯಾಗಿದೆ.

ಮಹಿಳೆ ಜನರ ಗಮನವನ್ನು ಬೇರೆಡೆ ಸೆಳೆದು ಕ್ಷಣಾರ್ಧದಲ್ಲೇ ಬಂಗಾರದ ಸರವನ್ನು ಕದಿಯುತ್ತಾಳೆ. ಕಾರಿನಲ್ಲಿ ಪ್ರಯಾಣಿಸುವ ಶ್ರೀಮಂತರೇ ಇವಳಿಗೆ ಟಾರ್ಗೆಟ್ ಅಂತೆ. ಡ್ರಾಪ್ ಕೇಳುವ ನೆಪದಲ್ಲಿ ಕಾರು ಹತ್ತುತ್ತಾಳೆ. ಥ್ಯಾಂಕ್ಸ್ ಹೇಳಲು ತಬ್ಬಿಕೊಳ್ಳುತ್ತಾಳೆ. ಈ ವೇಳೆ ಕುತ್ತಿಗೆಯಲ್ಲಿರುವ ಬಂಗಾರದ ಸರವನ್ನು ಕದಿಯುತ್ತಾಳೆ. ಇದೇ ರೀತಿ ವಕೀಲ ಪ್ರವೀಣ್ ಸರವನ್ನು ಕದ್ದಿದ್ದಾಳೆ. ಏರ್ ಲೈನ್ಸ್ ಹೋಟೆಲ್ ಬಳಿ ಫೆಬ್ರವರಿ 3 ರಂದು ಈ ಘಟನೆ ನಡೆದಿದೆ.

ಪ್ರವೀಣ್ ಕುತ್ತಿಗೆಯಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ಕದ್ದ ಮಹಿಳೆ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಾಕಿಂಗ್ ಹೋಗುತ್ತಿದ್ದ ವೃದ್ಧೆಯ ಸರ ಕಳ್ಳತನ: ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಆದರ್ಶ ನಗರದಲ್ಲಿ ವಾಕಿಂಗ್ ಹೋಗುತ್ತಿದ್ದ ವೃದ್ಧೆಯೊಬ್ಬರು ಸರ ಕಳ್ಳತನವಾಗಿದೆ. ಸೌಭಾಗ್ಯ(60) ಎಂಬುವವರ ಮಾಂಗಲ್ಯ ಸರ ಕಳ್ಳತನವಾಗಿದೆ. 60ಗ್ರಾಂ ತೂಕದ ಮಾಂಗಲ್ಯ ಸರ 2 ಲಕ್ಷಕ್ಕೂ ಹೆಚ್ಚು ಬೆಲೆಬಾಳುವತ್ತದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೌಡಿಶೀಟರ್​ನಿಂದ ಹಲ್ಲೆ: ಹಣಕಾಸು ವಿಚಾರದಲ್ಲಿ ರೌಡಿಶೀಟರ್​ ರಸ್ತೆಯಲ್ಲೇ ಹಲ್ಲೆ ನಡೆಸಿರುವ ಘಟನೆ  ಬೆಂಗಳೂರಿನ ಅಟ್ಟೂರು ಲೇಔಟ್​ನಲ್ಲಿ ನಡೆದಿದೆ. ರೌಡಿಶೀಟರ್​ ಶ್ರೀಕಾಂತ್​ ಚರಣ್​ರಾಜ್​ ಮೇಲೆ ಹಲ್ಲೆ ಮಾಡಿದ್ದಾನೆ. ಗೂಡ್ಸ್​ ​ವಾಹನಕ್ಕೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾನೆ. ಆರೋಪಿ ಪರವಾಗಿ ಮತ್ತೊಬ್ಬ ರೌಡಿಶೀಟರ್​​ ಧಮ್ಕಿ ಹಾಕಿದ್ದಾನೆ. ಈ ಬಗ್ಗೆ ಯಲಹಂಕ‌ ನ್ಯೂಟೌನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ

ಕುಂಕುಮಾರ್ಚನೆ ಮಾಡುವುದರ ಮಹತ್ವ ಮತ್ತು ಪ್ರಾಮುಖ್ಯತೆ, ಯಾವ ಬೆರಳಿನಿಂದ ಕುಂಕುಮ ಹಚ್ಚಬೇಕು, ಶಾಸ್ತ್ರ ಏನು ಹೇಳುತ್ತದೆ?

Weather Today: ಪಂಜಾಬ್, ದೆಹಲಿ ಸೇರಿ 15 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ

Published On - 8:52 am, Wed, 9 February 22

Follow Us
Web contact
Web contact

TV9 Kannada

Read More
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ