AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು

ಬಾಪಿ ಹಾಗೂ ಸ್ನೇಹಿತರು ಟೆರೇಸ್ ಮೇಲೆ ಹೋಗಿ​ ಕೇಕ್ ಕತ್ತರಿಸಲು ಕೇಕ್ ತಂದಿದ್ದರು. ಆದ್ರೆ ಕೇಕ್ ಕಟ್ ಮಾಡುವ ಮುನ್ನವೇ ಕುಡಿದ ಅಮಲಿನಲ್ಲಿದ್ದ ಬಾಪಿ ಕಟ್ಟಡದಿಂದ ಕೆಳ ಬಿದ್ದು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು
ಬಾಪಿ
TV9 Web
| Edited By: |

Updated on:Jan 01, 2023 | 12:55 PM

Share

ಬೆಂಗಳೂರು: ಹೊಸ ವರ್ಷದ ಪಾರ್ಟಿ ನಂತರ ಕಟ್ಟಡದಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ. ಒಡಿಶಾ ಮೂಲದ ಬಾಪಿ ಎಂಬ ಯುವಕ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ದಾಟಲು ಯತ್ನಿಸಿ ಕಟ್ಟಡದ 3ನೇ ಫ್ಲೋರ್​ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

ಮೃತ ಬಾಪಿ ಕಾಟನ್​ಬಾಕ್ಸ್​ ಸಿದ್ಧಪಡಿಸುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದ ರಾತ್ರಿ ಹೊಸ ವರ್ಷದ ಪಾರ್ಟಿ ಮಾಡಿದ ಯುವಕರು ಎರಡು ಕಟ್ಟಡಗಳ ನಡುವೆ ಹೋಗಿ ಬರಲು ಕಿಟಕಿ ಹೊಡೆದು ದಾರಿ ಮಾಡಿಕೊಂಡಿದ್ರು. ಆ ಕಿಟಕಿಯ ಮೂಲಕವೇ ನಿನ್ನೆ ಕಟ್ಟಡದ ಟೆರೇಸ್ ಮೇಲೆ ಹೋಗಿದ್ದರು. ಅದೇ ರೀತಿ ರಾತ್ರಿ ಪಾರ್ಟಿ‌ ಮಾಡೋದಕ್ಕೆ ಸಿದ್ದತೆ ಮಾಡಿಕೊಂಡಿ‌ದ್ದ ಬಾಪಿ ಹಾಗೂ ಸ್ನೇಹಿತರು ಟೆರೇಸ್ ಮೇಲೆ ಹೋಗಿ​ ಕೇಕ್ ಕತ್ತರಿಸಲು ಕೇಕ್ ತಂದಿದ್ದರು. ಆದ್ರೆ ಕೇಕ್ ಕಟ್ ಮಾಡುವ ಮುನ್ನವೇ ಕುಡಿದ ಅಮಲಿನಲ್ಲಿದ್ದ ಬಾಪಿ ಕಟ್ಟಡದಿಂದ ಕೆಳ ಬಿದ್ದು ಮೃತಪಟ್ಟಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಯುವಕನ ಮೇಲೆ ಹಾರಿದ ಗುಂಡು

ಶಿವಮೊಗ್ಗದ ವಿದ್ಯಾನಗರದಲ್ಲಿ ನಿನ್ನೆ ರಾತ್ರಿ ಹೊಸ ವರ್ಷಾಚರಣೆ ವೇಳೆ ಗುಂಡು ಹಾರಿಸುವಾಗ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಾಗೂ ಗುಂಡುಹಾರಿಸಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಜುನಾಥ್ ಓಲೇಕರ್ ಎಂಬುವವರ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಆಯೋಜಿಸಲಾಗಿತ್ತು. ರಾತ್ರಿ 12 ಗಂಟೆಗೆ ಓಲೇಕರ್ ಗಾಳಿಯಲ್ಲಿ ಗುಂಡುಹಾರಿಸಲು ಮುಂದಾಗಿದ್ದರು. ಈ ವೇಳೆ ಆಕಸ್ಮಿಕವಾಗಿ ವಿನಯ್​ ಎಂಬುವನಿಗೆ ಗುಂಡು ತಗುಲಿದೆ. ಗಂಭೀರ ಗಾಯಗೊಂಡ ವಿನಯ್​ಗೆ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಕ್​ಗೆ ಒಳಗಾದ ಮಂಜುನಾಥ್​ ಓಲೇಕರ್ ಸ್ಥಳದಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮಂಜುನಾಥ್ ಓಲೇಕರ್ ಅವರು ಪ್ರತಿವರ್ಷ ಹೊಸವರ್ಷವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಈ ವರ್ಷವೂ ಅದೇ ರೀತಿಯಲ್ಲಿ ಪಾರ್ಟಿ ಅರೆಂಜ್ ಆಗಿತ್ತು. ಓಲೇಕರ್ ಅವರ ಪುತ್ರ ಈ ಪಾರ್ಟಿಗೆ ವಿನಯ್ ಎಂಬವರನ್ನು ಕರೆದಿದ್ದರು. ಪಾರ್ಟಿ ನಡೆಯುತ್ತಿದ್ದಾಗ ಓಲೇಕರ್ ಅವರು ಬಂದೂಕಿಗೆ ಬುಲೆಟ್ ಲೊಡ್ ಮಾಡಿ ಫೈರ್ ಮಾಡಲು ಅಣಿಯಾಗಿದ್ದಾರೆ. ಈ ವೇಳೆ ಮಿಸ್ ಫೈರ್ ಆಗಿದ್ದು, ವಿನಯ್ ರ ಹೊಟ್ಟೆಗೆ ತಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:55 pm, Sun, 1 January 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ