Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಬಾಳಿಗೆ ಕಂಟಕವಾದ ಹೊಸ ಮೊಬೈಲ್; ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಾಯ

ಮೊಬೈಲ್ ಬ್ಲಾಸ್ಟ್(Mobile Blast)ಆಗಿ ಯುವಕನ ತೊಡೆಗೆ ಗಾಯವಾಗಿದೆ. ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​(1+) ಕಂಪನಿಯ ಮೊಬೈಲ್ ಖರೀದಿಸಿದ್ದರು. ಇದೀಗ ಇದ್ದಕ್ಕಿದ್ದಂತೆ ಬ್ಲಾಸ್ಟ್​ ಆಗಿದೆ.

ಯುವಕನ ಬಾಳಿಗೆ ಕಂಟಕವಾದ ಹೊಸ ಮೊಬೈಲ್; ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಾಯ
ಮೊಬೈಲ್​​ ಬ್ಲಾಸ್ಟ್​
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 03, 2024 | 4:25 PM

ಬೆಂಗಳೂರು, ಜ.03: ಯುವಕನೊಬ್ಬ ತೆಗೆದುಕೊಂಡ ಹೊಸ ಮೊಬೈಲ್ ಆತನ ಬಾಳಿಗೆಯೇ ಕಂಟಕವಾಗಿದೆ. ಮೊಬೈಲ್ ಬ್ಲಾಸ್ಟ್(Mobile Blast)ಆಗಿ ಯುವಕನ ತೊಡೆಗೆ ಗಾಯವಾಗಿದೆ. ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​(1+) ಕಂಪನಿಯ ಮೊಬೈಲ್ ಖರೀದಿಸಿದ್ದರು. ಅದರಂತೆ ಇಂದು ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್​ ಏಕಾಏಕಿ ಬ್ಲಾಸ್ಟ್ ಆಗಿದೆ.

ಮೆಡಿಕಲ್ ವೆಚ್ಚ, ಮೊಬೈಲ್ ಹಣ ಕೊಡ್ತೇವೆ ಅಂತಿರೋ ಶೋ ರೂಮ್ ಸಿಬ್ಬಂದಿ

ಇನ್ನು ಈ ಘಟನೆ ಮೊಬೈಲ್​ ಶೋ ರೂಂ ಗಮನಕ್ಕೆ ಬರುತ್ತಿದ್ದಂತೆ ‘ಈಗ ಮೆಡಿಕಲ್ ವೆಚ್ಚದ ಜೊತೆಗೆ ಮೊಬೈಲ್ ಹಣ ಕೊಡುತ್ತೇವೆ ಎನ್ನುತ್ತಿದ್ದಾರೆ. ಇತ್ತ ಸರ್ಜರಿಗೆ ಬರೋಬ್ಬರಿ 4 ಲಕ್ಷ ರೂ. ಖರ್ಚು ಆಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇದರಿಂದ ಪೂರ್ಣ ಪ್ರಮಾಣದ ಬಿಲ್ ಭರಿಸುವಂತೆ ಗಾಯಾಳು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಸಮಸ್ಯೆ ಹೇಳಿಕೊಳ್ಳಲು ಮೊಬೈಲ್ ಸೆಂಟರ್​ಗೆ ಹೋದ್ರೆ ಸರಿಯಾಗಿ ಸ್ಪಂದಿಸದ ಆರೋಪ ಕೂಡ ಕೇಳಿಬಂದಿದೆ.

ಇದನ್ನೂ ಓದಿ:ಎಚ್ಚರ: ಎಂದಿಗೂ ಹೀಗೆ ಮಾಡಿದಿರಿ: ನಿಮ್ಮ ಮೊಬೈಲ್ ಕೂಡ ಬ್ಲಾಸ್ಟ್ ಆಗಬಹುದು

ವಕೀಲರ ಮೊರೆ ಹೋಗಲು ಮುಂದಾದ ಗಾಯಾಳು ಯುವಕ

ವೈಟ್ ಫೀಲ್ಡ್​ನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಸಾದ್, ಈಗ ಮೊಬೈಲ್ ಬ್ಲಾಸ್ಟ್​ನಿಂದ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಕೆಲಸ ಇಲ್ಲದೇ ರೆಸ್ಟ್ ಮಾಡಿದ್ರೆ, ಹಣ ಯಾರು ಕೊಡುತ್ತಾರೆ ಎಂಬಂತಹ ಪ್ರಶ್ನೆ ಎದುರಾಗಿದೆ. ಈ ಹಿನ್ನಲೆ ಕಂಪನಿಯವರೇ ಸಂಪೂರ್ಣ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿತ್ತಿದ್ದು, ವಕೀಲರ ಮೊರೆ ಹೋಗಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ