AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಬಾಳಿಗೆ ಕಂಟಕವಾದ ಹೊಸ ಮೊಬೈಲ್; ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಾಯ

ಮೊಬೈಲ್ ಬ್ಲಾಸ್ಟ್(Mobile Blast)ಆಗಿ ಯುವಕನ ತೊಡೆಗೆ ಗಾಯವಾಗಿದೆ. ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​(1+) ಕಂಪನಿಯ ಮೊಬೈಲ್ ಖರೀದಿಸಿದ್ದರು. ಇದೀಗ ಇದ್ದಕ್ಕಿದ್ದಂತೆ ಬ್ಲಾಸ್ಟ್​ ಆಗಿದೆ.

ಯುವಕನ ಬಾಳಿಗೆ ಕಂಟಕವಾದ ಹೊಸ ಮೊಬೈಲ್; ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಾಯ
ಮೊಬೈಲ್​​ ಬ್ಲಾಸ್ಟ್​
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 03, 2024 | 4:25 PM

Share

ಬೆಂಗಳೂರು, ಜ.03: ಯುವಕನೊಬ್ಬ ತೆಗೆದುಕೊಂಡ ಹೊಸ ಮೊಬೈಲ್ ಆತನ ಬಾಳಿಗೆಯೇ ಕಂಟಕವಾಗಿದೆ. ಮೊಬೈಲ್ ಬ್ಲಾಸ್ಟ್(Mobile Blast)ಆಗಿ ಯುವಕನ ತೊಡೆಗೆ ಗಾಯವಾಗಿದೆ. ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​(1+) ಕಂಪನಿಯ ಮೊಬೈಲ್ ಖರೀದಿಸಿದ್ದರು. ಅದರಂತೆ ಇಂದು ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್​ ಏಕಾಏಕಿ ಬ್ಲಾಸ್ಟ್ ಆಗಿದೆ.

ಮೆಡಿಕಲ್ ವೆಚ್ಚ, ಮೊಬೈಲ್ ಹಣ ಕೊಡ್ತೇವೆ ಅಂತಿರೋ ಶೋ ರೂಮ್ ಸಿಬ್ಬಂದಿ

ಇನ್ನು ಈ ಘಟನೆ ಮೊಬೈಲ್​ ಶೋ ರೂಂ ಗಮನಕ್ಕೆ ಬರುತ್ತಿದ್ದಂತೆ ‘ಈಗ ಮೆಡಿಕಲ್ ವೆಚ್ಚದ ಜೊತೆಗೆ ಮೊಬೈಲ್ ಹಣ ಕೊಡುತ್ತೇವೆ ಎನ್ನುತ್ತಿದ್ದಾರೆ. ಇತ್ತ ಸರ್ಜರಿಗೆ ಬರೋಬ್ಬರಿ 4 ಲಕ್ಷ ರೂ. ಖರ್ಚು ಆಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇದರಿಂದ ಪೂರ್ಣ ಪ್ರಮಾಣದ ಬಿಲ್ ಭರಿಸುವಂತೆ ಗಾಯಾಳು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಸಮಸ್ಯೆ ಹೇಳಿಕೊಳ್ಳಲು ಮೊಬೈಲ್ ಸೆಂಟರ್​ಗೆ ಹೋದ್ರೆ ಸರಿಯಾಗಿ ಸ್ಪಂದಿಸದ ಆರೋಪ ಕೂಡ ಕೇಳಿಬಂದಿದೆ.

ಇದನ್ನೂ ಓದಿ:ಎಚ್ಚರ: ಎಂದಿಗೂ ಹೀಗೆ ಮಾಡಿದಿರಿ: ನಿಮ್ಮ ಮೊಬೈಲ್ ಕೂಡ ಬ್ಲಾಸ್ಟ್ ಆಗಬಹುದು

ವಕೀಲರ ಮೊರೆ ಹೋಗಲು ಮುಂದಾದ ಗಾಯಾಳು ಯುವಕ

ವೈಟ್ ಫೀಲ್ಡ್​ನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಸಾದ್, ಈಗ ಮೊಬೈಲ್ ಬ್ಲಾಸ್ಟ್​ನಿಂದ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಕೆಲಸ ಇಲ್ಲದೇ ರೆಸ್ಟ್ ಮಾಡಿದ್ರೆ, ಹಣ ಯಾರು ಕೊಡುತ್ತಾರೆ ಎಂಬಂತಹ ಪ್ರಶ್ನೆ ಎದುರಾಗಿದೆ. ಈ ಹಿನ್ನಲೆ ಕಂಪನಿಯವರೇ ಸಂಪೂರ್ಣ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿತ್ತಿದ್ದು, ವಕೀಲರ ಮೊರೆ ಹೋಗಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?