ಯುವಕನ ಬಾಳಿಗೆ ಕಂಟಕವಾದ ಹೊಸ ಮೊಬೈಲ್; ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಾಯ

ಮೊಬೈಲ್ ಬ್ಲಾಸ್ಟ್(Mobile Blast)ಆಗಿ ಯುವಕನ ತೊಡೆಗೆ ಗಾಯವಾಗಿದೆ. ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​(1+) ಕಂಪನಿಯ ಮೊಬೈಲ್ ಖರೀದಿಸಿದ್ದರು. ಇದೀಗ ಇದ್ದಕ್ಕಿದ್ದಂತೆ ಬ್ಲಾಸ್ಟ್​ ಆಗಿದೆ.

ಯುವಕನ ಬಾಳಿಗೆ ಕಂಟಕವಾದ ಹೊಸ ಮೊಬೈಲ್; ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಾಯ
ಮೊಬೈಲ್​​ ಬ್ಲಾಸ್ಟ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Jan 03, 2024 | 4:25 PM

ಬೆಂಗಳೂರು, ಜ.03: ಯುವಕನೊಬ್ಬ ತೆಗೆದುಕೊಂಡ ಹೊಸ ಮೊಬೈಲ್ ಆತನ ಬಾಳಿಗೆಯೇ ಕಂಟಕವಾಗಿದೆ. ಮೊಬೈಲ್ ಬ್ಲಾಸ್ಟ್(Mobile Blast)ಆಗಿ ಯುವಕನ ತೊಡೆಗೆ ಗಾಯವಾಗಿದೆ. ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​(1+) ಕಂಪನಿಯ ಮೊಬೈಲ್ ಖರೀದಿಸಿದ್ದರು. ಅದರಂತೆ ಇಂದು ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್​ ಏಕಾಏಕಿ ಬ್ಲಾಸ್ಟ್ ಆಗಿದೆ.

ಮೆಡಿಕಲ್ ವೆಚ್ಚ, ಮೊಬೈಲ್ ಹಣ ಕೊಡ್ತೇವೆ ಅಂತಿರೋ ಶೋ ರೂಮ್ ಸಿಬ್ಬಂದಿ

ಇನ್ನು ಈ ಘಟನೆ ಮೊಬೈಲ್​ ಶೋ ರೂಂ ಗಮನಕ್ಕೆ ಬರುತ್ತಿದ್ದಂತೆ ‘ಈಗ ಮೆಡಿಕಲ್ ವೆಚ್ಚದ ಜೊತೆಗೆ ಮೊಬೈಲ್ ಹಣ ಕೊಡುತ್ತೇವೆ ಎನ್ನುತ್ತಿದ್ದಾರೆ. ಇತ್ತ ಸರ್ಜರಿಗೆ ಬರೋಬ್ಬರಿ 4 ಲಕ್ಷ ರೂ. ಖರ್ಚು ಆಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇದರಿಂದ ಪೂರ್ಣ ಪ್ರಮಾಣದ ಬಿಲ್ ಭರಿಸುವಂತೆ ಗಾಯಾಳು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಸಮಸ್ಯೆ ಹೇಳಿಕೊಳ್ಳಲು ಮೊಬೈಲ್ ಸೆಂಟರ್​ಗೆ ಹೋದ್ರೆ ಸರಿಯಾಗಿ ಸ್ಪಂದಿಸದ ಆರೋಪ ಕೂಡ ಕೇಳಿಬಂದಿದೆ.

ಇದನ್ನೂ ಓದಿ:ಎಚ್ಚರ: ಎಂದಿಗೂ ಹೀಗೆ ಮಾಡಿದಿರಿ: ನಿಮ್ಮ ಮೊಬೈಲ್ ಕೂಡ ಬ್ಲಾಸ್ಟ್ ಆಗಬಹುದು

ವಕೀಲರ ಮೊರೆ ಹೋಗಲು ಮುಂದಾದ ಗಾಯಾಳು ಯುವಕ

ವೈಟ್ ಫೀಲ್ಡ್​ನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಸಾದ್, ಈಗ ಮೊಬೈಲ್ ಬ್ಲಾಸ್ಟ್​ನಿಂದ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಕೆಲಸ ಇಲ್ಲದೇ ರೆಸ್ಟ್ ಮಾಡಿದ್ರೆ, ಹಣ ಯಾರು ಕೊಡುತ್ತಾರೆ ಎಂಬಂತಹ ಪ್ರಶ್ನೆ ಎದುರಾಗಿದೆ. ಈ ಹಿನ್ನಲೆ ಕಂಪನಿಯವರೇ ಸಂಪೂರ್ಣ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿತ್ತಿದ್ದು, ವಕೀಲರ ಮೊರೆ ಹೋಗಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us