AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್​ಗೆ ಬೆಂಕಿ ಹಚ್ಚಿದ ಯುವಕ

ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ವಿಧಾನಸೌಧದ ಸಮೀಪ ತನ್ನ ಎಲೆಕ್ಟ್ರಿಕ್ ಬೈಕ್‌(Bike)ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಸದ್ಯ ಯುವಕನನ್ನು ಚಳ್ಳಕೆರೆ ಮೂಲದ ಪೃತ್ವಿರಾಜ್ ಎಂದು ಗುರುತಿಸಲಾಗಿದ್ದು, ವಿಧಾನಸೌಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್​ಗೆ ಬೆಂಕಿ ಹಚ್ಚಿದ ಯುವಕ
ವಿಧಾನಸೌಧದ ಮುಂದೆಯೇ ಬೈಕ್​ಗೆ ಬೆಂಕಿ ಹಚ್ಚಿದ ಯುವಕ
ಪ್ರಸನ್ನ ಗಾಂವ್ಕರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 14, 2024 | 7:45 PM

Share

ಬೆಂಗಳೂರು, ಆ.14: ವಿಧಾನಸೌಧದ ಸಮೀಪ ಎಲೆಕ್ಟ್ರಿಕ್ ಬೈಕ್‌(Bike)ಗೆ ಮಾಲೀಕನೇ ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಬಾಕಿ ಹಣ ಪಾವತಿಸಲು ಆಗದಿದ್ದಕ್ಕೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿತ್ತು. ಆದರೆ, ಇದೀಗ ಘಟನೆಗೆ ಅಸಲಿ ಕಾರಣ ತಿಳಿದು ಬಂದಿದ್ದು, ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ಬೈಕ್​ಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಕಿ ಹಚ್ಚಲು ಕಾರಣವೇನು?

ಚಳ್ಳಕೆರೆ ಮೂಲದ ಪೃತ್ವಿರಾಜ್ ಎಂಬ ಯುವಕ ಟ್ರಕ್ಕಿಂಗ್ ಹೋಗಿ ಮಿಸ್ಸಾಗಿದ್ದ. ಈ ಹಿನ್ನಲೆ ಗಾಬರಿಗೊಂಡ ಆತನ ತಾಯಿ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಪೃಥ್ವಿ ತಾಯಿಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಪೃಥ್ವಿ ಮೊಬೈಲ್ ಹಿಡಿದು ತಾಯಿ ಜತೆ ಠಾಣೆಗೆ ಹೋಗಿದ್ದನು. ನಾಪತ್ತೆ ದೂರು ಏಕೆ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದ್ದ, ಈ ವೇಳೆ ಪೊಲೀಸರು ಮೊಬೈಲ್ ಕಸಿದುಕೊಂಡು ಠಾಣೆಯೊಳಗೆ ಕರೆದೊಯ್ದಿದ್ದರು. ನಂತರ  ಪೊಲೀಸರ ಜತೆ ವಾಗ್ವಾದದ ವಿಡಿಯೋಗಳನ್ನು ವೈರಲ್ ಮಾಡಿದ್ದನು.

ಇದನ್ನೂ ಓದಿ:ಚಾಮರಾಜನಗರ: ವರದಕ್ಷಿಣೆ ನೀಡಿಲ್ಲವೆಂದು ಮಾವನ ಮನೆ ಮುಂದೆ ನಿಲ್ಲಿಸಿದ್ದ 2 ಬೈಕ್​ಗೆ ಬೆಂಕಿ ಹಚ್ಚಿದ ಅಳಿಯ

ವಿಧಾನಸೌಧ ಸ್ಪೋಟಿಸುವುದಾಗಿ ವಿಡಿಯೋ ಮಾಡಿದ್ದ ಪೃಥ್ವಿ

ಬಳಿಕ ಡಿಆರ್ ಡಿಓ, ಐಐಎಸ್ಸಿ, ವಿಧಾನಸೌಧ ಸ್ಪೋಟಿಸುವುದಾಗಿ ಪೃಥ್ವಿ ವಿಡಿಯೋ ಮಾಡಿದ್ದ. ಪೃಥ್ವಿರಾಜ್ ಬೆದರಿಕೆಯ ವಿಡಿಯೋ ವೈರಲ್ ಆಗಿತ್ತು. ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಪೃಥ್ವಿ ಕರೆಸಿ ಎಚ್ಚರಿಕೆ ನೀಡಿದ್ದರು. ಪೊಲೀಸರು ಮತ್ತು ತಹಸೀಲ್ದಾರ್ ಬಳಿ ಪೃಥ್ವಿ ತಪ್ಪೊಪ್ಪಿಗೆ ಪತ್ರ ನೀಡಿದ್ದ. ವಿಡಿಯೋ ಮಾಡಿ ತನ್ನ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಿದ್ದನು. ಕೆಲ ದಿನಗಳ ಬಳಿಕ ಮತ್ತೆ ಆಡಿಯೋ ವೈರಲ್ ಮಾಡಿದ್ದ. ಚಳ್ಳಕೆರೆ ಠಾಣೆ ಸತೀಶ್ ನಾಯ್ಕ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿ ಪಿಎಸ್ ಐ ಬಳಿಯಿದ್ದ ಪಿಸ್ತೂಲ್ ತೆಗೆದು ಶೂಟ್ ಮಾಡುತ್ತಿದ್ದೆ ಎಂದು ಆವಾಜ್ ಹಾಕಿದ್ದ. ದೂರು ಕೊಟ್ಟರೂ ಪಿಎಸ್ ಐ ಸತೀಶ್ ನಾಯ್ಕ್ ಮೇಲೆ ಕ್ರಮ ಕೈಗೊಂಡಿಲ್ಲವೇಕೆ ಎಂದು ಕಿಡಿಕಾರಿದ್ದ. ಮತ್ತೆ ಪೃಥ್ವಿ ಮತ್ತು ತಾಯಿಗೆ ಡಿವೈಎಸ್ಪಿ ರಾಜಣ್ಣ ಬುದ್ಧಿ ಹೇಳಿ ಕಳುಹಿಸಿದ್ದರು. ಇಂದು ಬೇಸರಗೊಂಡ  ಪೃತ್ವಿರಾಜ್,  ವಿಧಾನಸೌಧದ ಮುಂದೆಯೇ ಬೈಕ್​ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Wed, 14 August 24

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ