AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿ ಆಚರಣೆಯಲ್ಲಿ ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಯುವಕನ ಕೊಲೆ!

ಇಡೀ ದೇಶಾದ್ಯಂತ ನಿನ್ನೆ ಶಿವರಾತ್ರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕರ್ನಾಟಕದಲ್ಲಿಯೂ ಶಿವರಾತ್ರಿ ಆಚರಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ ಡ್ಯಾನ್ಸ್ ಮಾಡುವ ವೇಳೆ ದೇಹ ತಾಗಿತು ಎಂಬ ಸಣ್ಣ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಶಿವರಾತ್ರಿ ಆಚರಣೆಯಲ್ಲಿ ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಯುವಕನ ಕೊಲೆ!
ಬೆಂಗಳೂರಿನ ಗಿರಿನಗರದಲ್ಲಿ ಶಿವರಾತ್ರಿ ಆಚರಣೆಯಲ್ಲಿ ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಯುವಕನ ಕೊಲೆ!
Follow us
Jagadisha B
| Updated By: Rakesh Nayak Manchi

Updated on: Mar 09, 2024 | 3:53 PM

ಬೆಂಗಳೂರು, ಮಾ.9: ಇಡೀ ದೇಶಾದ್ಯಂತ ನಿನ್ನೆ ಶಿವರಾತ್ರಿ (Shivratri) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕರ್ನಾಟಕದಲ್ಲಿಯೂ ಶಿವರಾತ್ರಿ ಆಚರಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ (Bengaluru) ಡ್ಯಾನ್ಸ್ ಮಾಡುವ ವೇಳೆ ದೇಹ ತಾಗಿತು ಎಂಬ ಸಣ್ಣ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ (Murder) ಮಾಡಲಾಗಿದೆ. ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಯೋಗೇಶ್ (23) ಕೊಲೆಯಾದ ಯುವಕನಾಗಿದ್ದಾನೆ.

ಬೈಕ್ ಸರ್ವೀಸ್ ಸೆಂಟರ್​ನಲ್ಲಿ ಯೋಗೇಶ್ ವಾಷಿಂಗ್ ಕೆಲಸ ಮಾಡುತ್ತಿದ್ದ. ನಿನ್ನೆ ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ದೇಹ ತಾಗಿತೆಂಬ ವಿಚಾರವಾಗಿ ಗಲಾಟೆ ನಡೆದಿದೆ. ಬಳಿಕ ಡ್ಯಾನ್ಸ್ ಮುಗಿಸಿ ಶ್ರೀನಗರದ ತನ್ನ ಮನೆಗೆ ಬೈಕ್​ ಮೂಲಕ ಯೋಗೇಶ್ ಹೋಗುವಾಗ ನಾಲ್ವರು ಯುವಕರು ಹಿಂಬಾಲಿಸಿದ್ದಾರೆ.

ಇದನ್ನೂ ಓದಿ: ರಾಮನಗರ: 500 ರೂಪಾಯಿಗೆ ಯುವಕನ ಕೊಲೆ; ಮಲಗೋದಕ್ಕೆ ಜಾಗ ಕೊಟ್ಟು, ಹತ್ಯೆ ಮಾಡಿದವ ಅಂದರ್

ಬಳಿಕ ದಾಳಿ ನಡೆಸಿದ ನಾಲ್ವರು, ಚಾಕುವಿನಿಂದ ಯೋಗೀಶ್​ಗೆ ಚುಚ್ಚಿದ್ದಾರೆ. ಹಂತಕರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯೋಗೇಶ್ ಮನೆಯೊಂದರ ಕಾಂಪೌಂಡ್ ಹಾರಿದ್ದ. ಅಗ ಕಾಂಪೌಂಡ್​ಗೆ ಹಾಕಿದ್ದ ಗ್ಲಾಸ್ ಚುಚ್ಚಿರಬಹುದು ಎಂದು ಕೆಲವರು ಭಾವಿಸಿದ್ದರು. ಆದರೆ ಪೊಲೀಸರು ತನಿಖೆ ಮಾಡಿದಾಗ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡ ಬ್ಯಾಟರಾಯನಪುರ ಠಾಣಾ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ತನಿಖೆ ನಡೆಸಲಾಗುತ್ತಿದ್ದು, ಹಳೆ ದ್ವೇಷ ಏನು ಕೂಡ ಕಂಡು ಬಂದಿಲ್ಲ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ