AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮೆಟ್ರೋ ಬರುವಾಗ ಹಳಿಗೆ ಹಾರಿ ಯುವಕ ಆತ್ಮಹತ್ಯೆ; ರೈಲು ಸಂಚಾರ ಸ್ಥಗಿತ

Namma Metro : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಬರುವಾಗ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನ ಮೃತದೇಹ ರೈಲಿನಡಿ ಸಿಲುಕಿದ್ದು, ಅದನ್ನು ಹೊರತೆಗೆಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇದರಿಂದ ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸ್ಥಗಿತವಾಗಿದೆ.

ಬೆಂಗಳೂರು: ಮೆಟ್ರೋ ಬರುವಾಗ ಹಳಿಗೆ ಹಾರಿ ಯುವಕ ಆತ್ಮಹತ್ಯೆ; ರೈಲು ಸಂಚಾರ ಸ್ಥಗಿತ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣ
TV9 Web
| Edited By: |

Updated on:Mar 21, 2024 | 4:32 PM

Share

ಬೆಂಗಳೂರು, (ಮಾರ್ಚ್ 21): ನಮ್ಮ ಮೆಟ್ರೋ (Namma Metro) ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ (Self harming) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ದುರದೃಷ್ಟವಶಾತ್ ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಹಳಿಗೆ ಜಿಗಿದು ಪ್ರಾಣಕಳೆದುಕೊಂಡಿದ್ದಾನೆ. ಮೃತ ಯುವಕ ಯಾರು? ಯಾಕಾಗಿ ಆತ್ಮಹತ್ಯೆ ಮಾಡಿಕೊಂಡ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಾರಣಕ್ಕೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸಿಬ್ಬಂದಿ ಮೆಟ್ರೋದಿಂದ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. ಮಾರ್ಚ್ 21ರ ಮಧ್ಯಾಹ್ನ 2:10ರ ಸುಮಾರಿಗೆ ಹಳಿಗೆ ಹಾರಿದ್ದಾನೆ. ಈ ಬಗ್ಗೆ ಬಿಎಂಆರ್‌ಸಿಎಲ್‌ ಎಕ್ಸ್‌ ಮೂಲಕ ತಿಳಿಸಿದೆ.

ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಮೆಟ್ರೋ ಬರುತ್ತಿದ್ದುದನ್ನು ಗಮನಿಸಿದ ವ್ಯಕ್ತಿ ಟ್ರ್ಯಾಕ್​ಗೆ ಹಾರಿದ್ದಾನೆ. ಪರಿಣಾಮ ಮೆಟ್ರೋಗೆ ಸಿಲುಕೊಂಡು ಮೃತಪಟ್ಟಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ .ಎಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ವ್ಯಕ್ತಿಯ ಬಗ್ಗೆ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ಇದೇ ಮೊದಲ ಸಾವು

ಈ ರೀತಿ ಮೆಟ್ರೋ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವಿನ್ನಪ್ಪಿರುವುದು ಇದೇ ಮೊದಲ ಪ್ರಕರಣವಾಗಿದೆ. ಈ ಹಿಂದೆ ಹಳಿ ಮೇಲೆ ಜಿಗಿದಿರುವ ಪ್ರಕರಣಗಳು ನಡೆದಿದ್ದವು. ಆದ್ರೆ, ಯಾವುದೇ ಸಾವು-ನೋವು ಆಗಿರಲಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:28 pm, Thu, 21 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್