AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯನ್ನ ಸ್ನೇಹಿತೆ ರೂಮಿಗೆ ಕರೆದೊಯ್ದು ಕೊಲೆಗೈದ ಯುವಕ, ಆಗಿದ್ದೇನು?

ಯುವಕನೋರ್ವ ಯುವತಿಯೊಬ್ಬಳನ್ನು ತನ್ನ ಸ್ನೇಹಿತೆಯ ರೂಮಿಗೆ ಕರೆದುಕೊಂಡು ಹೋಗಿದ್ದಾನೆ. ಆದ್ರೆ, ಅಲ್ಲಿ ಏನಾಯ್ತೋ ಏನೋ ಯುವಕ, ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಆಂಧ್ರ ಪ್ರದೇಶ ಮೂಲದ ಯುವತಿ ವ್ಯಾಸಾಂಗ ಮಾಡಲೆಂದು ಬೆಂಗಳೂರಿಗೆ ಬಂದಿದ್ದವಳು ಅನ್ಯಾಯವಾಗಿ ಬಲಿಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಯುವತಿಯನ್ನ ಸ್ನೇಹಿತೆ ರೂಮಿಗೆ ಕರೆದೊಯ್ದು ಕೊಲೆಗೈದ ಯುವಕ, ಆಗಿದ್ದೇನು?
Devishree And Prem
ರಮೇಶ್ ಬಿ. ಜವಳಗೇರಾ
|

Updated on: Nov 24, 2025 | 3:51 PM

Share

ಬೆಂಗಳೂರು, (ನವೆಂಬರ್ 24): ಯುವಕನೋರ್ವ ಯುವತಿಯನ್ನ (Young Woman) ಸ್ನೇಹಿತೆ ರೂಂಗೆ ಕರೆದೊಯ್ದು ಕೊಲೆಗೈದಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ  ನಡೆದಿದೆ. ದೇವಿಶ್ರೀ (21) ಕೊಲೆಯಾದ ಯುವತಿ. ಮೂಲತಃ ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾಗಿರುವ ದೇವಿಶ್ರೀ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ದೇವಿಶ್ರೀ ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನ ಜೊತೆ ಸ್ನೇಹಿತೆ ರೂಂಗೆ ತೆರಳಿದ್ದಳು. ಅಲ್ಲಿ ಆಕೆಯನ್ನು ಕೊಲೆ ಮಾಡಿದ್ದು, ಇಂದು (ನವೆಂಬರ್ 24) ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಮೃತ ದೇವಿಶ್ರೀ ರೆಡ್ಡಪ್ಪ, ಜಗದಂಭ ದಂಪತಿಯ ಕೊನೆಯ ಮಗಳು. ಚೆನ್ನಾಗಿ ಓದಲಿ ಎಂದು ಪೋಷಕರು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ದರು. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಪ್ರೇಮ್ ವರ್ಧನ್‌ಗೆ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ. ಸದ್ಯ ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಚಟ್ಟ: ಆ ಒಂದು ವೀಡಿಯೋದಿಂದ 9 ವರ್ಷ ಬಳಿಕ ಬಯಲಾಯ್ತು ಪತ್ನಿಯ ಮಸಲತ್ತು

ಈ ಬಗ್ಗೆ ದೇವಿಶ್ರೀ ದೊಡ್ಡಮ್ಮ ಮಾತನಾಡಿ, ಮಗಳು ಇಲ್ಲಿಗೆ ಓದಲಿಕ್ಕೆ ಬಂದಿದ್ದಳು. ಭಾನುವಾರ ಬೆಳಗ್ಗೆ 11 ಗಂಟೆಗೆ ತಂದೆಯೊಂದಿಗೆ ಮಾತಾನಾಡಿದ್ದಾಳೆ. ಆಮೇಲೆ ಕಾಲ್ ಮಾಡಿದ್ರೂ ಪಿಕ್ ಮಾಡಿಲ್ಲ. ಅವಳ ಸ್ನೇಹಿತೆ ಕರೆ ಮಾಡಿ ರೂಂಗೆ ಕರೆಸಿಕೊಂಡಿದ್ದು, ಅಲ್ಲಿ ಏನಾಗಿದೆ ಗೊತ್ತಿಲ್ಲ. ನಮ್ಮ ಮಗಳ ಸಾವಿಗೆ ನ್ಯಾಯಬೇಕೆಂದು ಎಂದು ಆಗ್ರಹಿಸಿದ್ದಾರೆ.

ಇನ್ನು ಪ್ರೇಮ್ ವರ್ಧನ್ ದೇವಿಶ್ರೀಯನ್ನು ಏಕೆ ಕೊಲೆ ಮಾಡಿದ? ಇಬ್ಬರ ನಡುವೆ ಏನಿತ್ತು? ಕೊಲೆ ಮಾಡಲೆಂದೇ ಪ್ಲ್ಯಾನ್ ಮಾಡಿ ಸ್ನೇಹಿತೆ ರೂಮಿಗೆ ಕರೆದುಕೊಂಡು ಹೋಗಿದ್ನಾ ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿದ್ದು,ಈ ಬಗ್ಗೆ ಪೊಲೀಸರ ತನಿಖೆಯಲ್ಲಿ ಕೊಲೆಗೆ ನಿಖರ ಕಾರಣ ತಿಳಿದುಬರಬೇಕಿದೆ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ