AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಸಿಡ್​ ದಾಳಿಕೋರ ಸಿಕ್ಕಿಬಿದ್ದ! ಸ್ವಾಮೀಜಿ ವೇಷ ಧರಿಸಿಕೊಂಡಿದ್ದ ಆರೋಪಿ ನಾಗೇಶ ತಿರುವಣ್ಣಾಮಲೈನಲ್ಲಿ ಅರೆಸ್ಟ್​ ಆಗಿದ್ದು ಹೇಗೆ?

ಆರೋಪಿ ನಾಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. 16 ದಿನಗಳ ಬಳಿಕ ಕೊನೆಗೂ ನಾಗೇಶ್‌ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಆರೋಪಿ ನಾಗೇಶ್​ನನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆ್ಯಸಿಡ್​ ದಾಳಿಕೋರ ಸಿಕ್ಕಿಬಿದ್ದ! ಸ್ವಾಮೀಜಿ ವೇಷ ಧರಿಸಿಕೊಂಡಿದ್ದ ಆರೋಪಿ ನಾಗೇಶ ತಿರುವಣ್ಣಾಮಲೈನಲ್ಲಿ ಅರೆಸ್ಟ್​ ಆಗಿದ್ದು ಹೇಗೆ?
ಆರೋಪಿ ನಾಗೇಶ್
TV9 Web
| Edited By: |

Updated on:May 13, 2022 | 7:12 PM

Share

ಬೆಂಗಳೂರು: ಏ.28ರಂದು ಯುವತಿ ಮೇಲೆ ಌಸಿಡ್ ಎರಚಿ(Acid Attack) ಎಸ್ಕೇಪ್ ಆಗಿದ್ದ ಆರೋಪಿ ನಾಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. 16 ದಿನಗಳ ಬಳಿಕ ಕೊನೆಗೂ ನಾಗೇಶ್‌ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಆರೋಪಿ ನಾಗೇಶ್​ನನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಗೇಶ್, ಸುಂಕದಕಟ್ಟೆ ಯುವತಿಯ ಮೇಲೆ ಆ್ಯಸಿಡ್ ಎರಚಿ ಎಸ್ಕೇಪ್ ಆಗಿದ್ದ. ಸದ್ಯ 16 ದಿನಗಳ ಬಳಿಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿ ತಿರುವಣ್ಣಾಮಲೈನ ರಮಣಾ ಆಶ್ರಮದಲ್ಲಿ ಕಾವಿ ಬಟ್ಟೆ ಧರಿಸಿ ತಲೆಮರೆಸಿಕೊಂಡಿದ್ದ. ನಾನು ಸ್ವಾಮೀಜಿ ಎಂದು ಆಶ್ರಮದಲ್ಲಿ ಹೇಳಿಕೊಂಡಿದ್ದ. ಆಶ್ರಮದಲ್ಲಿ ಸಾವಿರಾರು ಜನರು ಇದ್ದಿದ್ದಕ್ಕೆ ನಾನು ಬಂದಿದ್ದೆ. ಆಶ್ರಮಕ್ಕೆ ಬಂದು ತಲೆಮರೆಸಿಕೊಂಡಿದ್ದಾಗಿ ಪೊಲೀಸರ ವಿಚಾರಣೆಯ ವೇಳೆ ನಾಗೇಶ್‌ ಮಾಹಿತಿ ನೀಡಿದ್ದಾನೆ.

ಭಕ್ತರ ಸೋಗಿನಲ್ಲಿ ಹೋಗಿ ಸ್ವಾಮೀಜಿ ವೇಷದಲ್ಲಿದ್ದ ಆರೋಪಿ ಬಂಧನ ಕಾವಿ ಬಟ್ಟೆ ಧರಿಸಿ ಆಶ್ರಮದಲ್ಲಿ ತಲೆಮರೆಸಿಕೊಂಡಿದ್ದ ನಾಗೇಶ್​ನನ್ನು ಹಿಡಿಯಲು ಭಕ್ತರ ವೇಷದಲ್ಲಿ ಮಫ್ತಿಯಲ್ಲಿ ಪೊಲೀಸರು ಆಶ್ರಮಕ್ಕೆ ತೆರಳಿದ್ದರು. ಭಕ್ತರ ವೇಷದಲ್ಲಿ ತೆರಳಿ ಸ್ವಾಮೀಜಿ ವೇಷದಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಆ್ಯಸಿಡ್ ದಾಳಿಯ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆರೋಪಿ ಆ್ಯಸಿಡ್ ನಾಗನ ಬಂಧನ ಕುರಿತು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ. ತಂಡಗಳನ್ನ ರಚಿಸಿ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿತ್ತು. ಆರೋಪಿ ಇದ್ದ ಜಾಗದ ಕುರಿತು ಖಚಿತ ಮಾಹಿತಿ ಸಿಕ್ಕಿದ್ದು ಕಾರ್ಯಚರಣೆ ನಡೆಸಿ ಬಂಧಿಸಲಾಗಿದೆ ಎಂದರು.

ಘಟನೆ ಹಿನ್ನೆಲೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಪ್ರೀತಿಸಿದ ಹುಡುಗಿಯ ಮೇಲೆ ಆರೋಪಿ ನಾಗೇಶ್ ಆ್ಯಸಿಡ್ ದಾಳಿ ನಡೆಸಿ ಎಸ್ಕೇಪ್ ಆಗಿದ್ದ. 23 ವರ್ಷದ ಸಂತ್ರಸ್ಥೆಯ ಮೇಲೆ ಸುಂಕದಕಟ್ಟೆಯ ಮುತ್ತೂಟು ಫಿನ್‌ಕಾರ್ಪ್‌ ಬಳಿ ಹುಚ್ಚು ಪ್ರೇಮಿ ನಾಗೇಶ್‌ ಆಸಿಡ್‌ ದಾಳಿ ನಡೆಸಿದ್ದ. ಮಾಹಿತಿಯ ಪ್ರಕಾರ ನಾಗೇಶ್‌ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆದ್ರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಳು. ತನಗೆ ಇಷ್ಟವಿಲ್ಲ ಎಂದು ಎಷ್ಟು ಬಾರಿ ಹೇಳಿದರೂ ಕೇಳಲು ನಾಗೇಶ್‌ ಸಿದ್ಧನಿರಲಿಲ್ಲ. ಯುವತಿ ಪ್ರೀತಿ ನಿರಾಕರಿಸಿದಾಗ ಆ್ಯಸಿಡ್‌ ಎರಚಿದ್ದ. ಸದ್ಯ ಆ್ಯಸಿಡ ದಾಳಿಗೊಳಗಾಗಿದ್ದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು ಐಸಿಯುನಿಂದ ಬರ್ನಿಂಗ್ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಚಿಕಿತ್ಸೆಗೆ ಸ್ಪಂದಿಸಿ ಚೇತರಿಕೆ ಕಾಣುತ್ತಿದ್ದಾರೆ.

Published On - 6:03 pm, Fri, 13 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್