AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನಭಾರತಿ ವಿವಿಯಲ್ಲಿ ಎಷ್ಟು ಮರ ಕಡಿಯಲಾಗುತ್ತಿದೆ? ಏಕೆ ಕೊಡಲಿ ಏಟು? ಕುಲಪತಿ ಸ್ಪಷ್ಟನೆ ಇಲ್ಲಿದೆ

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯಲ್ಲಿ 100 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಟ್ಟಡ ನಿರ್ಮಾಣಕ್ಕೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಕಟ್ಟಡ ನಿರ್ಮಾಣಕ್ಕಾಗಿ 282 ಮರಗಳನ್ನು ಕಡಿಯಲು ಪ್ರಸ್ತಾಪಿಸಲಾಗಿದೆ. ವಿಶ್ವವಿದ್ಯಾಲಯದ ಕುಲಪತಿಗಳು ಹೊಸ ಕೋರ್ಸ್‌ಗಳಿಗೆ ಹೆಚ್ಚುವರಿ ಸ್ಥಳಾವಕಾಶದ ಅಗತ್ಯವನ್ನು ಒತ್ತಿ ಹೇಳಿದ್ದಾರೆ ಮತ್ತು ಪರಿಸರ ಸಂರಕ್ಷಣೆ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಜ್ಞಾನಭಾರತಿ ವಿವಿಯಲ್ಲಿ ಎಷ್ಟು ಮರ ಕಡಿಯಲಾಗುತ್ತಿದೆ? ಏಕೆ ಕೊಡಲಿ ಏಟು? ಕುಲಪತಿ ಸ್ಪಷ್ಟನೆ ಇಲ್ಲಿದೆ
ಬೆಂಗಳೂರು ವಿಶ್ವವಿದ್ಯಾಲಯ
ವಿವೇಕ ಬಿರಾದಾರ
|

Updated on:Jun 27, 2025 | 3:42 PM

Share

ಬೆಂಗಳೂರು, ಜೂನ್​ 27: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ (Bangalore University Jnanabharathi) ಕ್ಯಾಂಪಸ್​ನಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಶೈಕ್ಷಣಿಕ ಕಟ್ಟಡ ನಿರ್ಮಾಣಕ್ಕೆ ಪರಿಸರವಾದಿಗಳಿಂದ ವಿರೋಧ ವ್ಯಕ್ತಪಡಿಸಿದ್ದಾರೆ. ಜ್ಞಾನಭಾರತಿ ಆವರಣದಲ್ಲಿ ಶೈಕ್ಷಣಿಕ ಕಟ್ಟಡ ನಿರ್ಮಾಣ ಮಾಡಲು 400ಕ್ಕೂ ಹೆಚ್ಚು ಮರಗಳನ್ನು ಕಡಿಯಲು ಬೆಂಗಳೂರು ವಿವಿ ಬಿಬಿಎಂಪಿಗೆ ಮನವಿ ಮಾಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ನಡೆಗೆ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕುಲಪತಿ ಜಯಕರ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಉಚ್ಛ ಶಿಕ್ಷಣ ಅಭಿಯಾನ (ಪಿಎಂ ಉಷಾ) ಯೋಜನೆಯಡಿ 100 ಕೋಟಿ ರೂಪಾಯಿ ಅನುದಾನ ಸಿಕ್ಕಿದೆ. ನಮ್ಮ ಕ್ಯಾಂಪಸ್​ನಲ್ಲಿ ಹಲವು ವಿಭಾಗಗಳು ಒಂದೇ ಕಟ್ಟಡದಲ್ಲಿ ಇವೆ. ಹೀಗಾಗಿ, ವಿಧ್ಯಾರ್ಥಿಗಳಿಗೆ ಅಗತ್ಯವಾದ ಸೌಲಭ್ಯ ನೀಡಲು ಆಗುತ್ತಿಲ್ಲ. ವಿಶ್ವವಿದ್ಯಾಲಯ ಕೂಡ ಇತ್ತೀಚೆಗೆ ಹೊಸ ಕೋರ್ಸ್​ಗಳನ್ನು ಕೂಡ ಈ ಬಾರಿ ಪರಿಚಯ ಮಾಡಿದ್ದೇವೆ. ಉದ್ದೇಶಿತ ಹೊಸ ಕಟ್ಟಡ 1 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣ ಆಗಲಿದೆ. ಹೀಗಾಗಿ ಎಷ್ಟು ಕಡಿಮೆ ಮರ ಕಡಿಯಬಹುದು ಯೋಚಿಸಿ ನಿರ್ಧಾರ ಮಾಡಿದ್ದೇವೆ ಎಂದರು.

ನಾವು ಏನು ಮಾಡೋಕೆ ಹೊರಟಿದ್ದೇವೆ ಎಂಬುದು ಜನರಿಗೆ ತಿಳಿಯಬೇಕು. 1,200 ಎಕರೆಯ ಈ ಜಾಗ ವಿವಿ ಶೈಕ್ಷಣಿಕ ಉದ್ದೇಶಕ್ಕೆ ಇರುವುದು. ಕ್ಯಾಂಪಸ್​ನಲ್ಲಿ ಲಕ್ಷಕ್ಕೂ ಹೆಚ್ಚಿನ ಗಿಡ ಮರಗಳಿವ. ಹೊಸ ಕಟ್ಟಡ ನಿರ್ಮಾಣ ಜಾಗದಲ್ಲಿ ಅರಣ್ಯ ಕಾಯ್ದೆಯನ್ನು ಪಾಲನೆ ಮಾಡುತ್ತೇವೆ. ಕಟ್ಟಡ ನಿರ್ಮಾಣ ಜಾಗ ಜೀವ ವೈವಿಧ್ಯ ಪಾರ್ಕ್ ಇಲ್ಲಿ ನಾವು ಒಂದು ಮರ ಕಡಿದರೆ ಹತ್ತು ಗಿಡ ನೆಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ
Image
ಹುಲಿಗಳ ಅಸಹಜ ಸಾವು: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
Image
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
Image
ಮಲೆಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು: ತನಿಖೆಗೆ ಸಚಿವರ ಆದೇಶ
Image
ಮಾದಪ್ಪನ ಸನ್ನಿಧಿಯಲ್ಲಿ ಹೆಚ್ಚಿದ ಗಾಂಜಾ ಘಾಟು: ಎಲ್ಲೆಂದರಲ್ಲಿ ಮದ್ಯದ ಪೌಚ್

419 ಮರಗಳನ್ನು ಕಡಿಯುತ್ತಿಲ್ಲ, 282 ಮರಗಳನ್ನು ಮಾತ್ರ ಕಡಿಯಲಾಗುತ್ತಿದೆ. ಅವುಗಳಲ್ಲಿ ಹೆಚ್ಚಿನವು ನೀಲಗಿರಿ ಮತ್ತು ಅಕೇಶಿಯ ಮರಗಳು. ಬಫರ್ ಜೋನ್​ನಲ್ಲಿರುವ 137 ಮರಗಳನ್ನು ಉಳಿಸುತ್ತೇವೆ ಎಂದರು.

ಏನಿದು ಶೈಕ್ಷಣಿಕ ಕಟ್ಟಡ?

ಬೆಂಗಳೂರು ವಿವಿ ಜ್ಞಾನಭಾರತಿ ಆವರಣದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಸ್ಥಳವಿದೆ. ಸದ್ಯ ಹೊಸ ಕೋರ್ಸ್​ಗಳನ್ನು ಪರಿಚಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಕೊಠಡಿಗಳ ಕೊರತೆ ಕೂಡ ಇದೆ. ಇದನ್ನು ನೀಗಿಸುವ ಸಲುವಾಗಿ ವಿಶ್ವವಿದ್ಯಾಲಯದ ಆವರಣದಲ್ಲಿ 1.25 ಲಕ್ಷ ಚದರ ಅಡಿ ವ್ಯಾಪ್ತಿಯಲ್ಲಿ ಶೈಕ್ಷಣಿಕ ಕಟ್ಟಡ ನಿರ್ಮಾಣ ಮಾಡಲು ವಿಶ್ವವಿದ್ಯಾಲಯ ಮುಂದಾಗಿದೆ.

ಇದನ್ನೂ ಓದಿ: ಕಾಏಕಿ ಶಾಪ್​ಗೆ ನುಗ್ಗಿ 2 ಕೋಟಿ ರೂ ದೋಚಿದ ದುಷ್ಕರ್ಮಿಗಳು

ಏನಿದು ಪಿಎಂ ಉಷಾ?

2013ರಲ್ಲಿ ಆರಂಭವಾದ ರಾಷ್ಟ್ರೀಯ ಉಚ್ಛ ಶಿಕ್ಷಣ ಅಭಿಯಾನ (ರೂಸಾ) ನಿಧಿಯನ್ನೇ 2023ರಲ್ಲಿ ಪ್ರಧಾನ ಮಂತ್ರಿ ಉಚ್ಛ ಶಿಕ್ಷಣ ಅಭಿಯಾನ (ಪಿಎಂ ಉಷಾ) ಎಂದು ಮರು ನಾಮಕರಣ ಮಾಡಲಾಗಿದೆ. ಆರು ವಿಷಯಗಳಲ್ಲಿ ಅನುದಾನ ನೀಡಲಾಗುತ್ತದೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Fri, 27 June 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ