AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ

ಕಡತ ವಿಲೇವಾರಿ ಮಾಡಲು ಪೀಠೋಪಕರಣ ಗುತ್ತಿಗೆದಾರರೊಬ್ಬರಿಂದ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಕೇಸ್​ ವರ್ಕರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ
ಭ್ರಷ್ಟಾಚಾರ ನಿಗ್ರಹ ದಳ
TV9 Web
| Edited By: |

Updated on: Oct 05, 2021 | 8:13 PM

Share

ಬೆಂಗಳೂರು: ಕಡತ ವಿಲೇವಾರಿ ಮಾಡಲು ಪೀಠೋಪಕರಣ ಗುತ್ತಿಗೆದಾರರೊಬ್ಬರಿಂದ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಥಮ ದರ್ಜೆ ಗುಮಾಸ್ತ ರಾಜು ಎಂಬುವವರು ಭ್ರಷ್ಟಾಚಾರ ನಿಗ್ರಹ ದಳದ (Anti Corruption Bureau – ACB) ಬಲೆಗೆ ಬಿದ್ದಿದ್ದಾರೆ. ಪೀಠೋಪಕರಣ ಗುತ್ತಿಗೆದಾರ ರಾಘವೇಂದ್ರ ಎಂಬುವವರ ಫೈಲ್ ಕ್ಲಿಯರ್​ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಬೆಂಗಳೂರು ಮಹಾನಗರಪಾಲಿಕೆಯಲ್ಲಿ ರಾಜು ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದರು. ಲಂಚದ ಹಣಕ್ಕೆ ರಾಜು ಬೇಡಿಕೆಯಿಟ್ಟಿದ್ದರು. ಈ ವಿಚಾರವನ್ನು ರಾಘವೇಂದ್ರ ಎಸಿಬಿ ಗಮನಕ್ಕೆ ತಂದಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ, ₹ 15 ಸಾವಿರ ಹಣ ಪಡೆಯುತ್ತಿರುವಾಗ ರಾಜು ಅವರನ್ನು ಬಂಧಿಸಿದರು.

ಅನೈತಿಕ ಸಂಬಂಧ: ಯುವಕನ ಕೊಲೆ ಹಲಸೂರು ಠಾಣಾ ವ್ಯಾಪ್ತಿಯ ಮರ್ಫಿ ಟೌನ್​ನಲ್ಲಿ‌ ಸೋಮವಾರ (ಅ.4) ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನ ತಾಯಿ ಮತ್ತು ಆಕೆಯ ಪ್ರಿಯಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಲೆಯಾದ ಯುವಕನನ್ನು ನಂದು (17) ಎಂದು ಗುರುತಿಸಲಾಗಿದೆ. ಶಕ್ತಿ ಎಂಬಾತನೊಂದಿಗೆ ನಂದು ತಾಯಿ ಗೀತಾ ಅನೈತಿಕ ಸಂಬಂಧ ಹೊಂದಿದ್ದರು. ಈ ಸಂಬಂಧಕ್ಕೆ ನಂದು ವಿರೋಧ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ನಂದುವಿನ ಹೊಟ್ಟೆ, ಎದೆಗೆ ಚಾಕುವಿನಿಂದ ಇರಿದು ಶಕ್ತಿ ಕೊಲೆ ಮಾಡಿದ್ದ

(ACB Arrests BBMP Case worker when receiving bribe for clearing file)

ಇದನ್ನೂ ಓದಿ: ನೀವು ವಾಸಿಸುವ ಏರಿಯಾದಲ್ಲಿ ಯಾವುದಾದರೂ ಕಟ್ಟಡ ಶಿಥಿಲಗೊಂಡಿದೆಯೇ? ಬಿಬಿಎಂಪಿಯನ್ನು ಸಂಪರ್ಕಿಸಿ

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳ ಏರಿಕೆ; ಬಿಬಿಎಂಪಿಯಿಂದ ಮನೆ ಮನೆ ಸಮೀಕ್ಷೆ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?