AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ

ಕಡತ ವಿಲೇವಾರಿ ಮಾಡಲು ಪೀಠೋಪಕರಣ ಗುತ್ತಿಗೆದಾರರೊಬ್ಬರಿಂದ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಕೇಸ್​ ವರ್ಕರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ
ಭ್ರಷ್ಟಾಚಾರ ನಿಗ್ರಹ ದಳ
TV9 Web
| Edited By: |

Updated on: Oct 05, 2021 | 8:13 PM

Share

ಬೆಂಗಳೂರು: ಕಡತ ವಿಲೇವಾರಿ ಮಾಡಲು ಪೀಠೋಪಕರಣ ಗುತ್ತಿಗೆದಾರರೊಬ್ಬರಿಂದ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಥಮ ದರ್ಜೆ ಗುಮಾಸ್ತ ರಾಜು ಎಂಬುವವರು ಭ್ರಷ್ಟಾಚಾರ ನಿಗ್ರಹ ದಳದ (Anti Corruption Bureau – ACB) ಬಲೆಗೆ ಬಿದ್ದಿದ್ದಾರೆ. ಪೀಠೋಪಕರಣ ಗುತ್ತಿಗೆದಾರ ರಾಘವೇಂದ್ರ ಎಂಬುವವರ ಫೈಲ್ ಕ್ಲಿಯರ್​ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಬೆಂಗಳೂರು ಮಹಾನಗರಪಾಲಿಕೆಯಲ್ಲಿ ರಾಜು ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದರು. ಲಂಚದ ಹಣಕ್ಕೆ ರಾಜು ಬೇಡಿಕೆಯಿಟ್ಟಿದ್ದರು. ಈ ವಿಚಾರವನ್ನು ರಾಘವೇಂದ್ರ ಎಸಿಬಿ ಗಮನಕ್ಕೆ ತಂದಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ, ₹ 15 ಸಾವಿರ ಹಣ ಪಡೆಯುತ್ತಿರುವಾಗ ರಾಜು ಅವರನ್ನು ಬಂಧಿಸಿದರು.

ಅನೈತಿಕ ಸಂಬಂಧ: ಯುವಕನ ಕೊಲೆ ಹಲಸೂರು ಠಾಣಾ ವ್ಯಾಪ್ತಿಯ ಮರ್ಫಿ ಟೌನ್​ನಲ್ಲಿ‌ ಸೋಮವಾರ (ಅ.4) ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನ ತಾಯಿ ಮತ್ತು ಆಕೆಯ ಪ್ರಿಯಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಲೆಯಾದ ಯುವಕನನ್ನು ನಂದು (17) ಎಂದು ಗುರುತಿಸಲಾಗಿದೆ. ಶಕ್ತಿ ಎಂಬಾತನೊಂದಿಗೆ ನಂದು ತಾಯಿ ಗೀತಾ ಅನೈತಿಕ ಸಂಬಂಧ ಹೊಂದಿದ್ದರು. ಈ ಸಂಬಂಧಕ್ಕೆ ನಂದು ವಿರೋಧ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ನಂದುವಿನ ಹೊಟ್ಟೆ, ಎದೆಗೆ ಚಾಕುವಿನಿಂದ ಇರಿದು ಶಕ್ತಿ ಕೊಲೆ ಮಾಡಿದ್ದ

(ACB Arrests BBMP Case worker when receiving bribe for clearing file)

ಇದನ್ನೂ ಓದಿ: ನೀವು ವಾಸಿಸುವ ಏರಿಯಾದಲ್ಲಿ ಯಾವುದಾದರೂ ಕಟ್ಟಡ ಶಿಥಿಲಗೊಂಡಿದೆಯೇ? ಬಿಬಿಎಂಪಿಯನ್ನು ಸಂಪರ್ಕಿಸಿ

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳ ಏರಿಕೆ; ಬಿಬಿಎಂಪಿಯಿಂದ ಮನೆ ಮನೆ ಸಮೀಕ್ಷೆ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ