AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿಯಿಂದ ಶಾಸಕ ಜಮೀರ್ ಅಹಮದ್ ಖಾನ್ ವಿಚಾರಣೆ: ನೂರಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಿದ ಅಧಿಕಾರಿಗಳು

ಇಂದು (ಆಗಸ್ಟ್ 6) ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಎಸಿಬಿ ವಿಚಾರಣೆಗೆ ಹಾಜರಾಗಿದ್ದು, ಮೊದಲ ವಿಚಾರಣೆಯಲ್ಲೇ ಅವರಿಗೆ ಎಸಿಬಿ ಅಧಿಕಾರಿಗಳು ನೂರಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಿದ್ದಾರೆ.

ಎಸಿಬಿಯಿಂದ ಶಾಸಕ ಜಮೀರ್ ಅಹಮದ್ ಖಾನ್ ವಿಚಾರಣೆ: ನೂರಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಿದ ಅಧಿಕಾರಿಗಳು
ಜಮೀರ್ ಅಹಮದ್ ಖಾನ್
TV9 Web
| Edited By: ವಿವೇಕ ಬಿರಾದಾರ|

Updated on:Aug 06, 2022 | 3:49 PM

Share

ಬೆಂಗಳೂರು: ಇಂದು (ಆಗಸ್ಟ್ 6) ಕಾಂಗ್ರೆಸ್ (Congress) ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಎಸಿಬಿ (ACB) ವಿಚಾರಣೆಗೆ ಹಾಜರಾಗಿದ್ದು, ಮೊದಲ ವಿಚಾರಣೆಯಲ್ಲೇ ಅವರಿಗೆ ಎಸಿಬಿ ಅಧಿಕಾರಿಗಳು ನೂರಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಿದ್ದಾರೆ. ಜಮೀರ್ ಅಹಮದ್ ಬೆಳಿಗ್ಗೆ 10:55ಕ್ಕೆ ವಿಚಾರಣೆಗೆ ಹಾಜರಾಗಿದ್ದು, ಈ ವೇಳೆ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿಯ ಮೂಲದ ಕುರಿತು ನೂರು ಪ್ರಶ್ನೆಗಳನ್ನು ಲಿಖಿತ ರೂಪದಲ್ಲಿ ಕೇಳಿದ್ದಾರೆ. ಉತ್ತರವನ್ನು ಬರೆದು ಕೊಡಲು ಎಸಿಬಿ ಅಧಿಕಾರಿಗಳು ಒಬ್ಬ ಸಿಬ್ಬಂದಿಯನ್ನು ನೀಡಿದ್ದಾರೆ.

ಈ ಸಂಬಂಧ ಬೆಂಗಳೂರಿನ ಎಸಿಬಿ ಕಚೇರಿ ಬಳಿ ಶಾಸಕ ಜಮೀರ್ ಮಾತನಾಡಿ ಸಮನ್ಸ್ ಮೂಲಕ ಎಸಿಬಿಯವರು ಕೆಲವು ದಾಖಲೆ ಕೇಳಿದ್ದರು. ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದ ದಾಖಲೆಗಳನ್ನು ಸಲ್ಲಿಸಿದ್ದೇನೆ. ಕಟ್ಟಡ ನಿರ್ಮಾಣ ಸಂಬಂಧ ದಾಖಲೆ ಕೇಳಿದ್ದರು, ಸಲ್ಲಿಸಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ , ಜಮೀರ್​ ಮಾತ್ರ ಅವರ ಕಣ್ಣಿಗೆ ಕಾಣಿಸುತ್ತಾರೆ. ಇಡಿಗೆ ನೀಡಿದ್ದ ದಾಖಲೆಗಳನ್ನು ಎಸಿಬಿ ಅಧಿಕಾರಿಗಳಿಗೆ ನೀಡಿದ್ದೇನೆ. ಅಗತ್ಯವಿದ್ದು ಮತ್ತೆ ಕರೆದರೆ ಎಸಿಬಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.

2 ತಿಂಗಳೊಳಗೆ ದಾಖಲೆ ಜೊತೆ ಹಾಜರಾಗಲು ಎಸಿಬಿ ಅಧಿಕಾರಿಗಳು ಜಮೀರ್ ಅಹಮದ್ ಖಾನ್ ಅವರಿಗೆ ಗಡುವು ನೀಡಿದ್ದಾರೆ. ಜಮೀರ್ ಅಹಮದ್​ ಖಾನ್ ಕೆಲವು ದಾಖಲೆಗಳನ್ನು ಮಾತ್ರ ಸಲ್ಲಿಸಿದ್ದು, ತನಿಖೆ ಭಾಗವಾಗಿ ಪ್ರಮುಖ ದಾಖಲೆ ಸಲ್ಲಿಸುವಂತೆ ಎಸಿಬಿ ಸೂಚನೆ ನೀಡಿದೆ.

Published On - 3:49 pm, Sat, 6 August 22

Follow Us
TV9 Web
TV9 Web

TV9 Kannada

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?