AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿಯಿಂದ ಶಾಸಕ ಜಮೀರ್ ಅಹಮದ್ ಖಾನ್ ವಿಚಾರಣೆ: ನೂರಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಿದ ಅಧಿಕಾರಿಗಳು

ಇಂದು (ಆಗಸ್ಟ್ 6) ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಎಸಿಬಿ ವಿಚಾರಣೆಗೆ ಹಾಜರಾಗಿದ್ದು, ಮೊದಲ ವಿಚಾರಣೆಯಲ್ಲೇ ಅವರಿಗೆ ಎಸಿಬಿ ಅಧಿಕಾರಿಗಳು ನೂರಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಿದ್ದಾರೆ.

ಎಸಿಬಿಯಿಂದ ಶಾಸಕ ಜಮೀರ್ ಅಹಮದ್ ಖಾನ್ ವಿಚಾರಣೆ: ನೂರಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಿದ ಅಧಿಕಾರಿಗಳು
ಜಮೀರ್ ಅಹಮದ್ ಖಾನ್
TV9 Web
| Edited By: |

Updated on:Aug 06, 2022 | 3:49 PM

Share

ಬೆಂಗಳೂರು: ಇಂದು (ಆಗಸ್ಟ್ 6) ಕಾಂಗ್ರೆಸ್ (Congress) ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಎಸಿಬಿ (ACB) ವಿಚಾರಣೆಗೆ ಹಾಜರಾಗಿದ್ದು, ಮೊದಲ ವಿಚಾರಣೆಯಲ್ಲೇ ಅವರಿಗೆ ಎಸಿಬಿ ಅಧಿಕಾರಿಗಳು ನೂರಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಿದ್ದಾರೆ. ಜಮೀರ್ ಅಹಮದ್ ಬೆಳಿಗ್ಗೆ 10:55ಕ್ಕೆ ವಿಚಾರಣೆಗೆ ಹಾಜರಾಗಿದ್ದು, ಈ ವೇಳೆ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿಯ ಮೂಲದ ಕುರಿತು ನೂರು ಪ್ರಶ್ನೆಗಳನ್ನು ಲಿಖಿತ ರೂಪದಲ್ಲಿ ಕೇಳಿದ್ದಾರೆ. ಉತ್ತರವನ್ನು ಬರೆದು ಕೊಡಲು ಎಸಿಬಿ ಅಧಿಕಾರಿಗಳು ಒಬ್ಬ ಸಿಬ್ಬಂದಿಯನ್ನು ನೀಡಿದ್ದಾರೆ.

ಈ ಸಂಬಂಧ ಬೆಂಗಳೂರಿನ ಎಸಿಬಿ ಕಚೇರಿ ಬಳಿ ಶಾಸಕ ಜಮೀರ್ ಮಾತನಾಡಿ ಸಮನ್ಸ್ ಮೂಲಕ ಎಸಿಬಿಯವರು ಕೆಲವು ದಾಖಲೆ ಕೇಳಿದ್ದರು. ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದ ದಾಖಲೆಗಳನ್ನು ಸಲ್ಲಿಸಿದ್ದೇನೆ. ಕಟ್ಟಡ ನಿರ್ಮಾಣ ಸಂಬಂಧ ದಾಖಲೆ ಕೇಳಿದ್ದರು, ಸಲ್ಲಿಸಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ , ಜಮೀರ್​ ಮಾತ್ರ ಅವರ ಕಣ್ಣಿಗೆ ಕಾಣಿಸುತ್ತಾರೆ. ಇಡಿಗೆ ನೀಡಿದ್ದ ದಾಖಲೆಗಳನ್ನು ಎಸಿಬಿ ಅಧಿಕಾರಿಗಳಿಗೆ ನೀಡಿದ್ದೇನೆ. ಅಗತ್ಯವಿದ್ದು ಮತ್ತೆ ಕರೆದರೆ ಎಸಿಬಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.

2 ತಿಂಗಳೊಳಗೆ ದಾಖಲೆ ಜೊತೆ ಹಾಜರಾಗಲು ಎಸಿಬಿ ಅಧಿಕಾರಿಗಳು ಜಮೀರ್ ಅಹಮದ್ ಖಾನ್ ಅವರಿಗೆ ಗಡುವು ನೀಡಿದ್ದಾರೆ. ಜಮೀರ್ ಅಹಮದ್​ ಖಾನ್ ಕೆಲವು ದಾಖಲೆಗಳನ್ನು ಮಾತ್ರ ಸಲ್ಲಿಸಿದ್ದು, ತನಿಖೆ ಭಾಗವಾಗಿ ಪ್ರಮುಖ ದಾಖಲೆ ಸಲ್ಲಿಸುವಂತೆ ಎಸಿಬಿ ಸೂಚನೆ ನೀಡಿದೆ.

Published On - 3:49 pm, Sat, 6 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ