AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎನಲ್ಲಿ 2,000 ಕೋಟಿಗೂ ಹೆಚ್ಚು ಅಕ್ರಮ! ಎಸಿಬಿ ತನಿಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು

ತನಿಖೆಯಲ್ಲಿ ಒಂದೇ ಊರಿನಲ್ಲಿ ಸುಮಾರು 185 ಕೋಟಿ ರೂಪಾಯಿ ಆಕ್ರಮ ನಡೆದಿರುವುದು ಬಯಲಾಗಿದೆ. ಕೆಂಗೇರಿ ಹೋಬಳಿಯ ಭೀಮನಕುಪ್ಪೆ ಗ್ರಾಮದ ಆರ್ಕಾವತಿ ಬಡಾವಣೆಯಲ್ಲಿ ಭಾರಿ ಆಕ್ರಮ ಬೆಳಕಿಗೆ ಬಂದಿದೆ.

ಬಿಡಿಎನಲ್ಲಿ 2,000 ಕೋಟಿಗೂ ಹೆಚ್ಚು ಅಕ್ರಮ! ಎಸಿಬಿ ತನಿಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು
ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
Follow us
TV9 Web
| Updated By: sandhya thejappa

Updated on:Feb 12, 2022 | 8:44 AM

ಬೆಂಗಳೂರು: ಬಿಡಿಎನಲ್ಲಿ (BDA) ಬರೋಬ್ಬರಿ 2,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದ್ದು, ಎಸಿಬಿ ತನಿಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ (Corruption) ಬಯಲಾಗಿದೆ. ಕಾರ್ನರ್ ಸೈಟ್, ಆಕ್ರಮ ಪರಭಾರೆ, ನಕಲಿ ಫಲಾನುಭವಿಗಳು ಹಾಗೂ ಬದಲಿ ನಿವೇಶನ ಹಂಚಿಕೆಯಲ್ಲಿ ಭಾರಿ ಆಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ. 3 ತಿಂಗಳ ಹಿಂದೆ ಬಿಡಿಎ ಮುಖ್ಯ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಎಸಿಬಿ ತಂಡ ಸಾಕಷ್ಟು ದಾಖಲೆಗಳನ್ನ ವಶಪಡಿಸಿಕೊಂಡಿತ್ತು.

ತನಿಖೆಯಲ್ಲಿ ಒಂದೇ ಊರಿನಲ್ಲಿ ಸುಮಾರು 185 ಕೋಟಿ ರೂಪಾಯಿ ಆಕ್ರಮ ನಡೆದಿರುವುದು ಬಯಲಾಗಿದೆ. ಕೆಂಗೇರಿ ಹೋಬಳಿಯ ಭೀಮನಕುಪ್ಪೆ ಗ್ರಾಮದ ಆರ್ಕಾವತಿ ಬಡಾವಣೆಯಲ್ಲಿ ಭಾರಿ ಆಕ್ರಮ ಬೆಳಕಿಗೆ ಬಂದಿದೆ. ಸರ್ಕಾರದ ಜಾಗವನ್ನೆ ಖಾಸಗಿ ಜಾಗ ಅಂತ ತೋರಿಸಿ ಅಧಿಕಾರಿಗಳು ಸರ್ಕಾರದಿಂದ ಪರಿಹಾರ ಪಡೆದಿದ್ದಾರೆ. ಸರ್ಕಾರಿ ಜಾಗಕ್ಕೆ ಸುಮಾರು 185 ಕೋಟಿ ರೂ. ಪರಿಹಾರ ಪಡೆದಿರುವುದು ಪತ್ತೆಯಾಗಿದೆ.

ಹಸಿರು ವಲಯಕ್ಕೆ ಒಳಪಡುವ ಹೆಣ್ಣೂರು ಬಳಿ ಗಾಲ್ಫ್ ಮೈದಾನದ ಹೆಸರಲ್ಲಿ ರಿಯಲ್ ಎಸ್ಟೇಟ್ ಕಂಪನಿ 460 ವಿಲ್ಲಾ ನಿರ್ಮಿಸಿದೆ. ಪ್ರತಿಷ್ಠಿತ 60 ನಿವೇಶನಗಳನ್ನು ಬಿಡಿಎ ಅಧಿಕಾರಿಗಳು ನುಂಗಿದ್ದಾರೆ. ಮುಂಜೂರಾಗದೆ ಉಳಿದಿರುವ 60 ನಿವೇಶನಗಳನ್ನ ಗುಳುಂ ಮಾಡಿದ್ದಾರೆ. ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಗುಳುಂ ಮಾಡಿದ್ದಾರೆ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ಅಲ್ಲದೆ ಈ ಅಕ್ರಮದಲ್ಲಿ 60 ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ 45 ಅಧಿಕಾರಗಳ ವಿರುದ್ಧ ಎಫ್ಐಆರ್ ದಾಖಲಿಸಲು ನಗರಾಭಿವೃದ್ಧಿ ಇಲಾಖೆ ಅನುಮತಿ ನೀಡಿದ್ದು, ಎಸಿಬಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ನಕಲಿ ದಾಖಲೆ ಮೂಲಕ ಕ್ರಯಪತ್ರವನ್ನು ತಯಾರಿಸುತ್ತಿದ್ದ ಆರೋಪಿಗಳ ವಿರುದ್ಧ ಎಫ್ಐಆರ್: ಜನವರಿ 25ಕ್ಕೆ ಬಿಡಿಎನಲ್ಲಿ ಅಕ್ರಮವೆಸಗಿದ ಸುಮಾರು 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಡಿಎಸ್ 3 ಅನಿಲ್ ಕುಮಾರ್, ಡಿಎಸ್ 4 ಎಸ್ ಎಮ್ ಮಂಗಳಾ, ಅನಿಲ್ ಕುಮಾರ್ ಸೇರಿ, ನಕಲಿ ಫಲಾನುಭವಿಗಳಾದ ಅಪ್ಪಯ್ಯಣ್ಣ, ಶ್ರೀನಿವಾಸರೆಡ್ಡಿ, ಕಮರುನ್ನೀಸಾ, ರುಕ್ಮಿಣಿ, ರಾಜೇಂದ್ರ, ಗುಲಾಬ್ ಜಾನ್, ಶಶಿಕುಮಾರ್, ಬಿಡಿಎ ಕೇಸ್ ವರ್ಕರ್ ವೆಂಕಟರಮಣಪ್ಪ, ಸಂಜಯ್ ಕುಮಾರ್, ಕಮಲಮ್ಮ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ

Valentines Day: ನಿಜವಾದ ಪ್ರೀತಿಯಂದ್ರೆ ಜನ್ಮ ಜನ್ಮಾಂತರಗಳ ಪ್ರೀತಿ, ಶಿವನನ್ನು ಪಡೆಯಲು ಕಠಿಣಾತಿ ಕಠಿಣ ತಪಸ್ಸುಗಳನ್ನು ಮಾಡಿದ್ದಳು ಪಾರ್ವತಿ

ಹಿಜಾಬ್​ ವಿಚಾರಕ್ಕೆ ತಲೆ ಹಾಕಿದ ಸೋನಂ ಕಪೂರ್​; ಇನ್ನೊಂದು ಧರ್ಮವನ್ನು ಪ್ರಶ್ನಿಸಿ ಟೀಕೆಗೆ ಗುರಿಯಾದ ನಟಿ

Published On - 8:43 am, Sat, 12 February 22

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ