AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ಟ್​ಪೆಕ್ಟರ್​ ಎಸಿಬಿ ಬಲೆಗೆ!

ಎಸಿಬಿ ಅಧಿಕಾರಿಗಳು ಇನ್ಸ್​ಪೆಕ್ಟರ್ ರಾಘವೇಂದ್ರ ಹಾಗೂ ಮಧ್ಯವರ್ತಿ ರಾಘವೇಂದ್ರನನ್ನು ಟ್ರ್ಯಾಪ್ ಮಾಡಿ ರೆಡ್​​ ಹ್ಯಾಂಡ್​ ಆಗಿ ಹಿಡಿದಿದ್ದಾರೆ.

2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ಟ್​ಪೆಕ್ಟರ್​ ಎಸಿಬಿ ಬಲೆಗೆ!
ಎಸಿಬಿ ಬಲೆಗೆ ಬಿದ್ದ ಇನ್ಸ್​ಪೆಕ್ಟರ್​ ರಾಘವೇಂದ್ರ
TV9 Web
| Edited By: |

Updated on:Sep 18, 2021 | 2:30 PM

Share

ಬೆಂಗಳೂರು: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ಪೆಕ್ಟರ್ (Inspector) ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಠಾಣೆ ಇನ್ಸ್​ಪೆಕ್ಟರ್ ರಾಘವೇಂದ್ರ ಎಂಬುವವರು ಜಮೀನು ತಕರಾರು ಸಂಬಂಧ 10 ಲಕ್ಷ ರೂ. ಹಣ ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಎರಡು ಬಾರಿ ತಲಾ ನಾಲ್ಕು ಲಕ್ಷ ಪಡೆದಿದ್ದರು. ಈಗಾಗಲೇ ಒಟ್ಟು 8 ಲಕ್ಷ ರೂ. ಲಂಚವನ್ನು ಇನ್ಸ್​ಪೆಕ್ಟರ್ ರಾಘವೇಂದ್ರ ಪಡೆದಿದ್ದಾರೆ. 3ನೇ ಬಾರಿ ಕೊನೆಯ ಕಂತಾಗಿ 2 ಲಕ್ಷ ರೂ. ಹಣ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಎಸಿಬಿ ಅಧಿಕಾರಿಗಳು ಇನ್ಸ್​ಪೆಕ್ಟರ್ ರಾಘವೇಂದ್ರ ಹಾಗೂ ಮಧ್ಯವರ್ತಿ ರಾಘವೇಂದ್ರನನ್ನು ಟ್ರ್ಯಾಪ್ ಮಾಡಿ ರೆಡ್​​ ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಐದು ಎಕರೆ ಜಮೀನು ತಕರಾರು ಸಂಬಂಧ ಇನ್ಸ್​ಪೆಕ್ಟರ್ ರಾಘವೇಂದ್ರ ಸುಮಾರು 10 ಲಕ್ಷ ರೂ. ಹಣವನ್ನು ಬೇಡಿಕೆ ಇಟ್ಟಿದ್ದರು. ಶಿವಶಂಕರ್ ಎಂಬುವವರಿಗೆ ಸೇರಿದ್ದ ಲ್ಯಾಂಡ್​ಗೆ ಸಂಬಂಧಿಸಿದ ವಿಚಾರಕ್ಕೆ ಹಣ ಬೇಡುಡಿಕೆ ಇಟ್ಟಿದ್ದರು. ಬೇಡಿಕೆ ಇಟ್ಟಿದ್ದ 10 ಲಕ್ಷ ರೂ. ಹಣದಲ್ಲಿ 8 ಲಕ್ಷ ರೂ. ಪಡೆದಿದ್ದರು. ಇನ್ನು ಎರಡು ಲಕ್ಷ ಹಣ ಬಾಕಿಯಿತ್ತು. ಎರಡು ಲಕ್ಷ ರೂ.ಹಣವನ್ನು ಪಡೆಯುವ ಹೊತ್ತಿಗೆ ಎಸಿಬಿ ಅಧಿಕಾರಿಗಳು ಇನ್ಸ್ಪೆಕ್ಟರ್ ರಾಘವೇಂದ್ರನನ್ನು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ.

ಸದ್ಯ ಎಸಿಬಿ ಅಧಿಕಾರಿಗಳು ಇನ್ಸ್​ಪೆಕ್ಟರ್ ರಾಘವೇಂದ್ರ ಹಾಗೂ ಮಧ್ಯವರ್ತಿ ರಾಘವೇಂದ್ರನನ್ನು ಬಂಧಿಸಿದ್ದು, ಲಂಚದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

ಸರಗಳ್ಳರ ಬಂಧನ ಬಸವೇಶ್ವರನಗರ ಠಾಣಾ ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಸರಗಳ್ಳರು ಅರೆಸ್ಟ್​ ಆಗಿದ್ದಾರೆ. ಕೋಲಾರದ ಮಂಜುನಾಥ(23), ಪ್ರಶಾಂತ(27) ಎಂಬುವವರು ಬಂಧನಕ್ಕೊಳಗಾದ ಸರಗಳ್ಳರು. ಆರೋಪಿಗಳು ಬೆಂಗಳೂರು ಹಾಗೂ ಕೋಲಾರದ ವಿವಿಧೆಡೆ ಸರ ಹಾಗೂ ಮನೆಗಳ್ಳತನ ಮಾಡಿದ್ದರು. ಆರೋಪಿಗಳ ಬಂಧನದಿಂದ 1 ಮನೆಗಳ್ಳತನ 4 ಸರಗಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಬಂಧಿತರಿಂದ 200 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ

ದೇವಸ್ಥಾನದಲ್ಲೂ ಡಿವೋರ್ಸ್​ ವಿಚಾರ; ಸಿಟ್ಟಾದ ಸಮಂತಾ ರಿಯಾಕ್ಷನ್​ ನೋಡಿ ಚಪ್ಪಾಳೆ ಹೊಡೆದ ಅಭಿಮಾನಿಗಳು

Sonu Sood: ನಟ ಸೋನು ಸೂದ್ ₹ 20 ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ: ಆದಾಯ ತೆರಿಗೆ ಇಲಾಖೆ

(ACB officials detained a chikkajala police who was receiving Rs 2 lakh bribe in Bengaluru)

Published On - 2:23 pm, Sat, 18 September 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್