AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ಟ್​ಪೆಕ್ಟರ್​ ಎಸಿಬಿ ಬಲೆಗೆ!

ಎಸಿಬಿ ಅಧಿಕಾರಿಗಳು ಇನ್ಸ್​ಪೆಕ್ಟರ್ ರಾಘವೇಂದ್ರ ಹಾಗೂ ಮಧ್ಯವರ್ತಿ ರಾಘವೇಂದ್ರನನ್ನು ಟ್ರ್ಯಾಪ್ ಮಾಡಿ ರೆಡ್​​ ಹ್ಯಾಂಡ್​ ಆಗಿ ಹಿಡಿದಿದ್ದಾರೆ.

2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ಟ್​ಪೆಕ್ಟರ್​ ಎಸಿಬಿ ಬಲೆಗೆ!
ಎಸಿಬಿ ಬಲೆಗೆ ಬಿದ್ದ ಇನ್ಸ್​ಪೆಕ್ಟರ್​ ರಾಘವೇಂದ್ರ
TV9 Web
| Edited By: |

Updated on:Sep 18, 2021 | 2:30 PM

Share

ಬೆಂಗಳೂರು: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ಪೆಕ್ಟರ್ (Inspector) ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಠಾಣೆ ಇನ್ಸ್​ಪೆಕ್ಟರ್ ರಾಘವೇಂದ್ರ ಎಂಬುವವರು ಜಮೀನು ತಕರಾರು ಸಂಬಂಧ 10 ಲಕ್ಷ ರೂ. ಹಣ ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಎರಡು ಬಾರಿ ತಲಾ ನಾಲ್ಕು ಲಕ್ಷ ಪಡೆದಿದ್ದರು. ಈಗಾಗಲೇ ಒಟ್ಟು 8 ಲಕ್ಷ ರೂ. ಲಂಚವನ್ನು ಇನ್ಸ್​ಪೆಕ್ಟರ್ ರಾಘವೇಂದ್ರ ಪಡೆದಿದ್ದಾರೆ. 3ನೇ ಬಾರಿ ಕೊನೆಯ ಕಂತಾಗಿ 2 ಲಕ್ಷ ರೂ. ಹಣ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಎಸಿಬಿ ಅಧಿಕಾರಿಗಳು ಇನ್ಸ್​ಪೆಕ್ಟರ್ ರಾಘವೇಂದ್ರ ಹಾಗೂ ಮಧ್ಯವರ್ತಿ ರಾಘವೇಂದ್ರನನ್ನು ಟ್ರ್ಯಾಪ್ ಮಾಡಿ ರೆಡ್​​ ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಐದು ಎಕರೆ ಜಮೀನು ತಕರಾರು ಸಂಬಂಧ ಇನ್ಸ್​ಪೆಕ್ಟರ್ ರಾಘವೇಂದ್ರ ಸುಮಾರು 10 ಲಕ್ಷ ರೂ. ಹಣವನ್ನು ಬೇಡಿಕೆ ಇಟ್ಟಿದ್ದರು. ಶಿವಶಂಕರ್ ಎಂಬುವವರಿಗೆ ಸೇರಿದ್ದ ಲ್ಯಾಂಡ್​ಗೆ ಸಂಬಂಧಿಸಿದ ವಿಚಾರಕ್ಕೆ ಹಣ ಬೇಡುಡಿಕೆ ಇಟ್ಟಿದ್ದರು. ಬೇಡಿಕೆ ಇಟ್ಟಿದ್ದ 10 ಲಕ್ಷ ರೂ. ಹಣದಲ್ಲಿ 8 ಲಕ್ಷ ರೂ. ಪಡೆದಿದ್ದರು. ಇನ್ನು ಎರಡು ಲಕ್ಷ ಹಣ ಬಾಕಿಯಿತ್ತು. ಎರಡು ಲಕ್ಷ ರೂ.ಹಣವನ್ನು ಪಡೆಯುವ ಹೊತ್ತಿಗೆ ಎಸಿಬಿ ಅಧಿಕಾರಿಗಳು ಇನ್ಸ್ಪೆಕ್ಟರ್ ರಾಘವೇಂದ್ರನನ್ನು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ.

ಸದ್ಯ ಎಸಿಬಿ ಅಧಿಕಾರಿಗಳು ಇನ್ಸ್​ಪೆಕ್ಟರ್ ರಾಘವೇಂದ್ರ ಹಾಗೂ ಮಧ್ಯವರ್ತಿ ರಾಘವೇಂದ್ರನನ್ನು ಬಂಧಿಸಿದ್ದು, ಲಂಚದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

ಸರಗಳ್ಳರ ಬಂಧನ ಬಸವೇಶ್ವರನಗರ ಠಾಣಾ ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಸರಗಳ್ಳರು ಅರೆಸ್ಟ್​ ಆಗಿದ್ದಾರೆ. ಕೋಲಾರದ ಮಂಜುನಾಥ(23), ಪ್ರಶಾಂತ(27) ಎಂಬುವವರು ಬಂಧನಕ್ಕೊಳಗಾದ ಸರಗಳ್ಳರು. ಆರೋಪಿಗಳು ಬೆಂಗಳೂರು ಹಾಗೂ ಕೋಲಾರದ ವಿವಿಧೆಡೆ ಸರ ಹಾಗೂ ಮನೆಗಳ್ಳತನ ಮಾಡಿದ್ದರು. ಆರೋಪಿಗಳ ಬಂಧನದಿಂದ 1 ಮನೆಗಳ್ಳತನ 4 ಸರಗಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಬಂಧಿತರಿಂದ 200 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ

ದೇವಸ್ಥಾನದಲ್ಲೂ ಡಿವೋರ್ಸ್​ ವಿಚಾರ; ಸಿಟ್ಟಾದ ಸಮಂತಾ ರಿಯಾಕ್ಷನ್​ ನೋಡಿ ಚಪ್ಪಾಳೆ ಹೊಡೆದ ಅಭಿಮಾನಿಗಳು

Sonu Sood: ನಟ ಸೋನು ಸೂದ್ ₹ 20 ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ: ಆದಾಯ ತೆರಿಗೆ ಇಲಾಖೆ

(ACB officials detained a chikkajala police who was receiving Rs 2 lakh bribe in Bengaluru)

Published On - 2:23 pm, Sat, 18 September 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ