AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣನ ಅಬ್ಬರದ ನಡುವೆಯೇ ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ, ಡಿಎಸ್ ನವೀನ್ ಜೋಸೆಫ್ ಕಚೇರಿಯಲ್ಲಿ ಹಣ ಜಪ್ತಿ

ಎಸಿಬಿ ಎಸ್ಪಿಗಳಾದ ಅಬ್ದುಲ್ ಅಹದ್, ಉಮಾ ಪ್ರಶಾಂತ್, ಯತೀಶ್ ಚಂದ್ರ ನೇತೃತ್ವದಲ್ಲಿ ಬಿಡಿಎ ಕಚೇರಿ ಮೇಲೆ ದಾಳಿ‌ ನಡೆದಿದ್ದು ಯಾವೊಬ್ಬ ಅಧಿಕಾರಿಯೂ ಕಚೇರಿಯಿಂದ ಹೊರ ಹೋಗದಂತೆ ಗೇಟ್ ಬಳಿ ಸಿಬ್ಬಂದಿಯನ್ನ ಕಾವಲಿಗಿಟ್ಟು ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಡಿಎ ಕಚೇರಿಯ ಮುಖ್ಯದ್ವಾರ ಬಂದ್ ಮಾಡಲಾಗಿದೆ.

ವರುಣನ ಅಬ್ಬರದ ನಡುವೆಯೇ ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ, ಡಿಎಸ್ ನವೀನ್ ಜೋಸೆಫ್ ಕಚೇರಿಯಲ್ಲಿ ಹಣ ಜಪ್ತಿ
ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
TV9 Web
| Edited By: |

Updated on:Nov 19, 2021 | 8:42 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರದ ನಡುವೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿ(BDA) ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಡಿಎ ಕಚೇರಿ ಮುಖ್ಯದ್ವಾರ ಬಂದ್ ಮಾಡಿ ಎಸಿಬಿ ಪರಿಶೀಲನೆ ನಡೆಸುತ್ತಿದೆ. 13 ವಾಹನಗಳಲ್ಲಿ ಬಂದಿರುವ 60ಕ್ಕೂ ಹೆಚ್ಚು ಅಧಿಕಾರಿಗಳು ನಾಲ್ಕು ತಂಡಗಳಾಗಿ ದಾಳಿ ಮಾಡಿದ್ದಾರೆ.

ಎಸಿಬಿ ಎಸ್ಪಿಗಳಾದ ಅಬ್ದುಲ್ ಅಹದ್, ಉಮಾ ಪ್ರಶಾಂತ್, ಯತೀಶ್ ಚಂದ್ರ ನೇತೃತ್ವದಲ್ಲಿ ಬಿಡಿಎ ಕಚೇರಿ ಮೇಲೆ ದಾಳಿ‌ ನಡೆದಿದ್ದು ಯಾವೊಬ್ಬ ಅಧಿಕಾರಿಯೂ ಕಚೇರಿಯಿಂದ ಹೊರ ಹೋಗದಂತೆ ಗೇಟ್ ಬಳಿ ಸಿಬ್ಬಂದಿಯನ್ನ ಕಾವಲಿಗಿಟ್ಟು ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಡಿಎ ಕಚೇರಿಯ ಮುಖ್ಯದ್ವಾರ ಬಂದ್ ಮಾಡಲಾಗಿದೆ. ಕಚೇರಿಯಿಂದ ಹೊರಗೆ ಹೋಗುವ ಪ್ರತಿಯೊಬ್ಬರ ಪರಿಶೀಲನೆ ನಡೆಸಲಾಗುತ್ತಿದೆ.

ಏಕಾಏಕಿ ದಾಳಿ ನಡೆದ ಹಿನ್ನೆಲೆ ಎಫ್ಡಿಎ, ಎಸ್ಡಿಎ, ಡಿಎಸ್ ಗಳು ಹಾಗೂ ಇತರ ಅಧಿಕಾರಿಗಳು ಸೇರಿದಂತೆ ನೌಕರರು ಗಾಬರಿಗೊಂಡಿದ್ದಾರೆ. ದಾಳಿ ನಡೆಸಿದ ಬೆನ್ನಲ್ಲೇ ಮೊಬೈಲ್ ಮತ್ತು ವ್ಯಾಲೆಟ್ ವಶಪಡಿಸಿಕೊಳ್ಳಲಾಗಿದೆ. ನೌಕರರ ಮೊಬೈಲ್ ಸ್ವಿಚ್ ಅಫ್ ಮಾಡಿಸಲಾಗಿದೆ. ಬಳಿಕ ಕಚೇರಿಯ ಒಳಗಿದ್ದ ಎಲ್ಲಾ ಕಡತಗಳನ್ನ ಒಂದು ಕಡೆ ಇಟ್ಟು ಪರಿಶೀಲನೆ ನಡೆಸಲಾಗುತ್ತಿದೆ.

ಬಿಡಿಎ ವಿರುದ್ಧ ವ್ಯಾಪಕ ದೂರು ಫಲಾನುಭವಿಗಳಿಗೆ ಸೈಟ್ ಹಂಚಿಕೆ, ಕಾರ್ನರ್ ಸೈಟ್ ಹಂಚಿಕೆ, ಅಲಾಟ್ ಆದ ಸೈಟ್ ದಾಖಲೆ ನೀಡದೆ ಲಂಚಕ್ಕಾಗಿ ಬೇಡಿಕೆ, ನಿವೇಶನ, ಫ್ಲ್ಯಾಟ್ ಹಂಚಿಕೆಯಲ್ಲೂ ಅವ್ಯವಹಾರ ಆರೋಪ, ಬ್ರೋಕರ್​ಗಳ ಮೂಲಕ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಸೇರಿ ಒಸಿ, ಅನುಮತಿ ಪತ್ರ, ಇ-ಸಿಡಿ, ಸರ್ಟಿಫಿಕೆಟ್​ಗಾಗಿ ಲಂಚ ನೀಡದಿದ್ದರೆ ಕೆಲಸ ಮಾಡಿಕೊಡದೆ ಅಲೆಸುತ್ತಿದ್ದರು ಎಂದು ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಭೂಸ್ವಾಧೀನ ವಿಭಾಗದ ಡಿಎಸ್, ಎಸಿಗಳ ಕಚೇರಿ, ಡಿಎಸ್ 1, 2, 3, 4 ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ.

ಎಸಿಬಿಯ ಐವರು ಡಿವೈಎಸ್ಪಿ, 12 ಇನ್ಸ್ಪೆಕ್ಟರ್ ಸೇರಿ 50ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಕಡತ ಪರಿಶೀಲನೆಯಲ್ಲಿ ತೊಡಗಿಕೊಂಡಿದೆ. ಬಿಡಿಎ ಡಿಎಸ್ ನವೀನ್ ಜೋಸೆಫ್ ಕಚೇರಿಯಲ್ಲಿ ಹಣ ಜಪ್ತಿ ಮಾಡಲಾಗಿದೆ. ಬಿಡಿಎ ಕಚೇರಿಯ 50ಕ್ಕೂ ಹೆಚ್ಚು ಕೊಠಡಿಗಳಲ್ಲಿ ಪರಿಶೀಲನೆ ಮುಂದುವರೆದಿದೆ. ಬಿಡಿಎ ಏಜೆಂಟ್ಸ್ ಬ್ಯಾಗ್, ಬ್ರೀಫ್ಕೇಸ್ ಸೇರಿದಂತೆ ಬಿಡಿಎ ಕಚೇರಿಯ ಇಂಚಿಂಚೂ ಕೂಡ ಅಧಿಕಾರಿಗಳು ಶೋಧಿಸ್ತಿದ್ದಾರೆ.

ಸದ್ಯ ಪರಿಶೀಲನೆ ವೇಳೆ ಕೆಲ ಪ್ರಾಜೆಕ್ಟ್​ಗಳ ಮಹತ್ವದ ಕಡತ ನಾಪತ್ತೆಯಾಗಿದೆ. ಬಿಡಿಎ ಕಚೇರಿಯಲ್ಲಿ ನಾಳೆಯೂ ತನಿಖೆ ಮುಂದುವರೆಯುವ ಸಾಧ್ಯತೆ ಇದೆ. ಎಸಿಬಿ ಅಧಿಕಾರಿಗಳು ದಾಖಲೆ ವಶಕ್ಕೆ ಪಡೆದು ಕಚೇರಿ ಲಾಕ್ ಮಾಡಲಿದ್ದಾರೆ.

ಇದನ್ನೂ ಓದಿ: ಅಪರೂಪ: ಸರ್ಕಾರಿ ಕೆಲಸಕ್ಕಾಗಿ ಲಂಚ ನೀಡಿದ್ದ ಮೂವರ ವಿರುದ್ಧ ಎಸಿಬಿಯಲ್ಲಿ ಎಫ್ಐಆರ್ ದಾಖಲಾಯ್ತು!

Published On - 7:01 pm, Fri, 19 November 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ